ಪಾರ್ಶ್ವವಾಯು ತಡೆಗೆ ಉತ್ತಮ ಜೀವನ ಪದ್ಧತಿ ಅವಶ್ಯ
Team Udayavani, Oct 29, 2017, 12:35 PM IST
ಹುಬ್ಬಳ್ಳಿ: ನಮ್ಮ ಜೀವನ ಪದ್ಧತಿ ಬದಲಾಯಿಸಿ ಕೊಳ್ಳುವುದರಿಂದ ಪಾರ್ಶ್ವವಾಯು ಭಯದಿಂದ ದೂರವಿರಬಹುದು ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ನಗರದ ಶ್ರೀ ಬಾಲಾಜಿ ಆಸ್ಪತ್ರೆಯಲ್ಲಿ ಶನಿವಾರ ಜರುಗಿದ ಪಾರ್ಶ್ವವಾಯು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೃದ್ರೋಗ, ಮಿದುಳು ರೋಗ ಮುಂತಾದ ಕೆಲವು ರೋಗಗಳನ್ನು ನಿಯಂತ್ರಿಸಲು ಉತ್ತಮ ಆಹಾರ, ಒತ್ತಡ ರಹಿತ ಬದುಕು, ದಿನನಿತ್ಯ ನಿಗದಿತ ವ್ಯಾಯಾಮ ಮಾಡಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವ ಬಾಲಾಜಿ ಆಸ್ಪತ್ರೆ ವೈದ್ಯರ ಕಾರ್ಯ ಶ್ಲಾಘನೀಯ ಎಂದರು.
ನರರೋಗ ತಜ್ಞ ಹಾಗೂ ಬಾಲಾಜಿ ಆಸ್ಪತ್ರೆಯ ಚೇರ್ಮನ್ ಡಾ| ಕ್ರಾಂತಿ ಕಿರಣ ಮಾತನಾಡಿ, ಮನುಷ್ಯನ ಸಾವಿಗೆ ಎರಡನೇ ಪ್ರಮುಖ ಕಾರಣ ಪಾರ್ಶ್ವವಾಯು. 50 ವರ್ಷ ಮೀರಿದವರಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ. ಜಗತ್ತಿನಲ್ಲಿ ಪ್ರತಿವರ್ಷ 17 ಮಿಲಿಯನ್ ಜನ ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದು, ಇವರಲ್ಲಿ ಪ್ರತಿವರ್ಷ 7 ಮಿಲಿಯನ್ ಜನ ಸಾಯುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ವೈಫೈ ಹಾಗೂ ಪಾರ್ಶ್ವವಾಯು ತಡೆ ಕುರಿತ ಮಾಹಿತಿ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ವೇದಿಕೆ ಕಾರ್ಯಕ್ರಮದ ನಂತರ ಆಸ್ಪತ್ರೆಯಿಂದ ಶಿರೂರ ಪಾರ್ಕ, ಶ್ರೀ ಕಾಡಸಿದ್ದೇಶ್ವರ ಕಾಲೇಜು ಮೂಲಕ ಕಿಮ್ಸ್ ಮುಂಭಾಗದ ಮಹಾತ್ಮ ಗಾಂಧಿ ಪುತ್ಥಳಿವರೆಗೆ ಜಾಗೃತಿ ಜಾಥಾ ನಡೆಯಿತು.
ಮುಖಂಡರಾದ ಮಾ. ನಾಗರಾಜ, ಸುಧೀರ ಸರಾಫ್, ಜಯತೀರ್ಥ ಕಟ್ಟಿ, ಉಮೇಶ ದುಶಿ, ಮಹೇಶ ಬುರ್ಲಿ ಇತರರಿದ್ದರು. ಆಸ್ಪತ್ರೆ ಆಡಳಿತಾಧಿ ಕಾರಿ ಡಾ| ಮೊಹಿತೆ ಸ್ವಾಗತಿಸಿದರು. ಡಾ| ಶೋಭಾ ಕ್ರಾಂತಿ ಕಿರಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.