ಮಳೆ ಕಾರಣಕ್ಕೆ ಗುಂಡಿ ಮುಚ್ಚುವ ಕಾರ್ಯ ಸ್ಥಗಿತ


Team Udayavani, Oct 10, 2017, 11:21 AM IST

gundi-karya-stagita.jpg

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಮತ್ತೆ ಮಳೆ ಅಬ್ಬರಿಸಿದ್ದು, ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಬ್ರೇಕ್‌ ಹಾಕಿದೆ. “ಮಳೆ ಬರಲಿ, ಬಾರದಿರಲಿ ನಿಗದಿತ ಗಡುವಿನಲ್ಲಿ ಗುಂಡಿ ಮುಚ್ಚಬೇಕು’ ಎಂದು ಬಿಬಿಎಂಪಿ ಆಯುಕ್ತರು ಸೂಚಿಸಿದ ಹಿನ್ನೆಲೆ ಎಂಜಿನಿಯರ್‌ಗಳು ಭಾನುವಾರ ರಾತ್ರಿಯಿಂದಲೇ ತ್ವರಿತ ಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಂಡರು. ಆದರೆ ಸೋಮವಾರ ಬೆಳಗಿನಜಾವ ಮತ್ತು ರಾತ್ರಿ ಸುರಿದ ಮಳೆ, ಈ ಕಾರ್ಯಕ್ಕೆ ತಡೆಯೊಡ್ಡಿತು. 

ಧಾರಾಕಾರ ಮಳೆ ಬಿದ್ದಿದ್ದರಿಂದ ಅನಿವಾರ್ಯವಾಗಿ ಗುಂಡಿ ಮುಚ್ಚುವ ಕಾರ್ಯ ಸ್ಥಗಿತಗೊಂಡಿತು. ಮಳೆ ನಿಂತ ನಂತರ ಗುಂಡಿಯಲ್ಲಿನ ನೀರು ಹೊರಹಾಕಿ, ಅದು ಒಣಗುವವರೆಗೂ ಕಾದು ಕೋಲ್ಡ್‌ ಮಿಕ್ಸ್‌ನಿಂದ ಮುಚ್ಚಬಹುದು. ಆದರೆ, ರಾತ್ರಿಯ ಮಳೆ ಇದಕ್ಕೂ ಅವಕಾಶ ನೀಡಲಿಲ್ಲ. ರಾತ್ರಿಪಾಳಿಯಲ್ಲಿದ್ದ ಎಂಜಿನಿಯರ್‌ಗಳು, ಕಾರ್ಮಿಕರು, ಮಳೆ ನಿಲ್ಲುವವರೆಗೂ ಗಂಟೆಗಟ್ಟಲೆ ಕಾದುಕುಳಿತರು.

ಈ ಮಧ್ಯೆ ಭಾನುವಾರ ರಾತ್ರಿಯಿಂದ ಸೋಮವಾರ ಸಂಜೆವರೆಗೆ ಸುಮಾರು 30ರಿಂದ 40 ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲಾಗಿದೆ. 8ರಿಂದ 10 ಜನರ ತಂಡಗಳನ್ನು ಮಾಡಿ ಒಂದೊಂದು ರಸ್ತೆಗೆ ತಲಾ ಒಂದು ತಂಡ ಕೆಲಸ ಮಾಡುತ್ತಿದೆ. ಬುಲ್‌ ಟೆಂಪಲ್‌, ಬನಶಂಕರಿ ದೇವಸ್ಥಾನ ರಸ್ತೆ, ಮಾರ್ಗೋಸಾ ರಸ್ತೆ, ಯಲಹಂಕ ಸೇರಿದಂತೆ ವಿವಿಧೆಡೆ ಗುಂಡಿಗಳನ್ನು ಹಾಟ್‌ ಮಿಕ್ಸ್‌ ಮತ್ತು ಕೋಲ್ಡ್‌ ಮಿಕ್ಸ್‌ ಎರಡರಿಂದಲೂ ಮುಚ್ಚಲಾಗಿದೆ. ಆದರೆ, ಮಳೆಯಿಂದ ಈ ಕಾರ್ಯ ತುಸು ಮಂದಗತಿಯಲ್ಲಿ ಸಾಗುತ್ತಿದೆ ಎಂದು ಮುಖ್ಯ ಎಂಜಿನಿಯರ್‌ (ರಸ್ತೆ ಮೂಲಸೌಕರ್ಯ) ಎಸ್‌. ಸೋಮಶೇಖರ್‌ ತಿಳಿಸಿದರು. 

ರಸ್ತೆಯಲ್ಲಿ ವಾಹನಗಳ ಸರ್ಕಸ್‌!: ಇನ್ನೂ ಒಂದೆಡೆ ಮಳೆ, ಮತ್ತೂಂದೆಡೆ ಹದಗೆಟ್ಟ ರಸ್ತೆಗಳ ನಡುವೆ ವಾಹನ ಸವಾರರು ಪರದಾಟ ನಡೆಸಿದರು. ಈ ಹಿಂದೆ ಮುಚ್ಚಿದ ರಸ್ತೆ ಗುಂಡಿಗಳು ಕೂಡ ನಿರಂತರ ಮಳೆಯ ಹೊಡೆತಕ್ಕೆ ಬಾಯೆ¤ರೆದಿದ್ದವು. ಮಳೆಯಿಂದ ಬಚಾವಾಗುವ ಭರದಲ್ಲಿ ನೀರು ತುಂಬಿದ ಗುಂಡಿಗಳಲ್ಲಿ ಆಯತಪ್ಪಿ ಬಿದ್ದ ಅನೇಕ ಪ್ರಸಂಗಗಳು ನಡೆದವು.

ಈ ನಡುವೆ ಮಳೆಯ ರಭಸಕ್ಕೆ ಪ್ರಮುಖ ಜಂಕ್ಷನ್‌ಗಳು, ರಸ್ತೆಗಳಲ್ಲಿ ನೀರು ಆವರಿಸಿದ್ದರಿಂದ ರಾತ್ರಿ 10 ಗಂಟೆಯಾದರೂ ಸಂಚಾರದಟ್ಟಣೆ ಉಂಟಾಯಿತು. ಜಲಾವೃತಗೊಂಡ ಜಂಕ್ಷನ್‌ಗಳ ಪರ್ಯಾಯ ಮಾರ್ಗಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು. 

ಎಂ.ಜಿ. ರಸ್ತೆ, ಶಿವಾನಂದ ವೃತ್ತ, ಮೆಜೆಸ್ಟಿಕ್‌, ಕೆ.ಆರ್‌. ಮಾರುಕಟ್ಟೆ, ಹೆಬ್ಟಾಳ, ಶಾಂತಿನಗರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮೈಸೂರು ರಸ್ತೆ, ನಾಯಂಡಹಳ್ಳಿ, ತುಮಕೂರು ರಸ್ತೆ, ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಕೆ.ಆರ್‌. ಪುರ ರಸ್ತೆ, ಎನ್‌ಜಿಇಎಫ್, ಪೀಣ್ಯ, ವೆಲ್ಲಾರ ಜಂಕ್ಷನ್‌ ಮತ್ತಿತರ ಕಡೆಗಳಲ್ಲಿ ಸಂಚಾರದಟ್ಟಣೆ ಇತ್ತು.

ಟಾಪ್ ನ್ಯೂಸ್

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.