ಪ್ರಜ್ವಲ್ ಸ್ಪರ್ಧೆ ಗೌಡರಿಗೆ ಬಿಟ್ಟಿದ್ದು: ಭವಾನಿ ರೇವಣ್ಣ
Team Udayavani, Oct 31, 2017, 7:00 AM IST
ಬೆಂಗಳೂರು:“ಪ್ರಜ್ವಲ್ ಚುನಾವಣೆ ಸ್ಪರ್ಧೆ ಬಗ್ಗೆ ಎಚ್.ಡಿ. ದೇವೇಗೌಡರು ತೀರ್ಮಾನಿಸುತ್ತಾರೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಪತ್ನಿ, ಹಾಸನ ಜಿಪಂ ಸದಸ್ಯೆ ಭವಾನಿ ರೇವಣ್ಣ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು, ಅವರಿಗೆ ಎಲ್ಲಿ ಟಿಕೆಟ್ ನೀಡಬೇಕು ಎಂಬುದ ದೇವೇಗೌಡರಿಗೆ ಬಿಟ್ಟ ವಿಚಾರ. ನಮ್ಮ ಕುಟುಂಬದಲ್ಲೇ ಏನೇ ತೀರ್ಮಾನವಾದರೂ ದೇವೇಗೌಡರದೇ ಅಂತಿಮ ನಿರ್ಧಾರ ಎಂದು ಹೇಳಿದರು.
ರಾಜಕೀಯ ವಿಚಾರ ಹಾಗೂ ಪಕ್ಷದ ವಿಷಯಕ್ಕೆ ಸಂಬಂಧಿಸಿದಂತೆ ಬಾಲಿಶ ಹೇಳಿಕೆ ಕೊಡಬೇಡ ಎಂದು ನಾನು ಪ್ರಜ್ವಲ್ಗೆ ತಿಳಿ ಹೇಳಿದ್ದೇನೆ ಎಂದರು. ಅನಿತಾ ಕುಮಾರಸ್ವಾಮಿ ಅವರು ನನ್ನ ಸಹೋದರಿ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ದೊರೆತರೆ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನನ್ನ ಮುಂದಿಲ್ಲ. ನಾನು ಒಂದೇ ಕ್ಷೇತ್ರಕ್ಕೆ ಸೀಮಿತವಾಗುವ
ಬದಲು ಪಕ್ಷದ ಕಾರ್ಯಕರ್ತೆಯಾಗಿ ಎಲ್ಲ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದರು. ಒಂದೊಮ್ಮೆ ಕಾರ್ಯಕತರು
ಹಾಗೂ ಮುಖಂಡರು ವಿಧಾನಸಭೆ ಚುನಾವಣೆಗೆ ಒತ್ತಡ ತಂದು ಗೌಡರು ಒಪ್ಪಿಗೆ ಸೂಚಿಸಿದರೆ ಎಂಬ ಪ್ರಶ್ನೆಗೆ, ಅದು
ದೇವರ ಇಚ್ಛೆ, ನೋಡೋಣ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.