ಆರೋಗ್ಯಕರ ಸಮಾಜಕ್ಕೆ ಕುಟುಂಬ ವೈದ್ಯರ ಸಲಹೆ ಅಗತ್ಯ
Team Udayavani, Oct 21, 2017, 2:07 PM IST
ಮಹಾನಗರ: ವೈದ್ಯಕೀಯ ರಂಗದಲ್ಲಿ ನಿರ್ದಿಷ್ಟ ವಿಷಯಗಳ ಕುರಿತು ಪರಿಣತಿ ಪಡೆದು ರೋಗಿಗಳಿಗೆ ಉತ್ತಮ ಚಿಕಿತ್ಸೆ ಸೌಲಭ್ಯ ದೊರಕುತ್ತಿದ್ದರೂ ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ಕುಟುಂಬ ವೈದ್ಯರ ಪಾತ್ರ ಇಂದಿಗೂ ಮಹತ್ವದ್ದು ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಪ್ರೊ| ಎಚ್. ಎಸ್. ಬಲ್ಲಾಳ್ ಹೇಳಿದರು.
ಅವರು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಕೆಎಂಸಿ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.
ಆಧುನಿಕ ವೈದ್ಯವಿಜ್ಞಾನ ಎಷ್ಟೇ ಬೆಳೆದರೂ ಮೂಲಭೂತವಾಗಿ ರೋಗ ಪತ್ತೆ ಮಾಡುವಲ್ಲಿ ಕುಟುಂಬ ವೈದ್ಯರ ಪಾತ್ರ ಮಹತ್ವದ್ದಾಗಿದೆ. ಎಷ್ಟೋ ರೋಗಗಳಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ರೋಗಿಗಳಲ್ಲಿ ಧೈರ್ಯ ತುಂಬುವುದು ಮತ್ತು ರೋಗಿಗಳಿಗೆ ಮಾನಸಿಕ ಬೆಂಬಲ ನೀಡುವುದು ಅಗತ್ಯವಾಗುತ್ತದೆ. ಇಂಥ ಕೆಲಸವನ್ನು ಕುಟುಂಬ ವೈದ್ಯರು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂದರು.
ಕುಟುಂಬ ವೈದ್ಯರು ಸಾಮಾನ್ಯವಾಗಿ ರೋಗಿಯ ಕೌಟುಂಬಿಕ ಹಿನ್ನೆಲೆ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ, ಕುಟುಂಬ ಸದಸ್ಯರ ಆರೋಗ್ಯ ಹಿನ್ನೆಲೆ ಮತ್ತಿತರ ಮಹತ್ವದ ಅಂಶಗಳನ್ನು ತಿಳಿದು ಕೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಕುಟುಂಬ ವೈದ್ಯರನ್ನು ಸಂಪರ್ಕಿಸದೆ ನೇರವಾಗಿ ವಿಶೇಷ ತಜ್ಞರ ಸಲಹೆಯನ್ನು ಪಡೆಯುವುದು ಕೆಲವೊಮ್ಮೆ ಆರೋಗ್ಯ ಸಂಕೀರ್ಣತೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಸಿದರು.
ಚಿಕಿತ್ಸಾ ದಾಖಲೆಗಳನ್ನೂ ಸಮರ್ಪಕವಾಗಿ ನಿರ್ವಹಿಸಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಮಾತನಾಡಿ, ವೈದ್ಯರು ಮತ್ತು ಆಸ್ಪತ್ರೆಗಳು ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಒದಗಿಸುವ ಜತೆಗೆ, ಚಿಕಿತ್ಸಾ ದಾಖಲೆಗಳಲ್ಲೂ ಸಮರ್ಪಕವಾಗಿ ನಿರ್ವಹಿಸುವುದು ಅನಿವಾರ್ಯ. ಕೆಪಿಎಂಇ ಕಾಯ್ದೆ, ಗ್ರಾಹಕ ಹಕ್ಕುಗಳ ಕಾಯ್ದೆ ಮತ್ತಿತರ ಕಾಯ್ದೆಗಳ ಅನ್ವಯ ಇದು ಕಡ್ಡಾಯವಾಗಿದೆ ಎಂದರು.
ಮಂಗಳೂರು ಕೆಎಂಸಿ ಡೀನ್ ಡಾ| ಎಂ.ವಿ. ಪ್ರಭು, ವೈದ್ಯಕೀಯ ಅಧೀಕ್ಷಕ ಡಾ| ಆನಂದ ವೇಣುಗೋಪಾಲ್ ಅತಿಥಿಗಳಾಗಿ ಆಗಮಿಸಿದ್ದರು. ಮಂಗಳೂರು ಐಎಂಎ ಅಧ್ಯಕ್ಷ ಡಾ| ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು.
ತಜ್ಞರಾದ ಡಾ| ಚಕ್ರಪಾಣಿ, ಡಾ| ಅರ್ಜುನ್ ಶೆಟ್ಟಿ, ಡಾ| ಮನೀಶ್, ಡಾ| ಪ್ರವೀಣ್ಚಂದ್ರ ನಾಯಕ್, ಡಾ| ಯೋಗೀಶ್ ಕಾಮತ್, ಡಾ| ವಿ.ಬಿ.ತಂತ್ರಿ, ಡಾ| ಶಿವಾನಂದ ಪೈ, ಡಾ| ಪ್ರಹ್ಲಾದ್ ಕುಷ್ಟಗಿ, ಡಾ| ಕೀರ್ತಿರಾಜ್, ಡಾ| ಕೃಷ್ಣಪ್ರಸಾದ್ ಮೊದಲಾದವರು ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ಮಂಗಳೂರು ಐಎಂಎ ಕಾರ್ಯದರ್ಶಿ ಡಾ| ಕದ್ರಿ ಯೋಗೀಶ್ ಬಂಗೇರ, ಖಜಾಂಚಿ ಡಾ| ಜಿ.ಕೆ.ಭಟ್ ಸಂಕಬಿತ್ತಿಲು, ನಿಯೋಜಿತ ಅಧ್ಯಕ್ಷ ಡಾ|ಕೆ.ಆರ್.ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.