ಧನೋವಾ ಹೇಳಿಕೆಗೆ ಬೆದರಿದ ಪಾಕ್‌


Team Udayavani, Oct 7, 2017, 9:15 AM IST

Pakistan-Flag-700.jpg

ವಾಷಿಂಗ್ಟನ್‌/ಹೊಸದಿಲ್ಲಿ: ಯಾವುದೇ ಕಾರ್ಯಾಚರಣೆಗೂ ಭಾರತ ಸಿದ್ಧ ಎಂಬ ವಾಯುಪಡೆ ಮುಖ್ಯಸ್ಥ ಬಿ.ಎಸ್‌. ಧನೋವಾ ಹೇಳಿಕೆಯು ಪಾಕಿಸ್ಥಾನಕ್ಕೆ ಸರಿಯಾಗಿಯೇ ನಡುಕ ಹುಟ್ಟಿಸಿದೆ. ಇದರಿಂದ ಇರುಸು ಮುರುಸುಗೊಂಡಿರುವ ಪಾಕಿಸ್ಥಾನವು ಭಾರತಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.

ವಾಷಿಂಗ್ಟನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪಾಕ್‌ ವಿದೇಶಾಂಗ ಸಚಿವ ಖ್ವಾಜಾ ಆಸಿಫ್, ‘ಭಾರತವೇನಾದರೂ ನಮ್ಮ ನೆಲದಲ್ಲಿ ಸರ್ಜಿಕಲ್‌ ದಾಳಿ ನಡೆಸಿದರೆ ಅಥವಾ ನಮ್ಮ ಅಣ್ವಸ್ತ್ರ ಘಟಕಗಳ ಮೇಲೆ ದಾಳಿ ನಡೆಸಿದರೆ, ನಾವು ಸುಮ್ಮನಿರುವುದಿಲ್ಲ. ಅಂಥ ಸಂದರ್ಭದಲ್ಲಿ ಇಸ್ಲಾಮಾಬಾದ್‌ ಸೈರಣೆ ತೋರುತ್ತದೆ ಎಂದು ಯಾರು ಕೂಡ ನಿರೀಕ್ಷಿಸುವುದು ಬೇಡ’ ಎಂದು ಎಚ್ಚರಿಕೆ ಮಿಶ್ರಿತ ಧ್ವನಿಯಲ್ಲಿ ಹೇಳಿದ್ದಾರೆ. ಇದೇ ವೇಳೆ, ಭಾರತಕ್ಕೆ ಸಂಬಂಧಿಸಿದ ಇತರೆ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, “ಎರಡೂ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಸಿಕೊಳ್ಳಲು ನಾವು ಬಯಸುತ್ತೇವೆ. ಆದರೆ, ಭಾರತವು ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾಶ್ಮೀರದಲ್ಲಿನ ಪರಿಸ್ಥಿತಿಯು ಮಾತುಕತೆಗೆ ಅತಿದೊಡ್ಡ ತೊಡಕಾಗಿದೆ,’ ಎಂದಿದ್ದಾರೆ.

ರಸ್ತೆ ನಿರ್ಮಾಣ ಕುರಿತು ವಿವರ ನೀಡಿ: ಇದೇ ವೇಳೆ, ಗಡಿಯಲ್ಲಿ ಚೀನವು 500 ಸೈನಿಕರ ಭದ್ರತೆಯಲ್ಲಿ ರಸ್ತೆ ನಿರ್ಮಾಣ ಕಾರ್ಯ ಮುಂದುವರಿಸಿದೆ ಎಂಬ ವರದಿ ಗಳು ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಎದೆ ತಟ್ಟಿಕೊಳ್ಳುವ ಮೊದಲು, ಡೋಕ್ಲಾಂನಲ್ಲಿ ಚೀನ ರಸ್ತೆ ನಿರ್ಮಿಸುತ್ತಿರುವ ಕುರಿತು ವಿವರಣೆ ನೀಡಿ ಎಂದಿದ್ದಾರೆ.

ಉಗ್ರರ ವಿರುದ್ಧದ ಹೋರಾಟದಲ್ಲಿ ಸಹಕಾರ
ಇನ್ನೊಂದೆಡೆ, ಹೊಸದಿಲ್ಲಿಯಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷ ಡೊನಾಲ್ಡ್‌ ಫ್ರಾನ್ಸಿಸ್‌ಝೆಕ್‌ ಟಸ್ಕ್ ಹಾಗೂ ಐರೋಪ್ಯ ಆಯೋಗದ ಅಧ್ಯಕ್ಷ ಜೀನ್‌ ಕ್ಲಾಡ್‌ ಜಂಕರ್‌ ಶುಕ್ರವಾರ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಗ್ರರ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರದ ಕುರಿತು ಒಪ್ಪಂದ ಮಾಡಿಕೊಂಡಿದ್ದಾರೆ. ಉಗ್ರ ಹಫೀಜ್‌ ಸಯೀದ್‌, ಮುಂಬಯಿ ದಾಳಿ ಸಂಚುಕೋರ ಲಖ್ವೀ, ದಾವೂದ್‌ ಇಬ್ರಾಹಿಂ, ಲಷ್ಕರ್‌, ಜೆಇಎಂ, ಐಸಿಸ್‌ ಮತ್ತಿತರ ಉಗ್ರರು ಮತ್ತು ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಹಕಾರ ಮಾಡಿ ಕೊಂಡಿದ್ದೇವೆ ಎಂದು ಟಸ್ಕ್ ತಿಳಿಸಿದ್ದಾರೆ. ಇದೇ ವೇಳೆ, ಅಂತಾರಾಷ್ಟ್ರೀಯ ಸೌರ ಒಪ್ಪಂದ ಸೇರಿದಂತೆ 3 ಪ್ರಮುಖ ಒಪ್ಪಂದಗಳಿಗೆ ಸಹಿಯನ್ನೂ ಹಾಕಲಾಗಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.