ಕನ್ನಡಪರ ನಿಲುವು ಅನುಷ್ಠಾನಕ್ಕೆ ಒತ್ತಾಯ


Team Udayavani, Oct 20, 2017, 12:03 PM IST

siddu-kannada-para-niluvu.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನ್ನಡಪರ ನಿಲುವು ಮತ್ತು ಕಾಳಜಿ ಸ್ವಾಗತಾರ್ಹವಾಗಿದ್ದು, ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಅವರು ಗಮನಹರಿಸಬೇಕು ಎಂದು ಕನ್ನಡ ಕಾರ್ಯಕರ್ತರ ಬಳಗ ಆಗ್ರಹಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಬಳಗದ ಪ್ರಧಾನ ಸಂಚಾಲಕ ವ.ಚ.ಚನ್ನೇಗೌಡ ಮತ್ತು ರಾ.ನಂ.ಚಂದ್ರಶೇಖರ್‌, ಕನ್ನಡ ಹೋರಾಟದ ನೆಲೆಯಿಂದ ಬಂದಿರುವ ಸಿಎಂ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿಯ (ಈಗಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ) ಪ್ರಥಮ ಅಧ್ಯಕ್ಷರಾಗಿದ್ದವರು. ಅವರಿಗೆ ಕನ್ನಡದ ಬಗ್ಗೆ ಅಭಿಮಾನದೆ. ಸಮಸ್ಯೆಯ ಅರಿವೂ ಇದೆ. ಅವರ ಕನ್ನಡಪರ ನಿಲುವು ಸ್ವಾಗತಾರ್ಹ. ಆದರೆ, ಆಡಿದ ಬಹಳಷ್ಟು ಮಾತುಗಳು ಅನುಷ್ಠಾನಕ್ಕೆ ಬರುತ್ತಿಲ್ಲ ಎಂಬುದು ಬೇಸರದ ಸಂಗತಿ ಎಂದಿದ್ದಾರೆ. 

ಅಲ್ಲದೆ, ಕನ್ನಡಕ್ಕೊಂದು ಬಾವುಟಕ್ಕೆ ಸಂಬಂಧಿಸಿದಂತೆ ಕಾಯ್ದೆ ರೂಪದಲ್ಲಿ ತಂದು ರಾಜ್ಯೋತ್ಸವದ ಕೊಡುಗೆ ನೀಡಬೇಕು ಮತ್ತು ಭಾಷೆಗೆ ಸಂಬಂಧಿಸಿದಂತೆ ಮೂರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ಕುರಿತು ಸರೋಜಿನಿ ಮಹಿಷಿ ಅವರ ಪರಿಷ್ಕೃತ ವರದಿ ಸಿದ್ಧಪಡಿಸಲಾಗಿದ್ದು, ಅದರಲ್ಲಿ ರುವ ರಾಜ್ಯ ಸಕಾರ ಅನುಷ್ಠಾನಗೊಳಿಸಬಹುದಾದ 14 ಅಂಶಗಳನ್ನು ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಬೇಕು. ಆ ಮೂಲಕ ವರದಿ ಜಾರಿಗೆ ಕ್ರಮ ಕೈಗೊಳ್ಳಬೇಕು. ಜತೆಗೆ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಬೇಕಾದ ಅಂಶಗಳ ಜಾರಿಗೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರಕವಿ ಕುವೆಂಪು ರಚಿತ “ಜಯಭಾರತ ಜನನಿಯ ತನುಜಾತೆ’ ಕವನವನ್ನು ನಾಡಗೀತೆಯಾಗಿ ಆದೇಶ ಹೊರಡಿಸಿ 14 ವರ್ಷ ಕಳೆದಿದೆ. ಆದರೆ, ಅದನ್ನು ಹೇಗೆ ಹಾಡಬೇಕು, ಎಷ್ಟು ಹಾಡಬೇಕು? ಎಂಬುದರ ಬಗ್ಗೆ ಸರ್ಕಾರ ನಿರ್ದಿಷ್ಟ ಆದೇಶ ಹೊರಡಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ. ಆದ್ದರಿಂದ ನಾಡಗೀತೆಗೆ ಹಾಡುವ ಕ್ರಮ, ನಿರ್ದಿಷ್ಟ ಕಾಲಾವಧಿ ಮತ್ತು ದಾಟಿಯನ್ನು ನಿಗದಿಪಡಿಸಬೇಕು ಎಂದು ಕೋರಿದ್ದಾರೆ.

ಅದೇ ರೀತಿ ರಾಜ್ಯದಲ್ಲಿ ನಾಮಫ‌ಲಕ, ಜಾಹೀರಾತು ಫ‌ಲಕ ಮತ್ತು ಭಿತ್ತ ಫ‌ಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲೇ ಪ್ರಧಾನವಾಗಿ ಇರುವಂತೆ ಹೊಸ ನೀತಿ ರೂಪಿಸಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯೋತ್ಸವದ ದಿನ ಈ ವಿಚಾರದ ಬಗ್ಗೆ ಸ್ಪಷ್ಟ ನಿಲವು ಪ್ರಕಟಿಸದಿದ್ದರೆ, ಜನರ ಗಮನ ಸೆಳೆದು ಸರ್ಕಾರವನ್ನು ಎಚ್ಚರಿಸಲು ನವೆಂಬರ್‌ನಲ್ಲಿ ಜಾಗೃತ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.