ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಭಾರಿ ಪ್ರತಿಭಟನೆ
Team Udayavani, Oct 17, 2017, 1:19 PM IST
ಬೆಂಗಳೂರು: ಹಲವು ಅಕ್ರಮಗಳು ಬಯಲಿಗೆ ಬಂದು ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಕೈದಿಗಳು ಭಾರಿ ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಅಕ್ರಮಗಳು ಸುದ್ದಿಯಾಗಿದ್ದ ಬೆನ್ನಲ್ಲೇ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಕಂಗಾಲಾಗಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಜೈಲಿನೊಳಗಿನ ಮೂಲಭೂತ ಸೌಕರ್ಯಗಳನ್ನು ಉತ್ತಮ ಪಡಿಸಬೇಕು, ಪೆರೋಲ್ ನೀಡಿ ಹೊರಗೆ ಕಳುಹಿಸಬೇಕು, ಹೊರಗಿನ ಊಟಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಉಪವಾಸ ಕೈಗೊಂಡು ಪ್ರತಿಭಟಿಸುತ್ತಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಎಡಿಜಿಪಿ ಎನ್.ಎಸ್.ಮೇಘರಿಕ್ ಅವರು ಭೇಟಿ ನೀಡಿ ಕೈದಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಂಜಾ, ಮಾದಕ ವಸ್ತುಗಳ ಸರಬರಾಜಾಗುತ್ತಿದ್ದ ಹಿನ್ನಲೆಯಲ್ಲಿ ಹೊರಗಿನ ಊಟಕ್ಕೆ ಅವಕಾಶ ನೀಡಲಾಗುತ್ತಿರಲಿಲ್ಲ.
ಶಶಿಕಲಾ ನಟರಾಜನ್ ಹಾಗೂ ಛಾಪಾ ಕಾಗದ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಬ್ದುಲ್ ಕರೀಂ ಲಾಲ್ ತೆಲಗಿಗೆ ವಿಐಪಿ ಸೌಲಭ್ಯ ಸೇರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಕಾರಾಗೃಹ ಇಲಾಖೆ ಡಿಐಜಿ ಡಿ. ರೂಪಾ ಬಯಲಿಗೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.