ಕುಂದುಕೊರತೆ ಸಭೆಯಲ್ಲಿ ಬಾಲ್ಯವಿವಾಹ ತಡೆ‌ಗೆ ಕರೆ


Team Udayavani, Oct 29, 2017, 3:39 PM IST

29-Mng–14.jpg

ಸುಳ್ಯ: ತಾಲೂಕಿನಲ್ಲಿ ಇತ್ತೀಚೆಗೆ ಪರಿಶಿಷ್ಟ ಜಾತಿ ಮತ್ತು ವರ್ಗದ ಸಮುದಾಯದಲ್ಲಿ ಬಾಲ್ಯವಿವಾಹ ಪ್ರಕರಣಗಳ ಬಗ್ಗೆ ಹೆಚ್ಚು ದೂರು ಬರುತ್ತಿವೆ. ಸ್ಥಳೀಯ ಮುಖಂಡರು ಬಾಲ್ಯವಿವಾಹ ಪ್ರಕರಣಗಳು ನಡೆಯದಂತೆ ಸರಕಾರದೊಂದಿಗೆ ಕೈಜೋಡಿಸುವಂತೆ ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾ ಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್‌ ಪೇರಾಲು ಮನವಿ ಮಾಡಿದರು.

ಶನಿವಾರ ಸುಳ್ಯ ತಾ.ಪಂ. ಸಭಾಂಗಣದಲ್ಲಿ ಜರಗಿದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು. 

ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯದ ವಿಧವೆಯರ ಪುನರ್‌ ವಿವಾಹ ಮತ್ತು ಒಳ ಪಂಗಡಗಳ ನಡುವಿನ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಸಲ್ಲಿಕೆಗೆ ಸರಕಾರ ಸುತ್ತೋಲೆ ಕಳುಹಿಸಿದೆ ಎಂದು ತಿಳಿಸಿದರು. ಈ ಸಂದರ್ಭ ಪ್ರೋತ್ಸಾಹ ಧನ ಮೊತ್ತದ ಕುರಿತು ಪ್ರಶ್ನಿಸಿದಾಗ ಸರಕಾರ ಸುತ್ತೋಲೆ ಮಾತ್ರ ಕಳುಹಿಸಿದೆ. ಮೊತ್ತದ ಕುರಿತು ಮಾಹಿತಿ ನೀಡಿಲ್ಲ ಎಂದು ಪೇರಾಲು ತಿಳಿಸಿದರು.

ಕುಂದುಕೊರತೆ ಸಭೆಯನ್ನು ಎರಡು ತಿಂಗಳಿಗೊಮ್ಮೆ ನಡೆಸಬೇಕು. 3 ತಿಂಗಳಿಗೊಮ್ಮೆ ಮಾಡುವುದಾದಲ್ಲಿ
ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಆಯೋಜಿಸುವಂತೆ ಶಂಕರ್‌ ಪೆರಾಜೆ, ಬಾಬು ಜಾಲ್ಸೂರು ಆಗ್ರಹಿಸಿದರು.

ಸರ್ವೆ ನಂಬರ್‌ ಸಮಸ್ಯೆ
ಆರ್‌ಟಿಸಿಯಲ್ಲಿನ ಸರ್ವೆ ನಂಬರ್‌ ಬದಲಾವಣೆಯ ಸಮಸ್ಯೆ ಸರಿಪಡಿಸುವಂತೆ ಮತ್ತು ಸುಬ್ರಹ್ಮಣ್ಯದ ಭಾಗೀರಥಿ ಅವರು ಕಳೆದ 15 ವರ್ಷಗಳಿಂದ ಕುಲ್ಕುಂದದಲ್ಲಿ ನೆಲೆಸಿದ್ದರು. ಪಡಿತರ ಚೀಟಿ ಮೊದಲಾದ ಅಗತ್ಯ ದಾಖಲೆಗಳಿಲ್ಲ ಎಂದು ತಹಶೀಲ್ದಾರ್‌ ಅವರಿಗೆ ಪ್ರಕಾಶ್‌ ಬಂಗ್ಲೆಗುಡ್ಡೆ ತಿಳಿಸಿದರು.

ಸುಳ್ಯ ಕೇರ್ಪಳದಲ್ಲಿರುವ ಶ್ಮಶಾನದಲ್ಲಿ ಶವಸಂಸ್ಕಾರಕ್ಕೆ ಅಗತ್ಯ ಮೂಲ ಸೌಕರ್ಯಗಳಿಲ್ಲ ಎಂದು ಮುಖಂಡ
ದಾಸಪ್ಪ ಅವರು ದೂರಿದರು. ಇದಕ್ಕುತ್ತರಿಸಿದ ತಹಶೀಲ್ದಾರ್‌ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ ನೀಡಲು
ಸಲಹೆಯಿತ್ತರು.

ಉಪಯೋಗವಿಲ್ಲ
ಇತ್ತಿಚೆಗೆ ನಡೆದ ಸುಳ್ಯ ಜನಸಂಪರ್ಕ ಸಭೆಯಲ್ಲಿ ನೀಡಲಾದ ಅನಿಲ ಸಂಪರ್ಕಕ್ಕೆ ಸಂಬಂಧಿಸಿ ರೆಗ್ಯುಲೇಟರ್‌, ಗ್ಯಾಸ್‌ ಸಿಲಿಂಡರ್‌ ಮೊದಲಾದವನ್ನು ನೀಡಿಲ್ಲ. ಒಂದಿದ್ದರೆ ಮತ್ತೂಂದಿಲ್ಲ. ಅನಿಲ ಸಂಪರ್ಕ ನೀಡಿದರೂ ಕಾಟಾಚಾರಕ್ಕೆ ಎಂಬಂತಾಗಿದೆ ಎಂದು ಶೀನಪ್ಪ ಬಯಂಬು ಪ್ರಸ್ತಾಪಿಸಿದರು. ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿ
ಪ್ರತಿಕ್ರಿಯಿಸಿ ಮಾಹಿತಿ ನೀಡಿದರು.

ತಾಲೂಕಿನ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣಕ್ಕೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆನಂದ ಬೆಳ್ಳಾರೆ ಹೇಳಿದಾಗ,
ಅಧಿಕಾರಿ ಚಂದ್ರಶೇಖರ ಪೇರಾಲು ಪ್ರಸ್ತಾವನೆ ಕಳುಹಿಸಲಾಗಿದೆ. ಸಭೆಯ ಪಾಲನ ವರದಿಯನ್ನೇ ಪ್ರಸ್ತಾವನೆಯಾಗಿ ಸ್ವೀಕರಿಸಿ ಪರಿಗಣಿಸಲು ನ.ಪಂ. ಮುಖ್ಯಾಧಿಕಾರಿಗೆ ಸೂಚಿಸಿದರು.

ವಿವಿಧ ಇಲಾಖೆ, ಅಭಿವೃದ್ಧಿ ಕಾಮಗಾರಿ, ಮೂಲ ಸೌಕರ್ಯ ಕೊರತೆ, ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು. ತಾಲೂಕು ಪಂಚಾಯತ್‌ ಪ್ರಭಾರ ಇಒ ಭವಾನಿಶಂಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜನಸಂಪರ್ಕ ಸಭೆ ಬಗ್ಗೆ ಆಕ್ರೋಶ
ಇತ್ತೀಚೆಗೆ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಕೌಂಟರ್‌ ವ್ಯವಸ್ಥೆ ಮಾಡಿಲ್ಲ. ನೇರ ಸಭಾವೇದಿಕೆಗೆ ತೆರಳಿ ಅರ್ಜಿ, ಮನವಿ ನೀಡಿದಾಗ ಪಕ್ಷದ ಮುಖಂಡರು ಅವರು ಬಿಜೆಪಿಯವರು ನಮ್ಮವರಲ್ಲ ಎಂದು ಸ್ವೀಕರಿಸಲು ಹಿಂದೇಟು ಹಾಕುತ್ತಾರೆ. ಅದೇನು ಕಾಂಗ್ರೆಸ್‌ ಪಕ್ಷದ ಸಭೆಯೇ ? ಹಾಗಿದ್ದರೆ ಅವರು ಸಭೆಯನ್ನು
ಅವರಷ್ಟಕ್ಕೆ ಮಾಡಿಕೊಳ್ಳಲಿ. ತಾಲೂಕು ಆಡಳಿತ ಸಭೆಯ ರೂಪರೇಖೆ ನಡೆಸಿಲ್ಲವೇ ಎಂದು ಅಚ್ಯುತ ಗುತ್ತಿಗಾರು ಪ್ರಶ್ನಿಸಿದರು. ಉತ್ತರಿಸಿದ ತಹಶೀಲ್ದಾರ್‌ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಲಾಗಿತ್ತು. ತಾಲೂಕು ಆಡಳಿತವೇ ವ್ಯವಸ್ಥೆ ಕೈಗೊಂಡಿತ್ತು. ಅರ್ಜಿ ನೀಡಲು ಸಾಧ್ಯವಾಗದಿದ್ದಾಗ ಸಭೆಯಲ್ಲಿ ಆಗಲೇ ತನ್ನ ಗಮನಕ್ಕೆ ತರಬೇಕಾಗಿತ್ತು ಎಂದರು.

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.