ಹಿಂದೂ-ಮುಸ್ಲಿಮರ ನಡುವೆ ಕಾಂಗ್ರೆಸ್‌ನಿಂದ ಕಂದಕ


Team Udayavani, Oct 10, 2017, 11:59 AM IST

hb4.jpg

ಹುಬ್ಬಳ್ಳಿ: ಕಳೆದ 70 ವರ್ಷಗಳಿಂದ ಹಿಂದೂ-ಮುಸ್ಲಿಂ ಸಮಾಜಗಳ ನಡುವೆ ದೊಡ್ಡ ಕಂದಕ ನಿರ್ಮಾಣ ಮಾಡುವ ಕಾರ್ಯವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಆರೆಸ್ಸೆಸ್‌ ಮುಖಂಡ ಕಲ್ಲಡ್ಕ  ಪ್ರಭಾಕರ ಭಟ್ಟ ಆರೋಪಿಸಿದರು. 

ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಗಾಯಗೊಂಡು ನಗರದ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರವೀಣ ಕಳಸೂರ ಹಾಗೂ ಪ್ರವೀಣ ಬಡ್ನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 

ಮತ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಎರಡು ಧರ್ಮದ ನಡುವೆ ಸಂಘರ್ಷ ಏರ್ಪಡುವಂತಹ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಕಾಂಗ್ರೆಸ್‌ ನಾಯಕರು ರಾಜಕಾರಣಕ್ಕಾಗಿ ಸಮಾಜವನ್ನು ಹಾಳು ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಇವರಿಗೆ ಶಾಂತಿ ನೆಲೆಸುವುದು ಬೇಕಾಗಿದ್ದರೆ ದುಷ್ಕರ್ಮಿಗಳ ಬೆನ್ನಿಗೆ ನಿಲ್ಲುತ್ತಿರಲಿಲ್ಲ. 

ಕಳಸ ಗ್ರಾಮದಲ್ಲಿ ನಡೆದ ಘಟನೆಯಲ್ಲೂ ರಾಜ್ಯ ಸರಕಾರ ದುಷ್ಕರ್ಮಿಗಳ ಬೆನ್ನಿಗೆ ನಿಂತಿದೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಪ್ರತಿ ಗ್ರಾಮದಲ್ಲಿ ಎರಡು ಗುಂಪುಗಳಾಗಿ ಸಂಘರ್ಷಕ್ಕೆ ಕಾರಣವಾಗಲಿದೆ ಎಂದರು. ಮುಸ್ಲಿಂ ಸಮಾಜದಲ್ಲೂ ಸಜ್ಜನರಿದ್ದಾರೆ. ಅವರು ಮೌನ ವಹಿಸದೆ ಇಂತಹ ಘಟನೆಗಳು ನಡೆದಾಗ ಖಂಡಿಸಬೇಕು.

ದುಷ್ಕರ್ಮಿಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು. ಈ ಬಗ್ಗೆ ಸಮಾಜದ ಪ್ರಮುಖರು ಗಂಭೀರ ಚಿಂತನೆ ನಡೆಸುವಂತೆ ಮನವಿ ಮಾಡುವುದಾಗಿ ತಿಳಿಸಿದರು. ದೇವಸ್ಥಾನದ ಜಾಗ ಒತ್ತುವರಿ, ಯುವತಿಯರನ್ನು ಚುಡಾಯಿಸುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. 

ಇಂತಹ ದುಷ್ಕೃತ್ಯ ಖಂಡಿಸಿದವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವುದು ಎಷ್ಟು ಸರಿ. ಕೂಡಲೇ ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಬೇಕು. ಯಾವುದೇ ರಾಜಕೀಯ  ಒತ್ತಡಕ್ಕೆ ಪೊಲೀಸರು ಮಣಿಯಬಾರದು ಎಂದು ಒತ್ತಾಯಿಸಿದರು. ಧರ್ಮ ಜಾಗೃತಿ ಇಲ್ಲದ ಕಾರಣ ಲವ್‌ ಜಿಹಾದ್‌ ಘಟನೆಗಳು ನಡೆಯುತ್ತಿವೆ. 

ಹಿಂದೂ ಯುವತಿಯರಿಗೆ ಆಮಿಷ ಅಥವಾ ಬೆದರಿಕೆ ಹಾಕಿ ಮದುವೆಯಾಗಿ ನಂತರ ಅವರನ್ನು ಪ್ರಾಣಿಗಿಂತಲೂ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಲವ್‌ ಜಿಹಾದ್‌ಗಾಗಿಯೇ ಒಂದು ತಂಡ ಕಾರ್ಯ ನಿರ್ವಹಿಸುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮೊದಲು ಜಾಗೃತಿ ಕಾರ್ಯ ನಡೆಯಬೇಕು. ನಾವು ಕೂಡ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.  

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.