ಶತಾಯುಷಿ ಹಿರೇಬೆಟ್ಟು ವಿಟ್ಠಲ ನಾಯಕ್‌ಗೆ ಅಭಿನಂದನೆ


Team Udayavani, Oct 25, 2017, 10:45 AM IST

24-Mum06a.jpg

ನವಿ ಮುಂಬಯಿ: ರಾಜಾಪುರ ಸಾರಸ್ವತ ಸಂಘ ಮುಂಬಯಿ ವತಿಯಿಂದ ಸಮಾಜ ಸೇವಕ ಶತಾಯುಷಿ ಹಿರೇಬೆಟ್ಟು ವಿಟ್ಠಲ ಕೃಷ್ಣ ನಾಯಕ್‌ ಅವರಿಗೆ ವಿಶೇಷ ಅಭಿನಂದನ  ಕಾರ್ಯಕ್ರಮವು ಇತ್ತೀಚೆಗೆ ಸೀವುಡ್ಸ್‌ನಲ್ಲಿ ನಡೆಯಿತು.

ಸದಾನಂದ ಪಾಟ್ಕರ್‌ ಪನ್ವೇಲ್‌, ಆರ್‌. ಕೆ. ನಾಯಕ್‌, ರಾಜಾಪುರ ಸಾರಸ್ವತ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಡಿ. ಬೋರ್ಕರ್‌ ಅವರು, ನಾಯಕ್‌ ಅವರನ್ನು ಶಾಲು ಹೊದೆಸಿ, ತಿಲಕವನ್ನಿಟ್ಟು, ಮಲ್ಲಿಗೆ ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ವಿಶೇಷ ರೀತಿಯಲ್ಲಿ ಸಮ್ಮಾನಿಸಿ ಅಭಿನಂದಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ  ರಾಜಾಪುರ ಸಾರಸ್ವತ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಡಿ. ಬೋರ್ಕರ್‌ ಅವರು, ಇಲ್ಲಿಯವರೆಗೆ ಶತಾಯುಷಿ ಎಂಬುದು ಅಲ್ಲಿ ಇಲ್ಲಿ ಕೇಳಿದ ವಿಷಯವಾಗಿತ್ತು. ಆದರೆ ಇಂದು ಪ್ರತ್ಯಕ್ಷವಾಗಿ ನಮ್ಮವರೊಬ್ಬರು 100 ವರ್ಷಗಳನ್ನು ಪೂರೈಸಿರುವುದು ಸಂತೋಷದ ಸಂಗತಿಯಾಗಿದೆ. ಶತಾಯುಷಿ ಸಾಧಕರೊಬ್ಬರನ್ನು ಸಮ್ಮಾನಿಸುವ ಸೌಭಾಗ್ಯ ನನಗೆ ಒದಗಿ ಬಂದಿರುವುದು ನನ್ನ ಭಾಗ್ಯವಾಗಿದೆ ಎಂದು ನುಡಿದು ಅಭಿನಂದಿಸಿ ಶುಭ ಹಾರೈಸಿದರು.

ಅತಿಥಿಯಾಗಿದ್ದ ರಾಮಣ್ಣ ಶೆವಡೆ ಅವರು ಮಾತನಾಡಿ, ಇಂದಿನ ಕಾರ್ಯಕ್ರಮವು ನಾನು ಜೀವಮಾನದಲ್ಲೇ ನೋಡಿರದ ಅಪೂರ್ವ ಅನುಭವ, ಕ್ಷಣವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೆ ಒಂದು ರೀತಿಯ ಸೌಭಾಗ್ಯವಾಗಿದೆ ಎಂದು ನುಡಿದು ಅಭಿನಂದಿಸಿದರು.

ಅತಿಥಿಯಾಗಿ ಪಾಲ್ಗೊಂಡ ಡಹಾಣೂವಿನ ಪಿ. ಆರ್‌. ರವಿಶಂಕರ್‌ ಮಾತನಾಡಿ, ಶತ
ಮಾನದ ಹಿಂದಿನ ವೃಕ್ಷದ ಬೇರುಗಳಿಗೆ ನೀರುಣ್ಣಿಸಿ ಗೌರವಿಸುವ ರೀತಿ ಒಂದು
ರೀತಿಯ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ನಮ್ಮ ಹಿರಿಯರಿಗೆಲ್ಲಾ ಸಂದ ಗೌರವವಾಗಿದೆ. ಇಂತಹ ಅರ್ಥ ಪೂರ್ಣ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಪಾಲ್ಗೊಳ್ಳುವಂತೆ ಮಾಡಿದಾಗ ಹಿರಿಯರನ್ನು ಹೇಗೆ ನೋಡಿಕೊಳ್ಳಬೇಕು ಎಂಬುದರ ಬಗ್ಗೆ ಅವರಿಗೆ ಅರಿವಾಗುತ್ತದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಪೂಜಾ ಜೆ. ಕಾಮತ್‌ ಅವರು ಸಮ್ಮಾನಿತ ನಾಯಕ್‌ ಅವರನ್ನು ಪರಿಚಯಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಂತಾ ಎಸ್‌. ನಾಯಕ್‌, ಲತಾ ಗೋಪಾಲ ನಾಯಕ್‌, ಸುನೀಲ್‌ ಚಿಂಬಾಳ್ಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸದಾನಂದ ವಿ. ನಾಯಕ್‌ ಅವರು ವಂದಿಸಿದರು. ವಿಟuಲ ಕೃಷ್ಣ ನಾಯಕ್‌ ಅವರನ್ನು ಮಹಿಳಾ ವಿಭಾಗದ ಸದಸ್ಯೆಯರು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರೇಬೆಟ್ಟು ವಿಟ್ಠಲ ಕೃಷ್ಣ ನಾಯಕ್‌ ಅವರು, ನಿಮ್ಮೆಲ್ಲರ ಅಭಿಮಾನ, ಗೌರವಕ್ಕೆ ಋಣಿಯಾಗಿದ್ದೇನೆ. ಇಂದಿನ ದಿನವು ನನ್ನ ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯುವ ಕ್ಷಣವಾಗಿದೆ. ನಿಮ್ಮೆಲ್ಲರ ಗೌರವ, ಅಭಿಮಾನ, ಪ್ರೀತಿ ಇದೇ ರೀತಿಯಲ್ಲಿರಲಿ ಎಂದು ಆಶಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.