394 ಒತ್ತುವರಿ ತೆರವಿಗೆ ತಯಾರಿ


Team Udayavani, Oct 20, 2017, 12:03 PM IST

394-ottuvari.jpg

ಬೆಂಗಳೂರು: ನಗರ, ಜಿಲ್ಲಾವ್ಯಾಪ್ತಿಯಲ್ಲಿ ಈವರೆಗೆ ಪತ್ತೆಯಾದ ಸರ್ಕಾರಿ ಭೂಮಿ ಒತ್ತುವರಿ ಪೈಕಿ 16,000 ಎಕರೆ ವಶಕ್ಕೆ ಪಡೆಯಲಾಗಿದ್ದು, ಬಾಕಿಯಿರುವ 394 ಎಕರೆ ಒತ್ತುವರಿ ತೆರವು ಕಾರ್ಯಾಚರಣೆ ಸೋಮವಾರದಿಂದ ಆರಂಭವಾಗಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಸದನ ಸಮಿತಿ ವರದಿಯಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 5.30 ಲಕ್ಷ ಎಕರೆ ಭೂಮಿಯಿದ್ದು, ಇದರಲ್ಲಿ 1,22,918 ಎಕರೆ ಸರ್ಕಾರಿ ಭೂಮಿಯಾಗಿದೆ. ಈ ಪೈಕಿ 34,111 ಎಕರೆ ಭೂಮಿ ಖಾಸಗಿಯವರಿಂದ ಒತ್ತುವರಿಯಾಗಿದ್ದು, 11,774 ಎಕರೆ ಭೂಮಿ ಒತ್ತುವರಿ ತೆರವುಗೊಳಿಸಬಹುದು ಎಂದು ವರದಿಯಲ್ಲಿತ್ತು.

ಅದರಂತೆ ಕಾರ್ಯಾಚರಣೆ ನಡೆಸಿ ಈವರೆಗೆ 11,380 ಎಕರೆ ಸರ್ಕಾರಿ ಭೂಮಿ ವಶಕ್ಕೆ ಪಡೆಯಲಾಗಿದೆ ಎಂದರು. ನಾನಾ ಕಾರಣಕ್ಕೆ ಸ್ಥಗಿತಗೊಂಡಿರುವ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭವಾಗಲಿದೆ. ವರದಿಯಲ್ಲಿರುವ  394 ಎಕರೆ ಸರ್ಕಾರಿ ಭೂಮಿಯನ್ನೂ ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ರಾಜಕಾಲುವೆ ಒತ್ತುವರಿಗೆ ಸಂಬಂಧಪಟ್ಟಂತೆ ಬಿಬಿಎಂಪಿ ನೀಡಿದ್ದ ಮಾಹಿತಿಯಂತೆ ಈಗಾಗಲೇ ಎರಡು ಬಾರಿ ಸರ್ವೆ ನಡೆಸಲಾಗಿದ್ದು, ಪಾಲಿಕೆಗೂ ತಿಳಿಸಲಾಗಿದೆ. ಜಿಲ್ಲಾಡಳಿತವು ಈವರೆಗೆ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆದಿರುವ 16,000 ಎಕರೆ ಭೂಮಿಯನ್ನು ಸಾರ್ವಜನಿಕ ಬಳಕೆಗೆ ಉಪಯೋಗಿಸಲಾಗುತ್ತಿದೆ. ಒಂದು ಲಕ್ಷ ಮನೆ ನಿರ್ಮಿಸುವ ಸರ್ಕಾರದ ಯೋಜನೆಗೆ 1,500 ಎಕರೆ ಭೂಮಿ ನೀಡಲಾಗುತ್ತಿದೆ.

ಈ ಪೈಕಿ ಈಗಾಗಲೇ 750 ಎಕರೆ ಭೂಮಿಯನ್ನು ವಸತಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸದ್ಯದಲ್ಲೇ ಇನ್ನೂ 500 ಎಕರೆ ಹಸ್ತಾಂತರಕ್ಕೆ ಸ್ಥಳ ಗುರುತಿಸಲಾಗುತ್ತಿದೆ ಎಂದು ಹೇಳಿದರು. ಗುಂಜೂರಿನಲ್ಲಿ ವಶಕ್ಕೆ ಪಡೆಯಲಾದ ಸರ್ಕಾರಿ ಭೂಮಿಯಲ್ಲಿ ವಿಶೇಷ ಪ್ರವರ್ಗದವರಿಗೆ ಮನೆ ನಿರ್ಮಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಸುಮಾರು 37.24 ಕೋಟಿ ರೂ. ವೆಚ್ಚದಲ್ಲಿ 784 ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ನ್ಯಾಯಾಲಯದ ಅಹವಾಲು ಸ್ವೀಕರಿಸಿ ಕ್ರಮ
ರಾಜರಾಜೇಶ್ವರಿನಗರದ ಐಡಿಯಲ್‌ ಹೋಮ್ಸ್‌ ಬಡಾವಣೆಯಲ್ಲಿ ಒಟ್ಟು 9 ಎಕರೆ ಒತ್ತುವರಿಯಾಗಿದ್ದು, ಇದರಲ್ಲಿ 6 ಎಕರೆಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ನಿವೇಶನಗಳ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಉಳಿದ ನಾಲ್ಕು ಎಕರೆ ಪ್ರದೇಶದಲ್ಲಿ ಆಸ್ಪತ್ರೆ ಸೇರಿದಂತೆ 62 ಕಟ್ಟಡಗಳಿದ್ದು, ಇವುಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಜಿಲ್ಲಾಧಿಕಾರಿ ವಿ.ಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.