ಆಮೆ, ಹರಳು ಮಾರುತ್ತಿದ್ದ ಮೂವರ ಬಂಧನ
Team Udayavani, Oct 11, 2017, 11:21 AM IST
ಬೆಂಗಳೂರು: ಕೆ.ಆರ್. ರಸ್ತೆಯಲ್ಲಿರುವ ಉಮಿನೋ ಪೆಟ್ ಮಳಿಗೆಯಲ್ಲಿ ಅಕ್ರಮವಾಗಿ ಆಮೆ ಹಾಗೂ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಚೆನ್ನೈ ಮೂಲದ ಮೂವರನ್ನು ಸಿಐಡಿ ಅರಣ್ಯ ವಿಭಾಗದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಚೆನ್ನೈ ಮೂಲದ ವೆಲೈಕೋನಾ (45) ಗಣೇಶನ್ (27) ಹಾಗೂ ಚಿನ್ನರಾಯುಡು (20) ಬಂಧಿತರು. ಮತ್ತೂಬ್ಬ ಪ್ರಮುಖ ಆರೋಪಿ ಹಾಗೂ ಉಮಿನೋ ಪೆಟ್ ಮಳಿಗೆಯ ಮಾಲೀಕ ರಾಜುನಾರಾಯಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆರೋಪಿಗಳಿಂದ ಎರಡು ನಕ್ಷತ್ರ ಆಮೆಗಳು ಮತ್ತು 460 ಕೆ.ಜಿ.ಹರಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಮಾಹಿತಿ ನೀಡಿದರು.
ಇನ್ನು ರಾಜುನಾರಾಯಣ ಮಾಲೀಕತ್ವದಲ್ಲಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಎರಡು ಪೆಟ್ ಮಳಿಗೆಗಳಿದ್ದು, ಬೆಂಗಳೂರಿನ ಮಳಿಗೆಯ ನಿರ್ವಹಣೆಯನ್ನು ವೆಲೈಕೋನಾಗೆ ವಹಿಸಲಾಗಿದೆ. ಇದರಲ್ಲಿ ಗಣೇಶನ್ ಮತ್ತು ಚಿನ್ನರಾಯುಡು ಕೆಲಸ ಮಾಡುತ್ತಿದ್ದಾರೆ. ಈ ಮೊದಲು ಈಜಿಪುರದಲ್ಲಿ ಮಳಿಗೆ ನಡೆಸುತ್ತಿದ್ದ ಆರೋಪಿಗಳು, ಕಳೆದ ಮೂರು ತಿಂಗಳ ಹಿಂದೆ ಕೆ.ಆರ್. ರಸ್ತೆಗೆ ಸ್ಥಳಾಂತರಿಸಿದ್ದಾರೆ.
ಮಳಿಗೆಯಲ್ಲಿ ಚೆನ್ನೈನಿಂದ ತರುವ ಆಮೆ ಹಾಗೂ ಹರಳುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಚೆನ್ನೈನಲ್ಲಿರುವ ಮಳಿಗೆಯಲ್ಲಿ ಈ ದಂಧೆ ಅವ್ಯಹತವಾಗಿ ನಡೆಯುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಮಿಳುನಾಡಿನ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.