ಉಪ್ಪಾರ ಸಮಾಜಕ್ಕೆ ಮೀಸಲಾತಿ ಪಡೆಯಲು ಭಗೀರಥ ಯತ್ನ ಅವಶ್ಯ
Team Udayavani, Oct 30, 2017, 12:37 PM IST
ಹುಬ್ಬಳ್ಳಿ: ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜಕ್ಕೆ ಮೀಸಲಾತಿ ಕೊಡಿಸಲು ಎಲ್ಲ ಸಮಾಜ ಬಾಂಧವರು ಭಗೀರಥ ಪ್ರಯತ್ನ ಮಾಡಬೇಕು ಎಂದು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.
ಗೋಕುಲ ರಸ್ತೆಯ ಸಾಮ್ರಾಟ್ ಹಾಲ್ ನಲ್ಲಿ ರವಿವಾರ ಡಿ.ವೈ. ಉಪ್ಪಾರ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಪ್ಪಾರ ಸಮಾಜಕ್ಕೆ ಮೀಸಲಾತಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಆಗ್ರಹಿಸಬೇಕು ಎಂದು ಅಭಿಪ್ರಾಯಪಟ್ಟರು. ಉಪ್ಪಾರ ಸಮಾಜಕ್ಕೆ ದೊಡ್ಡ ಚರಿತ್ರೆಯಿದ್ದು, 13 ಜನ ಜಗದ್ಗುರುಗಳನ್ನು ಕಂಡ ಸಮಾಜ ನಮ್ಮದು.
ಬಾಂಧವರು ಯಾರೂ ಸಹ ಕೀಳರಿಮೆ ಹೊಂದುವ ಅವಶ್ಯಕತೆಯಿಲ್ಲ. ಸಮಾಜ ಬಾಂಧವರಿಗೆ ಯಾವುದೇ ಉಪ್ಪಾರ ಬಾಂಧವರು ಶ್ರಮದ ಮೂಲಕ ಸಾಧನೆ ಮಾಡುತ್ತಿದ್ದಾರೆ. ಸಾಧನೆ ಮೂಲಕ ಸಮಾಜಕ್ಕೆ ದೊಡ್ಡ ಶಕ್ತಿಯಾಗಿ ಬೆಳೆಯಬೇಕು.
ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸಮಾಜದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಬೇಕು ಎಂದು ಹೇಳಿದರು. ಪಡೆದುಕೊಳ್ಳುವುದು ಹಾಗೂ ಕಳೆದುಕೊಳ್ಳುವುದು ನಾಲಿಗೆಯ ಕಾರಣದಿಂದಲೇ.
ಆದ್ದರಿಂದಲೇ ಶರಣರು ಮಾತೆ ಮುತ್ತು, ಮಾತೆ ಮೃತ್ಯು ಎಂದು ಹೇಳಿದ್ದಾರೆ. ನಾಲಿಗೆ ನಮ್ಮ ಸಂಸ್ಕಾರವನ್ನು ತಿಳಿಸುತ್ತದೆ. ನಾಲಿಗೆ ಮೇಲೆ ಲಕ್ಷ್ಮೀ ಹಾಗೂ ಸರಸ್ವತಿ ವಾಸ ಮಾಡುತ್ತಾರೆಂದು ಹಿರಿಯರು ಹೇಳುತ್ತಿದ್ದರು. ಸದಾ ಒಳ್ಳೆಯ ಮಾತುಗಳನ್ನಾಡಬೇಕು ಎಂದರು.
ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎಚ್. ಬಿಲ್ಲಪ್ಪ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತ ಜಗನ್ನಾಥ ಸಾಗರ, ಲಕ್ಷ್ಮಣ ಉಪ್ಪಾರ ಮಾತನಾಡಿದರು. ಶರಣ ಬಂಡಿ, ಶಾಂತಪ್ಪ ಗೋಟಖೀಂಡಿ, ಎನ್.ಎಸ್. ವರದರಾಜು, ಬಸವರಾಜ ಮೆಳವಂಕಿ, ಉಮಾದೇವಿ ಬಸಾಪುರ, ಈಶ್ವರ ಶಿರಕೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.