ದಕ್ಷಿಣ ಬೆಂಗಳೂರು ಭಾಗದ ನಾಗರಿಕರ ಜಾಗರಣೆ


Team Udayavani, Oct 16, 2017, 12:16 PM IST

dakhshina-bangalore.jpg

ಬೆಂಗಳೂರು: ನಗರದಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ಹಲವಾರು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶನಿವಾರ ಮಧ್ಯರಾತ್ರಿ ಆರಂಭವಾದ ಭಾರಿ ಮಳೆ ನಿರಂತರವಾಗಿ ಬೆಳಗಿನವರೆಗೆ ಸುರಿದ ಪರಿಣಾಮ ಬಿಟಿಎಂ ಬಡಾವಣೆ, ಬೊಮ್ಮನಹಳ್ಳಿ, ಯಲಹಂಕ ಸೇರಿದಂತೆ ನಗರದ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು.

ಇದರಿಂದಾಗಿ ನಾಗರಿಕರು ರಜೆದಿನವಾದ ಭಾನುವಾರ ಮನೆಗಳಿಗೆ ಸೇರಿದ್ದ ನೀರನ್ನು ಹೊರಹಾಕುವುದರಲ್ಲಿ ನಿರತರಾಗಿದ್ದರು. ಭಾನುವಾರ ಬೆಳಗ್ಗೆಯೂ ನಗರದಲ್ಲಿ ಮೋಡಕವಿದ ವಾತಾವರಣ ಮುಂದುವರಿಸಿದ ಪರಿಣಾಮ ನಾಗರಿಕರು ಮನೆಗಳಿಗೆ ಹೊರಬರಲು ಹಿಂದೇಟು ಹಾಕಿದರು. ಬೊಮ್ಮನಹಳ್ಳಿಯ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಹೊಂಗಸಂದ್ರ ವಾರ್ಡ್‌ನ ಓಂ ಶಕ್ತಿ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. 

ಇದರೊಂದಿಗೆ ಬಿಟಿಎಂ ಬಡಾವಣೆ ಹಲವಾರು ಕಡೆಗಳಲ್ಲಿ ಸಮಸ್ಯೆ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸಿದರು. ಈ ಭಾಗದ ರಾಜಕಾಲುವೆ, ಚರಂಡಿ ಹಾಗೂ ಮ್ಯಾನ್‌ಹೋಲ್‌ಗ‌ಳು ಉಕ್ಕಿ ಹರಿದು ಮನೆಗಳಿಗೆ ನೀರು ಪ್ರವೇಶಿಸಿ ಮನೆಯಲ್ಲಿ ಹಲವಾರು ವಸ್ತುಗಳು ನೀರಿನಲ್ಲಿ ಮುಳಗಿದವು. ಬೆಂಗಳೂರು ದಕ್ಷಿಣ ಭಾಗದಲ್ಲಿ ಶನಿವಾರ ಭಾರಿ ಮಳೆ ಸುರಿದ ಪರಿಣಾಮ ಈ ಭಾಗದ ಹಲವಾರು ಬಡಾವಣೆಗಳ ರಸ್ತೆಗಳು ಸಂಪೂರ್ಣ ಜಲಾವೃತಗೊಂಡು ವಾಹನಗಳ ಸಂಚರಿಸಲು ತೊಂದರೆಯುಂಟಾಗಿದೆ. 

ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರ ಸಮೀಪ ಮಳೆ ನೀರು ಸಂಪೂರ್ಣವಾಗಿ ರಸ್ತೆಯಲ್ಲಿ ನಿಂತ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಇದರೊಂದಿಗೆ ಯಲಹಂಕದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಳೆ ನೀರು ನುಗ್ಗಿ ಬೇಸ್‌ಮೆಂಟ್‌ ಸಂಪೂರ್ಣ ಜಲಾವೃತಗೊಂಡಿದ್ದು, ಅಪಾರ್ಟ್‌ಮೆಂಟ್‌ ನಿವಾಸಿಗಳು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ಇದರೊಂದಿಗೆ ಇಕೋ ಸ್ಪೇಸ್‌ ಭಾಗದಲ್ಲಿಯೂ ನೀರು ತುಂಬಿರುವುದರಿಂದ ಸೋಮವಾರ ತೀವ್ರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. 

ಇದರೊಂದಿಗೆ ಮಾರತಹಳ್ಳಿ, ವೈಟ್‌ಫೀಲ್ಡ್‌ ಹಾಗೂ ಹೊಸೂರು ರಸ್ತೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ಸೋಮವಾರ ಬೆಳಗ್ಗೆ ನಗರದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದ್ದು, ಪಾಲಿಕೆಯ ಸಿಬ್ಬಂದಿ ಕೂಡಲೇ ನೀರು ತೆರವುಗೊಳಿಸಲು ಮುಂದಾಗಬೇಕಿದೆ ಎಂದು ಸ್ಥಳೀಯ ತಿಳಿಸಿದ್ದಾರೆ.

ಭಾನುವಾರ ಸಾಧಾರಣ ಮಳೆ
ನಗರದಲ್ಲಿ ಕೆಲದಿನಗಳಿಂದ ಅಬ್ಬರಿಸುತ್ತಿರುವ ಮಳೆ, ಭಾನುವಾರ ಕೊಂಚ ತಗ್ಗಿತ್ತು. ಇದರಿಂದ ಜನ ತುಸು ನಿಟ್ಟುಸಿರುಬಿಟ್ಟರು. ಬೆಳಗ್ಗೆ ಅಲ್ಲಲ್ಲಿ ಸಾಧಾರಣ ಮಳೆಯಾಯಿತು. ಅದರಲ್ಲೂ ನಗರದ ಉತ್ತರದಲ್ಲಿ ಗರಿಷ್ಠ 25.5 ಮಿ.ಮೀ ಮಳೆ ದಾಖಲಾಗಿದೆ. ಉಳಿದೆಡೆ ಕೇವಲ ತುಂತುರು ಹನಿಯಿತು. ಆದರೆ, ಮಳೆ ಪರಿಣಾಮ ಮಾತ್ರ ಮುಂದುವರಿದಿದೆ. ಹಲವಾರು ರಸ್ತೆಗಳು ಭಾನುವಾರ ಕೂಡ ಜಲಾವೃತಗೊಂಡಿದ್ದವು. ಮನೆಗಳಿಗೆ ನುಗ್ಗಿದ ನೀರು ಹೊರಹಾಕುವ ಕೆಲಸ ಮುಂದುವರಿಯಿತು.

ರಾಜಾನುಕುಂಟೆಯಲ್ಲಿ 24.5 ಮಿ.ಮೀ, ಅರಕೆರೆ 25.5, ಬಂಡಿಕೊಡಿಗೇಹಳ್ಳಿ 20, ದೊಡ್ಡಜಾಲ 20.5, ಬ್ಯಾಟರಾಯನಪುರ 8.5, ದೊಡ್ಡಗುಬ್ಬಿ 12, ರಾಧಾಕೃಷ್ಣ ದೇವಸ್ಥಾನದಲ್ಲಿ 6.5 ಮಿ.ಮೀ. ಮಳೆ ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ತಿಳಿಸಿದೆ. ಈ ಮಧ್ಯೆ ಸೋಮವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ, ಕಳೆದ ಮೂರ್‍ನಾಲ್ಕು ದಿನಗಳಿಗೆ ಹೋಲಿಸಿದರೆ, ಮಳೆ ಪ್ರಮಾಣ ತುಸು ಕಡಿಮೆ ಇರಲಿದೆ. ಅಲ್ಲಲ್ಲಿ ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.