ವಜ್ರ ಮಹೋತ್ಸವ ದುಂದುವೆಚ್ಚಕ್ಕೆ ಸಿಎಂ ಕತ್ತರಿ
Team Udayavani, Oct 18, 2017, 6:40 AM IST
ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವ ಕಾರ್ಯಕ್ರಮ 10 ಕೋಟಿ ರೂ. ವೆಚ್ಚದಲ್ಲಿ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜತೆಗೆ ಶಾಸಕರಿಗೆ ಚಿನ್ನದ ನಾಣ್ಯ ಉಡುಗೊರೆ ಕೊಡುವ ಪ್ರಸ್ತಾವ ಕೈಬಿಡಿ. ಒಂದೇ ದಿನಕ್ಕೆ ಕಾರ್ಯಕ್ರಮ ಸೀಮಿತಗೊಳಿಸಿ, ದುಂದುವೆಚ್ಚ ಮಾಡದೆ ಅರ್ಥಪೂರ್ಣವಾಗಿ ಆಚರಿಸಿ ಎಂದು ಹೇಳಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಜ್ರ ಮಹೋತ್ಸವ ಸಂಬಂಧ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ಸ್ಪೀಕರ್ ಕೆ.ಬಿ. ಕೋಳಿವಾಡ್, ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ, ಅನಗತ್ಯವಾಗಿ ವಿವಾದ ಮಾಡಿಕೊಳ್ಳುವುದು ಬೇಡ. ಸಾರ್ವಜನಿಕರ ಟೀಕೆಗೆ ಗುರಿಯಾಗದಂತೆ ಎಚ್ಚರ ವಹಿಸಿ ಕಾರ್ಯಕ್ರಮ ಮಾಡಿ ಎಂದು ಹೇಳಿದರು.
ವಜ್ರ ಮಹೋತ್ಸವಕ್ಕೆ 26.87 ಕೋ. ರೂ. ವೆಚ್ಚದ ಪ್ರಸ್ತಾವನೆಗೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಲು ಸಾಧ್ಯವಿಲ್ಲ. ಹಣಕಾಸು ಇಲಾಖೆಯೂ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಹೀಗಾಗಿ, 10 ಕೋ. ರೂ. ವೆಚ್ಚದಲ್ಲಿ ಕಾರ್ಯಕ್ರಮ ಮುಗಿಸಿ ಎಂದು ತಿಳಿಸಿದರು ಎಂದು ಹೇಳಲಾಗಿದೆ.
ವಜ್ರ ಮಹೋತ್ಸವದ 2 ದಿನಗಳ ಕಾರ್ಯಕ್ರಮಕ್ಕೆ 26.87 ಕೋ. ರೂ. ಮೊತ್ತದ ಪ್ರಸ್ತಾವನೆ ಸಿದ್ಧ ಪಡಿಸಿ ಸ್ಪೀಕರ್ ಕಾರ್ಯಾಲಯದಿಂದ ಕಳುಹಿಸಿ ಕೊಡಲಾಗಿತ್ತು. ಅದನ್ನು ಈಗ ಹಣಕಾಸು ಇಲಾಖೆ ವಾಪಸ್ ಕಳುಹಿಸಿ 10 ಕೋಟಿ ರೂ. ಪರಿಷ್ಕೃತ ವೆಚ್ಚದ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದೆ.
ಚಿನ್ನದ ನಾಣ್ಯ ವಿಚಾರ ಸುಳ್ಳು: ಸಿಎಂ
ಸಮಾರಂಭಕ್ಕೆ ಅನುದಾನ ನೀಡುವುದು ಸರಕಾರ. ಸೋಮವಾರ ರಾತ್ರಿಯಷ್ಟೇ ಕಡತಕ್ಕೆ ಅನುಮೋದನೆ ನೀಡಿದ್ದೇನೆ. ಚಿನ್ನದ ನಾಣ್ಯ ನೀಡುವ ವಿಚಾರ ಸುಳ್ಳು. ಸ್ಮರಣಿಕೆ ನೀಡದಂತೆಯೂ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.