ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್
Team Udayavani, Oct 4, 2017, 11:45 AM IST
ಬೆಂಗಳೂರು: ಬಿಎಂಟಿಸಿ ಬಸ್ನ ಚಕ್ರ ಕಳಚಿದ ಘಟನೆ ಹಸಿಯಾಗಿರುವಾಗಲೇ ಕಸ್ತೂರಬಾ ರಸ್ತೆಯಲ್ಲಿ ಮಂಗಳವಾರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕನ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ನಲ್ಲಿದ್ದ 15 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆದರೆ, ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ನುಜ್ಜುಗುಜ್ಜಾಗಿದ್ದು, ನಿಗಮದ ಕ್ರೇನ್ ಸಹಾಯದಿಂದ ಕಾರ್ಯಾಗಾರಕ್ಕೆ ಸಾಗಿಸಲಾಯಿತು.
ಬೆಳಗ್ಗೆ 11ರ ಸುಮಾರಿಗೆ ಶಿವಾಜಿನಗರದಿಂದ ಕೆ.ಆರ್. ಮಾರುಕಟ್ಟೆ ಕಡೆಗೆ ಹೊರಟಿದ್ದ ಬಸ್ (ಕೆಎ-57, ಎಫ್-415), ಕಸ್ತೂರಬಾ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವರದಿಗೆ ಸೂಚನೆ: ಸ್ಥಳಕ್ಕೆ ಭೇಟಿ ನೀಡಿದ ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜ, ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು, ತಕ್ಷಣ ಕ್ರೇನ್ ತರಿಸಿ ಸ್ಥಳದಿಂದ ಬಸ್ ತೆರವುಗೊಳಿಸಿದರು. “ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬಸ್ ಪವರ್ ಸ್ಟೇರಿಂಗ್ ಹೊಂದಿದ್ದು, ಏಕಾಏಕಿ ಲಾಕ್ ಆಗಲು ಸಾಧ್ಯವಿಲ್ಲ.
ಹಾಗಾಗಿ, ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,’ ಎಂದು ನಾಗರಾಜ ತಿಳಿಸಿದರು. ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.