ಸಮಾಜದ ಆರೋಗ್ಯ ಮಹಿಳೆಯರ ಕೈಲಿದೆ
Team Udayavani, Oct 30, 2017, 12:37 PM IST
ಧಾರವಾಡ: ಸಮಾಜದ ಸ್ವಾಸ್ಥ ಕಾಪಾಡುವುದು ಮಹಿಳೆಯರ ಕೈಯಲ್ಲಿಯೇ ಇದೆ ಎಂದು ಹೃದ್ರೋಗ ತಜ್ಞೆ ಹಾಗೂ ವಿಚಾರವಾದಿ ಡಾ| ವಿಜಯಲಕೀ ಬಾಳೇಕುಂದ್ರಿ ಹೇಳಿದರು. ನಗರದ ಕವಿಸಂನಲ್ಲಿ ಮಹಿಳಾ ಮಂಟಪದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶ-2017ರ ಸಮಕಾಲೀನ ಸಂದರ್ಭದಲ್ಲಿ ಮಹಿಳೆ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಹೆಣ್ಣು ಮನಸ್ಸು ಮಾಡಿದರೆ ಅಂದುಕೊಂಡಿದ್ದನ್ನು ಸಾಧಿಸಬಹುದು. ನಮ್ಮ ಸಂಸ್ಕೃತಿಯ ಉಳಿವು ಹೆಣ್ಣು ಮಕ್ಕಳ ಕೈಯಲ್ಲಿದ್ದು, ಕೋಪ ಬಿಟ್ಟು ಪ್ರೀತಿ ಹಂಚಬೇಕು. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ ನಮ್ಮತನ ನಾವು ಉಳಿಸಬೇಕು.
ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠಶಾಲೆ ಎಂಬುದನ್ನು ನಮ್ಮ ಹಿರಿಯರು ಕಲಿಸಿ ಕೊಟ್ಟಿದ್ದು, ಅದೇ ಮಾರ್ಗದಲ್ಲಿ ನಾವು ಮುನ್ನಡೆಯಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಾಡೋಜ ಡಾ| ಪಾಟೀಲ್ ಪುಟ್ಟಪ್ಪ ಮಾತನಾಡಿ, ಮನುಷ್ಯ ಯಾವಾಗಲು ಸರಳವಾಗಿ ಬದುಕಬೇಕು.
ಕಡಿಮೆ ಆಹಾರ ಸೇವಿಸುವುದರಿಂದ ದೀರ್ಘ ಆಯುಷ್ಯ ಪಡೆಯಬಹುದು. ಇಂದು ಮಹಿಳೆಯರು ಉನ್ನತ ಸ್ಥಾನಗಳಲ್ಲಿ ಮಿಂಚುತ್ತಿರುವುದು ಖುಷಿಯ ವಿಷಯ. ಮಹಿಳಾ ಚಿಂತನೆಗಳಿಗೆ ಸಂಬಂಧಿಸಿದ ಪುಸ್ತಕಗಳು ಹೆಚ್ಚು-ಹೆಚ್ಚು ಹೊರಬರಲಿ ಎಂದರು.
ಇದೇ ವೇಳೆ ಮಹಿಳೆಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಗೋಷ್ಠಿಯಲ್ಲಿ ಪತ್ರಕರ್ತ ರವಿಕುಮಾರ ಕಗ್ಗಣ್ಣವರ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ಕೃಷ್ಣ ಜೋಶಿ, ಜಾನಪದ ಕಲಾವಿದೆ ವಿಶ್ವೇಶ್ವರಿ ಹಿರೇಮಠ, ದೂರದರ್ಶನ ನಿರ್ದೇಶಕ ಮಹೇಶ ಜೋಶಿ, ಡಾ|ಜೀನದತ್ತ ಹಡಗಲಿ, ಲಲಿತಾ ಪಾಟೀಲ್, ಭಾಗೀರಥಿ ಕಲಕಾಮಕರ, ಪದ್ಮಜಾ ಉಮರ್ಜಿ, ಡಾ| ಇಸಾಬೆಲ್ಲಾ ಜೆ. ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.