ಯುವ ನಟ ರಾಕೇಶ್ ಅಂತ್ಯಕ್ರಿಯೆ
Team Udayavani, Oct 4, 2017, 11:43 AM IST
ಬೆಂಗಳೂರು: ಅನಾರೋಗ್ಯದಿಂದ ಅಕಾಲಿಕ ಮರಣ ಹೊಂದಿದ ಯುವ ನಟ ರಾಕೇಶ್ ಅವರ ಅಂತ್ಯಕ್ರಿಯೆ ಇಂದು ಸುಮನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಅವರ ತಂದೆ, ತಾಯಿ ಸೇರಿದಂತೆ ಅಪಾರ ಬಂಧು ಬಳಗ ಹಾಗು ಸ್ನೇಹಿತರು ಈ ವೇಳೆ ಹಾಜರಿದ್ದರು.
ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ರಾಕೇಶ್ ಅವರು ಎರಡು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾಕೇಶ್ ಸೋಮವಾರ ಸಂಜೆ ಮೃತಪಟ್ಟಿದ್ದರು.
ಮಂಗಳವಾರ ಬೆಳಗ್ಗೆ ಮೂಡಲಪಾಳ್ಯದಲ್ಲಿರುವ ಅವರ ನಿವಾಸದ ಬಳಿ ರಾಕೇಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಪೂಜಾ ವಿಧಿವಿಧಾನ ಬಳಿಕ ಸುಮನಹಳ್ಳಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೂಡಲಪಾಳ್ಯ ನಿವಾಸಿಯಾಗಿದ್ದ ರಾಕೇಶ್ ಅವರ ತಾಯಿ ಆಶಾರಾಣಿ ಕೂಡ ನಟಿಯಾಗಿದ್ದರು.
ಎಸ್.ನಾರಾಯಣ್ ನಿರ್ದೇಶನದ “ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದ ರಾಕೇಶ್ ಬುಲ್ಲಿ ಪಾತ್ರದ ಮೂಲಕ ಗುರುತಿಸಿಕೊಂಡಿದ್ದರು. “ಪಪ್ಪುಸಿ ‘ ಎಂದು ಹೇಳುವ ಡೈಲಾಗ್ನಿಂದ ಎಲ್ಲರ ಅಚ್ಚುಮೆಚ್ಚಿನ ನಟ ಎನಿಸಿಕೊಂಡಿದ್ದರು. “ಭಜರಂಗಿ’, “ಬಂಧು ಬಳಗ’, “ಅಭಯ್’, “ಅರ್ಜುನ್’, “ಬಾಸ್’, “ಹುಡುಗರು’, “ಮೊದಲಾ ಸಲ’ ಸೇರಿದಂತೆ ಹಲವು ಚಿತ್ರಗಳಲ್ಲಿ ರಾಕೇಶ್ ಅಭಿನಯಿಸಿದ್ದರು. ಇತ್ತೀಚೆಗೆ ಅವರು “ಧೂಮಪಾನ’ ಎಂಬ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.