‘ನೆಲ ಜಲದ ರಕ್ಷಣೆಗೆ ಒಗ್ಗಟ್ಟಾಗಿ’
Team Udayavani, Nov 2, 2017, 10:45 AM IST
ಬೆಳ್ತಂಗಡಿ: ಏಕೀಕರಣದ ಬಳಿಕ ನಾಡಹಬ್ಬವಾಗಿ ಆಚರಿಸಲ್ಪಡುತ್ತಿರುವ ರಾಜ್ಯೋತ್ಸವ ಆಚರಣೆಗಷ್ಟೇ
ಸೀಮಿತವಾಗಬಾರದು. ಕನ್ನಡ ನಾಡಿನ ನೆಲ ಜಲದ ವಿಷಯ ಬಂದಾಗ ನಮ್ಮ ಒಗ್ಗಟ್ಟನ್ನು ನಾವು ಪ್ರದರ್ಶಿಸಿ ಅದನ್ನು
ಒಟ್ಟಾಗಿ ಕಾಪಾಡಬೇಕು ಎಂದು ತಹಶೀಲ್ದಾರ್ ಮಹಮ್ಮದ್ ಇಸಾಕ್ ಹೇಳಿದರು.
ಅವರು ಬುಧವಾರ ವಾಣಿ ಶಿಕ್ಷಣ ಸಂಸ್ಥೆಗಳ ಪ್ರಾಂಗಣದಲ್ಲಿ ತಾಲೂಕಿನ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣಗೈದು ಮಾತನಾಡಿದರು.
ನಿಡ್ಲೆ ಸರಕಾರಿ ಪ್ರೌಢಶಾಲೆ ಸಹಶಿಕ್ಷಕ ವಿನಾಯಕ ಜೋಷಿ, ರಾಜ್ಯೋತ್ಸವಕ್ಕೆ ಮುಖ್ಯ ಕಾರಣ ಸರ್ದಾರ್ ವಲ್ಲಭ ಬಾಯಿ ಪಟೇಲರು. ಅವರು ಸಂಸ್ಥಾನಗಳ ಆಡಳಿತ ಕೊನೆಗಾಣಿಸಿ ರಾಜ್ಯಾಡಳಿತ ಬರುವಂತೆ ಮಾಡದೇ ಇದ್ದರೆ ಇಂತಹ
ಏಕೀಕರಣ ಚಳವಳಿ ಮೂಲಕ ಪಡೆದ ರಾಜ್ಯ ದೊರೆಯುತ್ತಿರಲಿಲ್ಲ. ಭಾಷಾವಾರು ವಿಂಗಡನೆಯಾಗದೇ ರಾಜಾಡಳಿತವಿದ್ದರೆ ಸ್ವಾತಂತ್ರ್ಯದ ಸುಖ ದೊರೆಯುತ್ತಿರಲಿಲ್ಲ . ನಮ್ಮ ನಾಡಿನ ಭಾಷೆ ಬೆಳೆಸುವುದು ಹೇಗೆ ಎಂಬ ಪ್ರಶ್ನೆ ಇಂದಿಗೂ ಇದೆ ಎಂದರು.
ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ನಿವೃತ್ತ ಸೈನ್ಯಾಧಿಕಾರಿ ಎಂ.ಆರ್. ಜೈನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಸವರಾಜ್ ಅಯ್ಯಣ್ಣನವರ್, ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ನಾರಾಯಣ ಗೌಡ, ಶಿಕ್ಷಣಾಧಿಕಾರಿ ಗುರುಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾ ಮಧು, ತಾಲೂಕು ಮಹಿಳಾ ಒಕ್ಕೂಟ ಅಧ್ಯಕ್ಷೆ ಶಾಂತಾ ಜೆ.ಬಂಗೇರ, ಹೋಮ್ ಗಾರ್ಡ್ ಮುಖ್ಯಸ್ಥ ಜಯಾನಂದ್ ಲಾೖಲ, ದೈಹಿಕ ಶಿಕ್ಷಣ ನಿರೀಕ್ಷಕ ಯಶೋಧರ ಸುವರ್ಣ ಉಪಸ್ಥಿತರಿದ್ದರು.
ಕೃಷಿ ಸಹಾಯಕ ನಿರ್ದೇಶಕ ತಿಲಕ್ ಪ್ರಸಾದ್ ಜಿ. ಸ್ವಾಗತಿಸಿದರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.