ಹುಬ್ಬಳ್ಳಿ ಹಳೇ ಸಿಬಿಟಿಗೆ ಹೊಸ ಲುಕ್‌


Team Udayavani, Oct 23, 2017, 1:09 PM IST

h1-hub-new-look.jpg

ಹುಬ್ಬಳ್ಳಿ: ಸರಿಸುಮಾರು 45 ವರ್ಷಗಳ ಹಿಂದೆ ಬಂಡಿವಾಡ ಅಗಸಿಯ ಸುಮಾರು 34 ಗುಂಟೆ ಹೊಂಡ ರೂಪದ ಜಾಗ ಕೇವಲ 73 ಸಾವಿರ ರೂ. ವೆಚ್ಚದಲ್ಲಿ ಸಾರ್ವಜನಿಕ ಬಳಕೆಯ ಮಹತ್ವದ ಜಾಗದ ರೂಪ ಪಡೆದಿತ್ತು. ಇಂದು ಅದೇ ಜಾಗದ ಪ್ರತಿ ಚದರ ಅಡಿ ಲಕ್ಷಾಂತರ ರೂ. ಬೆಲೆ ಹೊತ್ತು ನಿಂತಿದೆ.

ಇದೇ ಜಾಗದಲ್ಲಿ ಇದೀಗ ಅಂದಾಜು 17 ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಐದಂತಸ್ತಿನ ಕಟ್ಟಡವೊಂದು ಕಂಗೊಳಿಸುತ್ತಿದ್ದು, ಕೆಲವೇ ತಿಂಗಳಲ್ಲಿ ಇದು ಸಾರ್ವಜನಿಕ ಬಳಕೆಗೆ ಅರ್ಪಣೆಯಾಗಲಿದೆ. ನಾವು ಹೇಳಲು ಹೊರಟಿರುವುದು ವಾಣಿಜ್ಯ ನಗರಿ ಹುಬ್ಬಳ್ಳಿಯಪ್ರತಿ ಪ್ರದೇಶಕ್ಕೂ ಹಾಗೂ ಹುಬ್ಬಳ್ಳಿ-ಧಾರವಾಡ ಮಧ್ಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಕೊಂಡಿಯಾದ ಸಿಬಿಟಿಯ ಕಥೆ.

ಆರಂಭದಲ್ಲಿ ದುರ್ಗದ ಬಯಲು ವೃತ್ತದಿಂದ ನಿರ್ವಹಣೆಗೊಳ್ಳುತ್ತಿದ್ದ ನಗರ ಬಸ್‌ ಸಾರಿಗೆ ಸಂಚಾರ ವ್ಯವಸ್ಥೆ(ಸಿಬಿಟಿ) 1971ರಿಂದ ದುರ್ಗದ ಬಯಲು ಸಮೀಪದ ಬಂಡಿವಾಡ ಅಗಸಿ ಜಾಗಕ್ಕೆ ಸ್ಥಳಾಂತರಗೊಂಡು ಅಂದಿನ ದಿನಮಾನಕ್ಕೆ ತಕ್ಕಂತೆ ಬಸ್‌ ನಿಲ್ದಾಣ ರೂಪ ಪಡೆದಿತ್ತು.

2013ಕ್ಕಿಂತಲೂ ಮೊದಲು ಸಿಬಿಟಿ ನೋಡಿದವರಿಗೆ ಇದೀಗ ಬದಲಾದ ಸಿಬಿಟಿ ಖಂಡಿತವಾಗಿಯೂ ಅಚ್ಚರಿ ಮೂಡಿಸುವ ರೀತಿಯಲ್ಲಿ ಸಿಬಿಟಿ ಹೊಸ ರೂಪ ಪಡೆದುಕೊಂಡಿದೆ. ಹುಬ್ಬಳ್ಳಿಯ ವಿವಿಧ ಬಡಾವಣೆ, ಹುಬ್ಬಳ್ಳಿ-ಧಾರವಾಡ ಮಧ್ಯ  ಸಂಪರ್ಕ ಕಲ್ಪಿಸಲು ನಿತ್ಯ 131ಕ್ಕೂ ಅಧಿಕ ಬಸ್‌ಗಳು, 1015ಕ್ಕೂ ಅಧಿಕ ಮಾರ್ಗಗಳ ಸಂಚಾರಕ್ಕೆ ಸಿಬಿಟಿಯೇ ಆಸರೆಯಾಗಿದೆ.

ಬಂಡಿವಾಡ ಅಗಸಿ ಜಾಗ ಸಿಬಿಟಿ ರೂಪ ಪಡೆಯುತ್ತಿದಂತೆಯೇ ಜಾಗದ ಸುತ್ತಮುತ್ತಲ ಪ್ರದೇಶದ ಜಾಗಗಳಿಗೆ ಚಿನ್ನದ ಬೆಲೆ ಬರತೊಡಗಿತು. ಅಷ್ಟೇ ಅಲ್ಲ ಸಿಬಿಟಿ ಸುತ್ತಮುತ್ತಲು ನೂರಾರು ಕುಟುಂಬಗಳು ವಿವಿಧ ಉದ್ಯೋಗ ಕಂಡುಕೊಂಡಿವೆ. ಅನೇಕ ಕುಟುಂಬಗಳು ಇದೇ ಬಸ್‌ ನಿಲ್ದಾಣವನ್ನೇ ನಂಬಿ ಬದುಕುತ್ತಿವೆ. ಆಧುನಿಕ ಕಟ್ಟಡ ರೂಪ ಪಡೆದಿರುವ ಸಿಬಿಟಿ ಲೋಕಾರ್ಪಣೆಗೊಂಡರೆ ಈ ಹಿಂದಿಗಿಂತಲೂ ಹೆಚ್ಚಿನ ಜನರಿಗೆ ಉದ್ಯೋಗ, ವೃತ್ತಿಗೆ ಅವಕಾಶ ಒದಗಿಸಿಕೊಡಲಿದೆ ಎಂಬುದು ಸ್ಪಷ್ಟ. 

ಅಹ್ಮದಾಬಾದ್‌ನಲ್ಲಿ ಸಿದ್ಧವಾಯ್ತು ನೀಲನಕ್ಷೆ: ಈಗ ಸಿಬಿಟಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡದ ನೀಲನಕ್ಷೆಯನ್ನು ಅಹಮದಾಬಾದ್‌ನ ಎಸ್‌ಇಟಿ ವಿಶ್ವವಿದ್ಯಾಲಯದವರು ಸಿದ್ಧಪಡಿಸಿದ್ದಾರೆ. ಬಿಆರ್‌ಟಿಎಸ್‌ ಯೋಜನೆಯಲ್ಲಿ ಎಸ್‌ಇಟಿ ವಿವಿ ಮಹತ್ವದ ಪಾತ್ರ ವಹಿಸಿದೆ.

* ಶಿವಶಂಕರ ಕಂಠಿ

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.