ವಿಶ್ವ ಶಾಂತಿಗೆ ಮನ ಪರಿವರ್ತನೆ ಮುಖ್ಯ


Team Udayavani, Oct 9, 2017, 12:30 PM IST

hhu4.jpg

ಧಾರವಾಡ: ಕಾನೂನು ಮೂಲಕ ವಿಶ್ವದಲ್ಲಿ ಶಾಂತಿ ಸ್ಥಾಪಿಸುವುದು ಅಸಾಧ್ಯವಾಗಿದ್ದು, ಜನರ ಮನಪರಿವರ್ತನೆ ಅಗತ್ಯವಿದೆ ಎಂದು ಕಾನೂನು ವಿವಿಯ ಕುಲಪತಿ ಡಾ| ಸಿ.ಎಸ್‌. ಪಾಟೀಲ ಹೇಳಿದರು. ಇಲ್ಲಿಯ ಯಾಲಕ್ಕಿ ಶೆಟ್ಟರ ಕಾಲೋನಿಯ ಬಸವಶಾಂತಿ ಮಿಷನ್‌ ಸೌಹಾರ್ದ ಭವನದಲ್ಲಿ ರವಿವಾರ ಆಯೋಜಿಸಿದ್ದ ಶಾಸ್ತ್ರೀಯ ವಾದ್ಯಗಳ ಸಂಗೀತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 

ತೊಡಲು ವಸ್ತ್ರವೇ ಇಲ್ಲದ ಕಾಲಘಟ್ಟದಲ್ಲಿ ಅಣ್ವಸ್ತ್ರ ತಯಾರಿಕೆ ತುಂಬಾ ಅಪಾಯಕಾರಿ. ಇದರಿಂದ ಯಾರಿಗೂ ನೆಮ್ಮದಿ ಇಲ್ಲ. ಹೀಗಾಗಿ ವಿಶ್ವದ ಮನುಕುಲವೇ ಭಯ ಭೀತಿಯಲ್ಲಿದೆ. ವಿಶ್ವಶಾಂತಿಗೆ ರಾಷ್ಟ್ರಗಳು ಒಗ್ಗೂಡಬೇಕು. ಮನುಕುಲ ಭಯ ಹಾಗೂ ಹಸಿವು ಮುಕ್ತವಾದಾಗ ರಾಷ್ಟ್ರಗಳ ಅಭಿವೃದ್ಧಿ ಸಾಧ್ಯ. 

ವಿಶ್ವದ ಶಾಂತಿಗಾಗಿ ಬಸವಶಾಂತಿ ಮಿಷನ್‌ ಸಂಗೀತ ಸಮಾವೇಶ ಹಮ್ಮಿಕೊಂಡ ಕಾರ್ಯ ಶ್ಲಾಘನೀಯ. ಆಧುನಿಕ ಒತ್ತಡದ ಬದುಕಿನಿಂದ ಬಸವಳಿದ ಮನಕ್ಕೆ ಸಂಗೀತ ಆಲಿಕೆಯೇ ದಿವ್ಯ ಔಷಧ. ಸಂಗೀತಕ್ಕೆ ನೋವು ಮರೆಸುವ ಶಕ್ತಿಯಿದೆ ಎಂದರು. ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ಶಕ ಎಸ್‌.ಕೆ. ರಂಗಣ್ಣವರ ಮಾತನಾಡಿ, ಕಣ್ಣು ಕಾಣದ, ಕಿವಿ ಕೇಳದವರು ಸಂಗೀತದ ಮೂಲಕ ಜಗತ್ತಿಗೆ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.

ಸಂಗೀತ ಮನಸ್ಸುಗಳಿಗೆ ಆನಂದ ನೀಡುವುದರ ಜೊತೆಗೆ ಮನಸ್ಸಿನ ಕಲ್ಮಶಗಳನ್ನು ತೊಳೆಯುತ್ತದೆ ಎಂದು ಹೇಳಿದರು. ಜಗತ್ತಿನ ಯಾವುದೇ ಧರ್ಮ ಹಿಂಸೆ ಮಾಡುವಂತೆ ಹೇಳಿಲ್ಲ. ಬುದ್ಧ, ಅಂಬೇಡ್ಕರ್‌, ಮಹಾತ್ಮಗಾಂ ಧಿ ವಿಶ್ವದ ಶಾಂತಿಗೆ ಹಗಲಿರುಳು ದುಡಿದರು.

ಬಸವಣ್ಣ ವಚನಗಳ ಮೂಲಕ ಜನರನ್ನು ಎಚ್ಚರಿಸಿ, ಸಕಲ ಜೀವರಾಶಿಗಳಿಗೂ ಲೇಸು ಬಯಿಸಿದ ಪುಣ್ಯಾತ್ಮ ಎಂದರು. ಬೇಂದ್ರೆ ಟ್ರಸ್ಟ್‌ ಅಧ್ಯಕ್ಷ ಶಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸಿದ್ದರು. ಬಸವಶಾಂತಿ ಮಿಷನ್‌ ಅಧ್ಯಕ್ಷ ಮಹಾದೇವ ಹೊರಟ್ಟಿ ಮಾತನಾಡಿದರು.

ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ, ಬಸವ ಸಮಿತಿ ಸಂಕರ್ಪ ಅಧಿ ಕಾರಿ ಪಿ.ಎನ್‌. ರುದ್ರಪ್ಪ, ಸಾಹಿತಿ ರಂಜಾನ ದರ್ಗಾ, ಚಂದ್ರಕಾಂತ ಬೆಲ್ಲದ, ಫಾದರ್‌ ಪ್ರಶಾಂತ ಇದ್ದರು. ಡಾ| ಶಂಭು ಹೆಗಡಾಳ ಸ್ವಾಗತಿಸಿದರು. ಮಹಾದೇವಿ ದೊಡಮನಿ ನಿರೂಪಿಸಿದರು, ಡಾ| ಪ್ರೀಯಾ ಸರದೇಸಾಯಿ ವಂದಿಸಿದರು. ಹಿರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಜರುಗಿತು. 

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

Hubli: Siddaramaiah must resign if respect remains: Basavaraja Bommai

Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.