ಭೋವಿ ಸಮಾಜ ಒಡೆಯಲು ಸಚಿವ ಆಂಜನೇಯ ಯತ್ನ
Team Udayavani, Oct 4, 2017, 11:43 AM IST
ಬೆಂಗಳೂರು: ಭೋವಿ ಸಮಾಜವನ್ನು ಒಡೆದಾಳುವ ಕಾರ್ಯಕ್ಕೆ ಸಚಿವ ಆಂಜನೇಯ ಕೈಹಾಕಿದ್ದಾರೆ ಎಂದು ಭೋವಿ ಸಮುದಾಯದ ಭಾರತೀಯ ಒಡ್ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆಂಜನೇಯ ಅವರ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅ.8ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭೋವಿ ಸಮುದಾಯದ ಅಭಿವೃದ್ಧಿಗಾಗಿ ದುಡಿದವರಿಗೆ ಆಹ್ವಾನ ನೀಡದೆ ಕಡೆಗಾಣಿಸಲಾಗಿದೆ.
ಅಲ್ಲದೆ ಸರ್ಕಾರದ ಶಿಷ್ಟಾಚಾರವನ್ನೂ ಪಾಲಿಸದೆ ಅಗೌರವ ತೋರಲಾಗಿದೆ. ಇದರಲ್ಲಿ ಸಚಿವ ಆಂಜನೇಯ ಅವರ ಷ್ಯಡ್ಯಂತ್ರವಿದ್ದು, ಸದಾಶಿವ ಆಯೋಗ ವರದಿ ಜಾರಿಯ ಹುನ್ನಾರ ಅಡಗಿದೆ ಎಂದು ದೂರಿದರು. ಈ ವೇಳೆ ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷ ಚಂದ್ರಶೇಖರ, ರಾಯಚೂರು ಜಿಲ್ಲಾಧ್ಯಕ್ಷ ಕಾಶಿನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.