ನನ್ನನ್ನು ಪಾರು ಮಾಡಿ; ಇಲ್ಲದಿದ್ದರೆ ನನ್ನ ಕೊಲೆಯಾದೀತು: ಹದಿಯಾ


Team Udayavani, Oct 27, 2017, 11:35 AM IST

Hadiya-700.jpg

ತಿರುವನಂತಪುರ : ನನ್ನನ್ನು ಇಲ್ಲಿಂದ ಪಾರು ಮಾಡಿ, ಇಲ್ಲದಿದ್ದರೆ ಯಾವ ಹೊತ್ತಿನಲ್ಲೂ ನನ್ನನ್ನು  ಕೊಂದು ಬಿಡುತ್ತಾರೆ ಎಂದು ಅಖೀಲಾ ಅಶೋಕನ್‌ ಅಥವಾ ಹದಿಯಾ ಗೋಗರೆಯುವ ಎರಡನೇ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.

ಲವ್‌ ಜಿಹಾದ್‌ ಆರೋಪದಲ್ಲಿ ಶಫೀನ್‌ ಜಹಾನ್‌ ಜತೆ ನಡೆದಿರುವ ಮದುವೆಯನ್ನು ಕೇರಳ ಹೈಕೋರ್ಟ್‌ ರದ್ದು ಮಾಡಿದ ಬಳಿಕ ಹದಿಯಾಳನ್ನು ನ್ಯಾಯಾಲಯ ಆಕೆಯ ಹೆತ್ತವರ ವಶಕ್ಕೆ ಒಪ್ಪಿಸಿದೆ.

ಸಾಮಾಜಿಕ ಕಾರ್ಯಕರ್ತ ರಾಹುಲ್‌ ಈಶ್ವರ್‌ ಕಳೆದ ಆಗಸ್ಟ್‌ 17ರಂದು ಚಿತ್ರೀಕರಿಸಿಕೊಂಡಿರುವ ಹದಿಯಾಳ ಎರಡನೇ ವಿಡಿಯೋದಲ್ಲಿ ಆಕೆ ಜೀವ ರಕ್ಷಣೆಗಾಗಿ ಗೋಗರೆಯುತ್ತಿರುವುದು ಕಂಡು ಬರುತ್ತದೆ. 

“ನೀವು ನನ್ನನ್ನು ಇಲ್ಲಿಂದ ಪಾರು ಮಾಡಲೇಬೇಕು; ಇಲ್ಲದಿದ್ದರೆ ನಾಳೆ ಅಥವಾ ನಾಡಿದ್ದರೊಳಗಾಗಿ, ಯಾವುದೇ ಹೊತ್ತಿನಲ್ಲಿ ನನ್ನನ್ನು ಕೊಂದುಬಿಡಬಹುದು. ನನ್ನ ತಂದೆಗೆ ವಿಪರೀತ ಸಿಟ್ಟು ಬಂದಿದೆ ಎಂಬುದು ನನಗೆ ಗೊತ್ತಿದೆ. ನಾನು ನಡೆದಾಡಿದಾಗ ಆತ ನನ್ನನ್ನು ಹೊಡೆದು ಕಾಲಿನಿಂದ ತುಳಿಯುತ್ತಾನೆ; ನನ್ನ ತಲೆ ಅಥವಾ ನನ್ನ ದೇಹದ ಯಾವುದೇ ಭಾಗ ಎಲ್ಲಿಗಾದರೂ ಅಪ್ಪಳಿಸಿತೆಂದರೆ ನಾನು ಸಾಯುವುದು ನಿಶ್ಚಿತ’ ಎಂದುಹದಿಯಾ ವಿಡಿಯೋದಲ್ಲಿ ಹೇಳಿದ್ದಾಳೆ. 

25ರ ಹರೆಯದ ಹದಿಯಾ ಓರ್ವ ಹೊಮಿಯೋಪತಿಕ್‌ ವೈದ್ಯೆ; ಕಳೆದ ವರ್ಷ ಶಾಫೀನ್‌ ಜಹಾನ್‌ ಜತೆಗೆ ಮದುವೆಯಾದ ಬಳಿಕ ಆಕೆ ಇಸ್ಲಾಂ ಗೆ ಮತಾಂತರಗೊಂಡಿದ್ದಳು. 

ಹದಿಯಾಳನ್ನು ಮದುವೆಯಾದ ಶಾಫೀನ್‌ ಜಹಾನ್‌ಗೆ ಉಗ್ರ ಸಂಘಟನೆಗಳ ಜತೆಗೆ ನಂಟಿದೆ ಮತ್ತು ನನ್ನ ಮಗಳನ್ನು ಆತ ಬಲವಂತದಿಂದ ಇಸ್ಲಾಂ ಗೆ ಮತಾಂತರಿಸಿದ್ದಾನೆ ಎಂದು ಹದಿಯಾಳ ತಂದೆ ನೀಡಿದ್ದ ಹೇಳಿಕೆಯನ್ನು  ಕೇರಳ ಹೈಕೋರ್ಟ್‌ ಸ್ವೀಕರಿಸಿತ್ತು. 

ಹದಿಯಾಳ ಪ್ರಕರಣದಲ್ಲಿ ಲವ್‌ ಜಿಹಾರ್‌ ನಡೆದಿತ್ತೇ ಎಂಬುದನ್ನು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಆದೇಶಿಸಿತ್ತು.  ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯಾಗಿದ್ದ ಪ್ರೌಢ ವಯಸ್ಕರ ಮದುವೆಯನ್ನು ಕೇರಳ ಹೈಕೋರ್ಟ್‌ ರದ್ದು ಮಾಡಿದ್ದಾದರೂ ಹೇಗೆ ಎಂದು ಈ ವರ್ಷದ ಆದಿಯಲ್ಲಿ ಸುಪ್ರೀಂ ಕೋರ್ಟ್‌ ಪ್ರಶ್ನಿಸಿತ್ತು. 

ರಾಹುಲ್‌ ತಯಾರಿಸಿದ ಮೊದಲ ವಿಡಿಯೊದಲ್ಲಿ ಹದಿಯಾ, “ಇದು ನನ್ನ ಬದುಕೇ? ನಾನು ಈ ಸ್ಥಿತಿಯಲ್ಲಿ ಬದುಕಬೇಕೇ?’ ಎಂದು ಹೇಳಿದ್ದಳು. ಕೇರಳ ಹೈಕೋರ್ಟ್‌ ಹದಿಯಾಳನ್ನು ಆಕೆಯ ಹೆತ್ತವರ ರಕ್ಷಣಾ ವಶಕ್ಕೆ ಒಪ್ಪಿಸಿದ ಬಳಿಕ ಆಕೆಯ ತಂದೆ, ಆಕೆಗೆ ಮನೆಯಿಂದ ಹೊರಹೋಗುಲು ಬಿಡುತ್ತಿಲ್ಲ. ಆಕೆಯ ಮನೆಯ ಮುಂದೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.