ಚಿನ್ನಾಭರಣ ಖರೀದಿಗೆ ಶೀಘ್ರ ಹೊಸ ನಿಯಮ
Team Udayavani, Oct 9, 2017, 6:20 AM IST
ಹೊಸದಿಲ್ಲಿ: ಚಿನ್ನ ಮತ್ತು ಇತರ ಅಮೂಲ್ಯ ವಸ್ತುಗಳ ಖರೀದಿ ನಿಯಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಶೀಘ್ರವೇ ಹೊಸ ಮಿತಿ ಹೇರಲಿದೆ. ಹೀಗೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಹಸ್ಮುಕ್ ಅಧಿಯಾ ತಿಳಿಸಿದ್ದಾರೆ.
ಚಿನ್ನಾಭರಣ ಖರೀದಿ ವಹಿವಾಟು ವಿವರವನ್ನು ಅಕ್ರಮ ಹಣ ವರ್ಗಾವಣೆ ವ್ಯಾಪ್ತಿಯಲ್ಲಿ ತರದೇ ಇರಲು ಕೇಂದ್ರ ನಿರ್ಧರಿಸಿದೆ. ಶೀಘ್ರದಲ್ಲಿಯೇ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿನ ವ್ಯಾಪಾರೋದ್ದಿಮೆ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಬ್ಯಾಂಕ್ಗಳಲ್ಲಿ 50 ಸಾವಿರ ರೂ.ಮೇಲ್ಪಟ್ಟ ಹಣಕಾಸು ವಹಿವಾಟು ವಿವರಗಳನ್ನು ನೀಡಬೇಕು. ಬ್ಯಾಂಕ್ಗಳ ಮಾದರಿಯಲ್ಲಿಯೇ ಚಿನ್ನ ಖರೀದಿ ವಿವರವನ್ನೂ ನೀಡಬೇಕು ಎಂದು ಆ.23ರಂದು ಆದೇಶ ಹೊರಡಿಸಲಾಗಿತ್ತು.
ಇದೇ ಮೊದಲ ಬಾರಿಗೆ ಚಿನ್ನಾಭರಣ ವ್ಯಾಪಾರಿಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ತರಲಾಗಿದೆ ಎಂದು ಅಧಿಯಾ ಹೇಳಿದ್ದಾರೆ. ಪರಿಷ್ಕೃತ ನಿಯಮ ಪ್ರಕಾರ, ಈಗ 50 ಸಾವಿರ ರೂ.ಗಳಿಗಿಂತ ಮೇಲ್ಪಟ್ಟ ಚಿನ್ನಾಭರಣ ಖರೀದಿಗೆ ಪ್ಯಾನ್ ನಂಬರ್ ನೀಡಬೇಕಾಗಿಲ್ಲ. 2 ಕೋಟಿ ರೂ.ಗಳಿಂದ ಮೇಲ್ಪಟ್ಟ ಖರೀದಿಗೆ ಮಾತ್ರ ನೀಡಬೇಕು. ಆದರೆ, ಈ ಮಿತಿಯನ್ನು ಸದ್ಯದಲ್ಲೇ ಬದಲಾಯಿಸಲಾಗುವುದು ಎಂದು ಅಧಿಯಾ ಹೇಳಿದ್ದು, ಗುಜರಾತ್ ಚುನಾವಣೆ ಬಳಿಕವೇ ಮಿತಿ ಎಷ್ಟು ಎಂಬುದನ್ನು ಘೋಷಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.