ವಿರಕ್ತ ಮಠಾಧೀಶರು ಸ್ಪಷ್ಟ ನಿಲುವು ತೋರಲಿ


Team Udayavani, Oct 23, 2017, 1:09 PM IST

h4-basavaraja-horatti.jpg

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ವಿಚಾರದಲ್ಲಿ ಬಸವ ತತ್ವದಡಿಯಲ್ಲಿಯೇ ಅಸ್ತಿತ್ವ ಕಂಡುಕೊಂಡಿರುವ ವಿರಕ್ತ ಮಠಗಳ ಮಠಾಧೀಶರು ತಮ್ಮ ದ್ವಂದ್ವತೆ ಹಾಗೂ ಎರಡು ಕಡೆಗೂ ನಮ್ಮ ಸಹಮತ ಇದೆ ಎಂಬ ನಿಲುವು ಬಿಟ್ಟು ಸ್ಪಷ್ಟತೆ ವ್ಯಕ್ತಪಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದರು. 

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಅಂಗವಾಗಿ ನವೆಂಬರ್‌ 5ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಂಚಪೀಠಾಧೀಶ್ವರರು ತಾವು ವೀರಶೈವ ಧರ್ಮದ ಪರವಾಗಿದ್ದೇವೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದು, ಅವರ ಬಗ್ಗೆ ನಾವು ಹೆಚ್ಚು ಗಮನ ನೀಡುವುದಿಲ್ಲ. 

ಲಿಂಗಾಯತ ಸ್ವತಂತ್ರ ಧರ್ಮದ ಒತ್ತಾಯಕ್ಕೆ ನೀವು ಕೈ ಜೋಡಿಸಿ ಎಂದು ಅವರಿಗೆ ಮನವಿ ಮಾಡುತ್ತೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು. ರಾಜ್ಯದಲ್ಲಿ ಬಸವಣ್ಣನವರ ಹೆಸರಿನಲ್ಲಿ ಅವರ ತತ್ವಾಧಾರದಲ್ಲಿ ಅಸ್ತಿತ್ವ ಕಂಡುಕೊಂಡಿರುವ ವಿರಕ್ತ ಮಠಗಳ ಮಠಾಧೀಶರು ತಾವು ಮಾತ್ರ ಹೋರಾಟ ವಿಚಾರದಲ್ಲಿ ದ್ವಂದ್ವ ನಿಲುವು ಮುಂದುವರಿಸದೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು.

ವಿರಕ್ತ ಮಠಗಳ ಮಠಾಧೀಶರು ಲಿಂಗಾಯತ ಧರ್ಮ ಹೋರಾಟಕ್ಕೆ ಸ್ಪಂದನೆ ನೀಡಬೇಕಾಗಿದೆ. ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಸಮಾಜದ ಬದುಕಿನ ಹೋರಾಟವಾಗಿದೆ. ಮಠಾಧೀಶರು ಭಕ್ತರ ನಿಲುವಿಗೆ ಸ್ಪಂದಿಸಬೇಕಾಗಿದೆ ಎಂದರು. ಶಿವಯೋಗ ಮಂದಿರದ ಅಧ್ಯಕ್ಷರಾಗಿ ಡಾ| ಸಂಗನಬಸವ ಸ್ವಾಮೀಜಿಯವರು 2003ರಿಂದ ಇದ್ದರೂ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ.

ಲಿಂಗಾಯತ ಹೋರಾಟಕ್ಕೆ ಜನಬೆಂಬಲವಿಲ್ಲ. ಈ ಬಗ್ಗೆ ಮತದಾನ ನಡೆದರೆ ಶೇ.75ರಷ್ಟು ಜನರು ನಮ್ಮ ಕಡೆ ಇದ್ದಾರೆಂದು ಸಂಗನಬಸವ ಸ್ವಾಮೀಜಿ ಹೇಳಿದ್ದು ಸರಿಯಲ್ಲ. ಎಲ್ಲರನ್ನು ಒಗ್ಗೂಡಿಸಬೇಕಾದ ಮಠಾಧೀಶರೇ ರಾಜಕಾರಣಿಗಳಂತೆ ಮಾತನಾಡಿದರೆ ಹೇಗೆ ಎಂದು ಪ್ರಶ್ನಿಸಿದರು. 25ರಂದು ಸ್ಪಷ್ಟ ನಿರ್ಧಾರ: ಈ ಹಿಂದೆ ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಪ್ರಸ್ತಾಪ ಎರಡು ಬಾರಿ ತಿರಸ್ಕೃತಗೊಂಡಿದೆ.

ಸಮಾಜಕ್ಕೆ ಸೌಲಭ್ಯ ಪಡೆಯಲು ಲಿಂಗಾಯತ ಸ್ವತಂತ್ರ ಧರ್ಮವೆಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅ.25ರಂದು ವೀರಶೈವ ಮಹಾಸಭಾದವರೊಂದಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದ್ದೇವೆ. ಅವರು ಒಪ್ಪಿದರೆ ಸರಿ ಇಲ್ಲವಾದರೆ ಅವರು ವೀರಶೈವ-ಲಿಂಗಾಯತ ಎಂದು ಕೊಡಲಿ, ನಾವು ಲಿಂಗಾಯತ ಸ್ವತಂತ್ರ ಧರ್ಮವೆಂದು ಮನವಿ ಸಲ್ಲಿಸುತ್ತೇವೆ ಎಂದರು. 

ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಬಸವಣ್ಣವರಿಂದ ಲಿಂಗಾಯತ ಶಬ್ದ ಬಂದಿದೆ. ಅಲ್ಪಸಂಖ್ಯಾತ ಧರ್ಮದೊಂದಿಗೆ ಸಮಾಜಕ್ಕೆ ಸರಕಾರಿ ಸೌಲಭ್ಯ ಪಡೆಯಲು ಇನ್ನಾದರೂ ಸಂಘಟಿತ ಹೋರಾಟ ನಡೆಸೋಣ ಎಂದರು.

ಮುಖಂಡರಾದ ರಾಜಣ್ಣಾ ಕೊರವಿ, ಸಿದ್ರಾಮಣ್ಣ ನಡಕಟ್ಟಿ, ಪ್ರೊ| ಬಿ.ವಿ. ಶಿರೂರು, ತಾರಾದೇವಿ ವಾಲಿ, ಚಿಂತಾಮಣಿ ಸಿಂದಗಿ, ಗೊಂಗಣ ಶೆಟ್ಟರ, ಅಕ್ಕಮ್ಮ ನವಲಗುಂದ, ರಾಜಶೇಖರ ಮೆಣಸಿನಕಾಯಿ, ವಿ.ಎಸ್‌. ಅಳಗುಂಡಗಿ ಮಾತನಾಡಿದರು. ಪ್ರೊ| ಎಸ್‌.ವಿ. ಪಟ್ಟಣಶೆಟ್ಟಿ ಇನ್ನಿತರರು ಇದ್ದರು. 

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

Hubli: Siddaramaiah must resign if respect remains: Basavaraja Bommai

Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.