ಪ್ರಜಾಪ್ರಭುತ್ವದ ಮೂಲಕವೇ ಕೋಮುವಾದದ ಸೋಲು
Team Udayavani, Oct 9, 2017, 11:55 AM IST
ಬೆಂಗಳೂರು: ಸಮಾಜವಾದವನ್ನು ಹತ್ತಿಕ್ಕುವ ಕೋಮುವಾದದ ಪ್ರಯತ್ನಗಳಿಗೆ ಪ್ರಜಾಪ್ರಭುತ್ವದ ಮೂಲಕವೇ ಸೋಲು ಕಾಣಿಸಬೇಕು ಎಂದು ಸಾಹಿತಿ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ. ಮರುಳಸಿದ್ದಪ್ಪ ಅಭಿಪ್ರಾಯಪಟ್ಟಿದ್ದಾರೆ.
ಸಮಾಜವಾದಿ ಕ್ರಾಂತಿ ಶತಮಾನೋತ್ಸವದ ಅಂಗವಾಗಿ ಶತಮಾನೋತ್ಸವ ಸಮಿತಿ ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಸಮಾಜವಾದ ಮತ್ತು ಕನ್ನಡ ಸಾಹಿತ್ಯ’ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬಡವರ, ಶೋಷಿತರ ಮತ್ತು ಶ್ರಮಿಕರ ಪರವಾಗಿ ಇರುವ ಸಮಾಜವಾದವನ್ನು ಹತ್ತಿಕ್ಕುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿದ್ದು, ಈ ಸಮಾಜವಾದವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸಮಾಜವಾದವು ಬಡವರ ಮತ್ತು ಶ್ರಮಿಕರ ಪರವಾಗಿತ್ತು. ಸಾಮ್ರಾಜ್ಯವಾದದ ಕುತಂತ್ರದಿಂದ ಸಮಾಜವಾದ ಸಂಘರ್ಷ ರಾಜಕಾರಣವಾಗಿ ಪರಿವರ್ತನೆಗೊಂಡಿದೆ. 20ನೇ ಶತಮಾನದಲ್ಲಿ ಸಮಾಜವಾದ ಬೇರೂರಿದ್ದರೂ, ಕ್ಷಿಪ್ರವಾಗಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆರಂಭದಲ್ಲಿ ವಿಶ್ವದ ಮೂರನೇ ಒಂದು ಭಾಗದ ಜನ ಸಮಾಜವಾದವನ್ನು ಒಪ್ಪಿದ್ದರು.
ಆದರೆ 21ನೇ ಶತಮಾನದಲ್ಲಿ 5ನೇ ಒಂದು ಭಾಗದ ಜನರಷ್ಟೇ ಸಮಾಜವಾದವನ್ನು ಒಪ್ಪಿಕೊಂಡಿದ್ದಾರೆ. ಈ ಶತಮಾನದಲ್ಲಿ ಸಮಾಜವಾದದ ಸದ್ಬಳಕೆ ಆಗಬೇಕು. ಕೋಮುವಾದದ ಸರ್ವಾಧಿಕಾರವನ್ನು ವಿರೋಧಿಸುವ ಎಲ್ಲರೂ ಒಟ್ಟಾಗಿ ಸಮಾಜವಾದದ ಬೆಂಬಲಕ್ಕೆ ನಿಲ್ಲಬೇಕು. ಪ್ರಗತಿಪರ ಚಳುವಳಿಗಳ ಬೆಳವಣಿಗೆ ಆದಾಗ ಮಾತ್ರ ಸಮಾಜವಾದದ ನಿಜವಾದ ಬದಲಾವಣೆ ಸಾಧ್ಯ ಎಂದರು.
ಸಿದ್ಧಾಂತಗಳಿಗೆ ಚಲನಶೀಲತೆ ಮುಖ್ಯ. ಚಲನಶೀಲ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಸಿದ್ದಾಂತಗಳು ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತವೆ. ಆರ್ಥಿಕ, ರಾಜಕೀಯ ಸಿದ್ಧಾಂತಗಳು ದೇಶದ ಪರಿಸ್ಥಿತಿಗೆ ಅನುಗುಣವಾಗಿ ಬದಲಾಗುತ್ತಿರುತ್ತವೆ. ಅದೇ ರೀತಿಯಲ್ಲಿ ಸಿದ್ದಾಂತಗಳೂ ಸಹ ಕಾಲಕ್ಕೆ ತಕ್ಕಂತೆ ಬದಲಾಗುತ್ತಿರಬೇಕು.
ಇಂದಿನ ಪ್ರಸ್ತುತತೆಯೊಂದಿಗೆ ಮಾರ್ಕ್ಸ್ವಾದ, ಅಂಬೇಡ್ಕರ್ ವಾದ, ಗಾಂಧಿವಾದ, ಲೋಹಿಯಾವಾದ ಚಲನಶೀಲ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆಯಿದೆ. ಕುವೆಂಪು, ತೇಜಸ್ವಿ, ದೇವನೂರು ಮಹದೇವ ಹೀಗೆ ಹಲವಾರು ಸಾಹಿತಿಗಳ ಸಾಹಿತ್ಯದಲ್ಲೂ ಸಮಾಜವಾದದ ವಿಚಾರಗಳಿವೆ. ಒಂದು ರೀತಿಯಲ್ಲಿ ಸಮಾಜವಾದವೇ ಹಕ್ಕುಗಳನ್ನು ಪಡೆದುಕೊಳ್ಳುವ ಆಸೆಯನ್ನು ಹುಟ್ಟಿ ಹಾಕಿದ್ದವು. ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜವಾದದ ಆಶಯವನ್ನು ಚುರುಕುಗೊಳಿಸುವ ಸಾಹಿತ್ಯ ರಚನೆಗೆ ಒತ್ತು ನೀಡಬೇಕಿದೆ ಎಂದು ಮರುಳಸಿದ್ದಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ, ಸಮುದಾಯ ಕರ್ನಾಟಕ ರಾಜ್ಯ ಸಮಿತಿಯ ವಾಸುದೇವ ಉಚ್ಚಿಲ್, ಕಮ್ಯುನಿಸ್ಟ್ ಪಕ್ಷದ ಮುಖಂಡರಾದ ಕೆ.ಎನ್. ಉಮೇಶ್, ಕೆ. ಪ್ರಕಾಶ್, ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.