ಭಾಷೆಯ ಹೆಸರಿನಲ್ಲಿ ದ್ವೇಷ ಸೃಷ್ಟಿಯಾಗಬಾರದು
Team Udayavani, Nov 2, 2017, 10:02 AM IST
ಪುರಭವನ: ಕನ್ನಡ ಭಾಷಾ ಪ್ರೀತಿಯನ್ನು ನಾವು ಬೆಳೆಸಬೇಕಿದೆ. ಆದರೆ, ಇದನ್ನೇ ನೆಪವಾಗಿರಿಸಿ ಇತರ ಭಾಷಿಕ ಮನುಸ್ಸುಗಳನ್ನು ವಿರೋಧಿಸುವ ಮನಸ್ಥಿತಿ ಆಗಬಾರದು. ಹೀಗಾಗಿ ಭಾಷೆಯ ಹೆಸರಿನಲ್ಲಿ ದ್ವೇಷ ಸೃಷ್ಟಿಯಾಗಲೇಬಾರದು ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಬಿ.ಎಂ. ಹೆಗ್ಡೆ ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಬುಧವಾರ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾಷೆ ಕೇವಲ ಸಂಕೇತ ಮಾತ್ರ. ಒಬ್ಬರನ್ನೊಬ್ಬರು ಪ್ರೀತಿಸಿ ಬದುಕು ನಡೆಸಬೇಕು. ಈ ವೇಳೆ ಭಾಷೆಯ ಹೆಸರಿನಲ್ಲಿ ಮಾನವ ತತ್ವಕ್ಕೆ ಧಕ್ಕೆ ಆಗಕೂಡದು. ಈಗಾಗಲೇ ಇಂತಹ ಪರಿಪಾಠ ನಮ್ಮಲ್ಲಿ ಆರಂಭವಾಗಿದೆ ಎಂದು ಹೇಳಿದರು.
ರಾಜ್ಯ ರಾಜ್ಯಗಳ ಮಧ್ಯೆ ಭಾಷೆಯ ವಿಚಾರದಲ್ಲಿ ಹೊಡೆದಾಟ ಆಗುವ ಪರಿಸ್ಥಿತಿಗೆ ಬಂದಿದೆ. ಈಗ ಮತ್ತೆ ಇನ್ನಷ್ಟು ಅಪಾಯವೂ ಎದುರಾಗಿದ್ದು, ನಮ್ಮೊಳಗೆ ತುಳುನಾಡು ಬೇಕು ಎಂಬ ಕೂಗು ಕೂಡ ಎದುರಾಗಿದೆ. ಈ ಮೂಲಕ ನಮ್ಮ ರಾಜ್ಯದೊಳಗೇ ಹೋರಾಟ ನಡೆಸಬೇಕಾದ ಪರಿಸ್ಥಿತಿ ದುರದೃಷ್ಟಕರ ಎಂದರು.
ಅಶಕ್ತರಿಗೆ ಬೆಳಕಾಗುವ ಕಾರ್ಯವನ್ನು ನಾವೆಲ್ಲ ಮಾಡುವ ಮುಖೇನ ಕನ್ನಡ ರಾಜ್ಯೋತ್ಸವವನ್ನು ಆಚರಿಸೋಣ. ಸತ್ಯವಂತರಾಗಿ, ಲಂಚ ಕೊಡುವುದಿಲ್ಲ ಹಾಗೂ ತೆಗೆದುಕೊಳ್ಳುವುದಿಲ್ಲ ಎಂಬ ಪ್ರತಿಜ್ಞೆಯೊಂದಿಗೆ ಬದುಕೋಣ ಎಂದರು. ಹೊರನಾಡು ಹಾಗೂ ಸ್ಥಳೀಯ ಬಾಲಪ್ರತಿಭೆಗಳಿಗೆ ‘ಸಾಧಕ ಪುರಸ್ಕಾರ’ ಪ್ರದಾನ ಮಾಡಿ ಗೌರವಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ
ಜಾನಪದ ಪರಿಷತ್ನ ಸುರೇಶ್ ಶೆಟ್ಟಿ ಯೆಯ್ನಾಡಿ, ಪ್ರಮುಖರಾದ ಶ್ರೀನಿವಾಸ್ ಉಪಾಧ್ಯಾಯ, ಎಚ್.ಬಿ.ಎಲ್. ರಾವ್, ಶಿವರಾಮ್, ಜ್ಞಾನೇಶ್, ಚಂದ್ರಹಾಸ್ ರೈ, ಐತಪ್ಪ ನಾೖಕ್, ವಿಜಯಲಕ್ಷ್ಮೀ ಶೆಟ್ಟಿ, ಪೂರ್ಣಿಮಾ ಪೇಜಾವರ ಉಪಸ್ಥಿತರಿದ್ದರು. ಉಮೇಶ್ ಸ್ವಾಗತಿಸಿ, ಸುಧಾಕರ ರಾವ್ ಪೇಜಾವರ ಸಮ್ಮಾನಿತರ ವಿವರ ನೀಡಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.
ಕವಿಗೋಷ್ಠಿ-ಸಾಂಸ್ಕೃತಿಕ ಸಂಭ್ರಮ
ಶಾಂತಾ ಕುಂಟಿನಿ, ಎಂ.ಪಿ.ಬಶೀರ್ ಅಹಮ್ಮದ್, ಗುಣಾಜೆ ರಾಮಚಂದ್ರ ಭಟ್ ಹಾಗೂ ನಾಗರಾಜ ಖಾರ್ವಿ ಅಳಿಕೆ ಅವರಿಂದ ಕವಿಗೋಷ್ಠಿ ನಡೆಯಿತು. ರೋಮನ್ ಮತ್ತು ಕ್ಯಾಥರೀನ್ ಲೋಬೋ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮಧುಸೂದನ ಕುಶೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ಮಂಚಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂತ್ರ ನಾಟ್ಯ ಕಲಾ ಗುರುಕುಲದ ವಿದ್ವಾನ್ ಶ್ರವಣ ಉಳ್ಳಾಲ್ ಅವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.