ತಹಶೀಲ್‌ ಕಚೇರಿ ಡಿಜಿಟಲ್‌


Team Udayavani, Oct 9, 2017, 12:30 PM IST

hhu2.jpg

ಹುಬ್ಬಳ್ಳಿ: ಆಡಳಿತದಲ್ಲಿ ಪಾರದರ್ಶಕತೆ, ಸಾರ್ವಜನಿಕರಿಗೆ ಕಾಲ ಮಿತಿಯಲ್ಲಿ ಸೇವೆ ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿ ತಹಶೀಲ್ದಾರ್‌ ಕಚೇರಿ ಸಂಪೂರ್ಣ ಡಿಜಿಟಲೀಕರಣ ಗೊಂಡಿದ್ದು, ಜನಸಾಮಾನ್ಯರಿಗೆ ಅವಶ್ಯವಿರುವ ಸಂಪೂರ್ಣ ಕಂದಾಯ ದಾಖಲೆಗಳು ಗಣಕೀಕರಣಗೊಂಡ ಕಚೇರಿ ಎಂಬ ಹೆಗ್ಗಳಿಕೆ ಗಳಿಸಿದೆ.

ದಾಖಲೆಗಳನ್ನು ತಿರುಚುವುದು, ಹಳೆಯ ದಾಖಲೆ ಹುಡುಕಲು ವಿಳಂಬ, ದಾಖಲೆಗಳ ನಾಶ, ನಕಲಿ ದಾಖಲೆಗಳ ಸೃಷ್ಟಿ ಸೇರಿದಂತೆ ಇತರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರಾತ್ಮಾಕವಾಗಿ ಜನಸಾಮಾನ್ಯರಿಗೆ ಅವಶ್ಯರುವ ಸಂಪೂರ್ಣ ಭೂ ದಾಖಲೆಗಳನ್ನು ಗಣಕೀರಣಗೊಳಿಸಿದ ಖ್ಯಾತಿಯನ್ನು ಹುಬ್ಬಳ್ಳಿ ತಹಶೀಲ್ದಾರ ಕಚೇರಿ ಗಳಿಸಿದೆ. 

ಶಶಿಧರ ಮಾಡ್ಯಾಳ ಮುತುವರ್ಜಿಯಿಂದ ಖಾಸಗಿಯವರಿಂದ ನೆರವು ಪಡೆದು ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಜನರಿಗೆ ಅಗತ್ಯವಿರುವ ಸುಮಾರು 9.80 ಲಕ್ಷ ಪ್ರತಿಗಳು ಡಿಜಿಟಲೀಕರಣಗೊಂಡಿವೆ. 1930 ರಿಂದ 2001ರ ವರೆಗಿನ ಪಹಣಿ, ಜನನ-ಮರಣ ಪ್ರಮಾಣ ಪತ್ರ ಸೇರಿದಂತೆ ಹಳೇ ದಾಖಲೆಗಳು ಇದೀಗ ಕ್ಷಣಾರ್ಧದಲ್ಲೇ ಅರ್ಜಿದಾರರಿಗೆ ದೊರೆಯಲಿವೆ.

ಒಂದೇ ದಿನಕ್ಕೆ ದಾಖಲೆ: ಬ್ಯಾಂಕ್‌ ಸಾಲ, ಭೂ ಪರಿವರ್ತನೆ, ಕೃಷಿ ಸಾಲ, ಹಕ್ಕು ಪ್ರಾಪ್ತಿ ಸೇರಿದಂತೆ ಹಲವು ಕೆಲಸಗಳಿಗೆ ಬೇಕಾದ ಅಗತ್ಯದಾಖಲೆಗಳನ್ನು ಪಡೆಯುವುದು ತೀರ ಸುಲಭವಾಗಿದೆ. ಅರ್ಜಿ ಸಲ್ಲಿಸಿ ಒಂದು ದಾಖಲೆಗಾಗಿ ನಾಲ್ಕೈದು ಬಾರಿ ಕಚೇರಿಗೆ ಅಲೆಯುವುದು ತಪ್ಪಿದಂತಾಗಿದೆ.

ದಾಖಲೆ ನೀಡಲು ವಿಳಂಬ ಮಾಡುತ್ತಿದ್ದ ಸಿಬ್ಬಂದಿ ಇನ್ನು ಮುಂದೆ ಯಾವುದೇ ಸಬೂಬು ನೀಡಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ಡಿಜಿಟಲೀಕರಣ ಆಗಿರುವುದರಿಂದ ಅರ್ಜಿ ಸಲ್ಲಿಸಿದ ದಿನವೇ ಬೇಕಾದ ದಾಖಲಾತಿಗಳು ಅರ್ಜಿದಾರನಿಗೆ ದೊರೆಯುವಂತಾಗಿದೆ.

ಆಡಳಿತ ಸರಳ: ಡಿಜಿಟಲೀಕರಣ ಗೊಂಡಿರುವುದರಿಂದ ಆಡಳಿತದಲ್ಲಿ ಕೂಡ ಸಾಕಷ್ಟು ಬದಲಾವಣೆಯಾಗಿದೆ. ಹಳೆ  ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದಾಗ ತಿಂಗಳು ಕಾಲ ದಾಖಲೆ ಹುಡುಕಾಟಕ್ಕೆ ಬೇಕಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಕೆಲ ಸಿಬ್ಬಂದಿ ಸಮಯಾವಕಾಶ ಬೇಕಾಗುತ್ತದೆ ಎಂದು ಜಾರಿಗೊಳ್ಳುತ್ತಿದ್ದರು. ಇದೀಗ ಬೆರಳ ತುದಿಯಲ್ಲೇ ಮಾಹಿತಿ ದೊರೆಯುವುದರಿಂದ ಹಳೆಯ ದಾಖಲೆಗಳನ್ನು ಹುಡುಕುವ  ಕಾರ್ಯದಿಂದ ಸಿಬ್ಬಂದಿ ಮುಕ್ತರಾಗಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಕಾರ್ಯಭಾರ ಕೂಡ ಕಡಿಮೆಯಾಗಿದೆ.

ದಾಖಲೆಗಳ ನಾಶ: 1930ನೇ ಇಸ್ವಿಯ ದಾಖಲೆಗಳನ್ನು ಕಾಪಾಡಿಕೊಳ್ಳುವುದು ಸುಲಭದ ಕಾರ್ಯವಲ್ಲ. ಅಗತ್ಯ  ದಾಖಲೆಗಳು ನಾಶವಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಮೂಲ ದಾಖಲೆಗಳನ್ನು ಹಾಳಾಗಾದಂತೆ ಇಡುವುದು ಅಧಿಕಾರಿಗಳಿಗೆ ದೊಡ್ಡ ಸವಾಲಿನ ಕೆಲಸವಾಗಿತ್ತು. 

ಬೆಂಕಿ ಅವಘಡದಿಂದ ದಾಖಲೆಗಳು ನಾಶವಾಗಿರುವ ಅನೇಕ ಉದಾಹರಣೆಗಳಿವೆ. ಇದೀಗ ಡಿಜಿಟಲೀಕರಣ ಆಗಿರುವುದರಿಂದ ಯಾವುದೇ ಕಾರಣಕ್ಕೂ ದಾಖಲೆಗಳನ್ನು ನಾಶ ಪಡಿಸಲು ಸಾಧ್ಯವಿಲ್ಲ.  ಗಣಕೀಕೃತಗೊಂಡ ದಾಖಲೆಗಳನ್ನು ನೀಡಲು ಓರ್ವ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹೀಗಾಗಿ ದಾಖಲೆಗಳನ್ನು ತಿರುಚುವುದು ಅಥವಾ ನಾಶಪಡಿಸಲು ಸಾಧ್ಯವಿಲ್ಲ. ಸಲ್ಲಿಸಿದ ಅರ್ಜಿಗೆ ಪೂರಕವಾದ ದಾಖಲೆಗಳನ್ನು ನೀಡುವುದನ್ನು ಬಿಟ್ಟು ಹೆಚ್ಚುವರಿ ಕೆಲಸ ಮಾಡಲು ಇಲ್ಲಿ ಸಾಧ್ಯವಿಲ್ಲ. ತಹಶೀಲ್ದಾರ್‌ ಅಡ್ಮಿನ್‌ ಆಗಿದ್ದು, ತಾಂತ್ರಿಕ ಕಾರಣಗಳು ಉಂಟಾದಾಗ ಮಾತ್ರ ದಾಖಲೆಗಳನ್ನು ಪರಿಶೀಲನೆ ಮಾಡುವುದಾಗಿದೆ. 

* ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.