ಮೋಡ ಬಿತ್ತನೆ ಕಾರ್ಯದಿಂದ ಶೇ.20ರಷ್ಟು ಹೆಚ್ಚಾದ ಮಳೆ
Team Udayavani, Oct 10, 2017, 11:21 AM IST
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಮೋಡ ಬಿತ್ತನೆಯ ಜವಾಬ್ದಾರಿ ವಹಿಸಿಕೊಂಡಿದ್ದ ಅಮೆರಿಕದ “ವೆದರ್ ಮಾಡಿಫಿಕೇಷನ್ ಇಂಟರ್ನ್ಯಾಷನಲ್’ ಸಂಸ್ಥೆಯ ಅಧ್ಯಕ್ಷ ನೀಲ್ ಬ್ರಾಕಿನ್ ಸೋಮವಾರ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮೋಡ ಬಿತ್ತನೆಯ ಫಲಿತಾಂಶಗಳ ಬಗ್ಗೆ ವಿವರಣೆ ನೀಡಿದರು.
ಮೋಡ ಬಿತ್ತನೆ ಪ್ರಾರಂಭವಾದಾಗ ರಾಜ್ಯದಲ್ಲಿ ಶೇ.57 ಪ್ರಮಾಣದಷ್ಟು ಮಳೆ ಕೊರತೆ ಇತ್ತು. ಮೋಡ ಬಿತ್ತನೆಯಿಂದ ವಾತಾವರಣ ಮತ್ತು ಹವಾಮಾನ ಬದಲಾವಣೆ ಉಂಟಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಶೇ.10ರಿಂದ 20ರಷ್ಟು ಹೆಚ್ಚಳ ಕಂಡು ಬಂದಿದೆ ಎಂದು ನೀಲ್ ಬ್ರಾಕಿನ್ ಸಚಿವರಿಗೆ ಮಾಹಿತಿ ನೀಡಿದರು. ಈ ವೇಳೆ ಕರ್ನಾಟಕ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಹೆಚ್.ಪಿ. ಪ್ರಕಾಶ್ ಮತ್ತು ಮುಖ್ಯ ಇಂಜಿನಿಯರ್ ಪ್ರಕಾಶ್ ಕುಮಾರ್ ಹಾಜರಿದ್ದರು.
ಸಚಿವರ ಪ್ರಶಂಸೆ: ಮೋಡ ಬಿತ್ತನೆಯ ಪ್ರಯತ್ನಗಳಿಗೆ ಸಿಕ್ಕಿರುವ ಯಶಸ್ಸಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಚಿವರು, ಮೋಡ ಬಿತ್ತನೆಗೂ ಮೊದಲು 2 ತಾಸು ಮತ್ತು ಮೋಡ ಬಿತ್ತನೆಯ ನಂತರ 2 ತಾಸು ನಿಖರವಾದ ಮಳೆಯ ಪ್ರಮಾಣವನ್ನು ಅಳತೆ ಮಾಡಲಾಗಿದೆ. ರಾಜ್ಯದ ಮೂರು ಕಡೆಗಳಲ್ಲಿ ಸ್ಥಾಪಿಸಲಾಗಿರುವ ರಡಾರ್ಗಳ ಮೂಲಕ ಅಂಕಿ ಅಂಶಗಳನ್ನು ಮತ್ತು ಮೋಡಗಳ ಸಾಂದ್ರತೆಯನ್ನು ನಿಖರವಾಗಿ ಪತ್ತೆಹಚ್ಚಿ, ಅವುಗಳ ಮೇಲೆ ಬಿತ್ತನೆ ಮಾಡಿದ್ದರಿಂದ ಮಳೆ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಿದೆ.
ಮೋಡ ಬಿತ್ತನೆಯ 24 ಗಂಟೆಗಳ ನಂತರವೂ ನೈಸರ್ಗಿಕವಾದ ಯಾವುದೇ ಕಾರಣ ಇಲ್ಲದೇ ಮಳೆ ಆಗಿರುವ ದಾಖಲೆ ಇದೆ. ಇತ್ತಿಚಿನ ದಿನಗಳಲ್ಲಿ ರಾತ್ರಿ ವೇಳೆ ಮಳೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿತ್ತನೆಗೆ ಯೋಗ್ಯವಾಗಿರುವ ಮೋಡಗಳ ಲಭ್ಯತೆ ರಾತ್ರಿಯೂ ಇರುವುದರಿಂದ ರಾತ್ರಿ ಹೊತ್ತು ಮೋಡ ಬಿತ್ತನೆಗೆ ತಾಂತ್ರಿಕ ಪ್ರಯೋಗ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.