ಗೌರಿ ಲಂಕೇಶ್ ಹಂತಕರ ಸ್ಕೆಚ್ ತಂದ ಫಜೀತಿ! ಸುಸ್ತಾದ ಶಾಸಕರ ಆಪ್ತ
Team Udayavani, Oct 16, 2017, 10:46 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ಇಬ್ಬರು ಶಂಕಿತರ ಮೂರು ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದರೆ, ಮತ್ತೊಂದೆಡೆ ಬಿಡುಗಡೆ ಮಾಡಿದ ಒಂದು ರೇಖಾಚಿತ್ರ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಆಪ್ತ ಸಹಾಯಕ ಫಜೀತಿಗೆ ಸಿಲುಕುವಂತೆ ಮಾಡಿದ್ದು, ಇದರಿಂದ ಸ್ಪಷ್ಟನೆ ಕೊಟ್ಟು ಸುಸ್ತಾದ ಘಟನೆ ನಡೆದಿದೆ!
ಗೌರಿ ಲಂಕೇಶ್ ಹಂತಕರ ಇಬ್ಬರು ಶಂಕಿತರ ಮೂರು ರೇಖಾಚಿತ್ರಗಳಲ್ಲಿ ಓರ್ವನ ಹಣೆ ಮೇಲೆ ತಿಲಕ ಇರುವುದೇ ತೊಂದರೆ ಕಾರಣವಾಗಿದೆ. ಶಾಸಕ ಸುರೇಶ್ ಗೌಡ ಆಪ್ತ ಸಹಾಯಕ ಪ್ರಭಾಕರ್ ಅವರು ಹಣೆ ಮೇಲೆ ತಿಲಕ ಇಟ್ಟುಕೊಳ್ಳುತ್ತಾರೆ. ಆ ನಿಟ್ಟಿನಲ್ಲಿ ರೇಖಾಚಿತ್ರಕ್ಕೂ ಪ್ರಭಾಕರ್ ಗೂ ಹೋಲಿಕೆ ಇದೆ ಎಂದು ಹೇಳಿ ಹಲವಾರು ಮಂದಿ ದೂರವಾಣಿ ಕರೆ ಮಾಡಿ ತೊಂದರೆ ಕೊಡುತ್ತಿರುವುದಾಗಿ ಅಲವತ್ತುಕೊಂಡಿದ್ದಾರೆ.
ಕೊನೆಗೂ ಬೇಸತ್ತ ಪ್ರಭಾಕರ್ ಅವರು ತಮ್ಮ ಫೇಸ್ ಬುಕ್ ನಲ್ಲಿ, ನನಗೂ ಗೌರಿ ಹತ್ಯೆಗೂ, ಹಂತಕರ ರೇಖಾಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಕಳೆದ 18 ವರ್ಷಗಳಿಂದ ಹಣೆಗೆ ತಿಲಕ ಇಟ್ಟುಕೊಳ್ಳುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.