![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 30, 2017, 9:35 AM IST
ಚಿತ್ರದುರ್ಗ: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಯೋತ್ಪಾದಕರಿಗೆ ಹೋಲಿಸಿದವರು ಡಕಾಯಿತರು, ದರೋಡೆಕೋರರೇ ಇರಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಲೇವಡಿ ಮಾಡಿದ್ದಾರೆ. ನಗರದಲ್ಲಿ ಭಾನುವಾರ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯನ್ನು ಮನಬಂದಂತೆ ನಿಂದಿಸುವುದು, ಬಾಯಿಗೆ ಬಂದಂತೆ ಬೈಯ್ಯುವುದು ಸಂಸ್ಕೃತಿ ಅಲ್ಲ. ಹುದ್ದೆ ಮತ್ತು ವ್ಯಕ್ತಿಗಳ ಬಗ್ಗೆ ಗೌರವ ಮತ್ತು ಎಚ್ಚರಿಕೆಯಿಂದ ಮಾತಾಡಬೇಕು. ಯಾವುದೇ ಅಸ್ತಿತ್ವ ಇಲ್ಲದವರು ಹೀಗೆಲ್ಲ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಟಿಪ್ಪು ಜಯಂತಿ ಆಚರಣೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರು ಏನೇ ಹೇಳಿದರೂ ಟಿಪ್ಪು ಜಯಂತಿ ನಡೆದೇ ನಡೆಯುತ್ತದೆ. ಇಷ್ಟ ಇದ್ದವರು ಭಾಗವಹಿಸಲಿ ಎಂದರು.
ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ
ಚಿತ್ರದುರ್ಗ: “ಬಹುಸಂಖ್ಯಾತ ಜನರ ತೀವ್ರ ವಿರೋಧದ ನಡುವೆ ಟಿಪ್ಪು ಜಯಂತಿ ಆಚರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಯೋತ್ಪಾದಕ ಸಿದ್ದರಾಮಯ್ಯ ಆಗುತ್ತಿದ್ದಾರೆ’ ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ
ಸಮಿತಿ ಸಂಚಾಲಕ ತೇಜಸ್ವಿ ಸೂರ್ಯ ಟೀಕಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತಾಂಧ ಟಿಪ್ಪು ಬಿನ್ ಲಾಡೆನ್ ಸಾಲಿನಲ್ಲಿ ನಿಲ್ಲುತ್ತಾನೆಯೇ ವಿನಃ ಗಾಂಧಿ , ಅಂಬೇಡ್ಕರ್ ಸ್ಥಾನದಲ್ಲಿ ಅಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದು ಕೊನೆಯ ಟಿಪ್ಪು ಜಯಂತಿ. ಟಿಪ್ಪುವಿನ ಸಹವಾಸ ಮಾಡಿದವರ್ಯಾರೂ ಉದ್ಧಾರವಾಗಿಲ್ಲ. ಅದೇ ರೀತಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಲಿದೆ. ಆದರೂ ಜಯಂತಿ ಆಚರಣೆಗೆ ನಾವು ಅವಕಾಶ ನೀಡುವುದಿಲ್ಲ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.