ವಾರದ ಹಿಂದೆ ಕಾಣೆಯಾಗಿದ್ದ ಮಕ್ಕಳು ತಿರುಪತಿಯಲ್ಲಿ ಪತ್ತೆ


Team Udayavani, Nov 3, 2017, 12:43 PM IST

sanjay-nagar-poi.jpg

ಬೆಂಗಳೂರು: ಕಳೆದ ಏಳು ದಿನಗಳ ಹಿಂದೆ ದುಷ್ಕರ್ಮಿಯಿಂದ ಅಪಹರಣಕ್ಕೊಳಗಾದ ನಮ್ರತಾ (7) ನಮಿತ್‌ (5) ತಿರುಪತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳನ್ನು ದುಷ್ಕರ್ಮಿಯಿಂದ ರಕ್ಷಿಸಿರುವ ಸಂಜಯ್‌ನಗರ ಠಾಣೆ  ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ. ಮಕ್ಕಳಿಗೆ ಸಿಹಿ ತಿಂಡಿ ಕೊಡಿಸುವ ನೆಪ ಹೇಳಿ ಅಪಹರಿಸಿದ್ದ ಆರೋಪಿ ವಿನೋದ್‌ (24) ಪೊಲೀಸರ ಬೆನ್ನುಬಿದ್ದಿದ ಸುದ್ದಿ ತಿಳಿದ ಕೂಡಲೇ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಚಿಂದಿ ಆಯುವ ಆರೋಪಿ ವಿನೋದ್‌ ಅ.25ರ ರಾತ್ರಿ ಭೂಪಸಂದ್ರ ಮುಖ್ಯರಸ್ತೆಯಿಂದ ಇಬ್ಬರೂ ಮಕ್ಕಳನ್ನು ಅಪಹರಿಸಿದ್ದ, ಬಳಿಕ ಮಕ್ಕಳಿಗೆ ನಿಮ್ಮ ಅಪ್ಪ-ಅಮ್ಮ ತಿರುಪತಿಗೆ ಹೋಗಿದ್ದಾರೆ ಎಂದು ನಂಬಿಸಿ ತಿರುಪತಿ ಹೋಗಿ ಬರೋಣ ಎಂದು ಹೇಳಿ ಯಾಮಾರಿಸಿದ್ದ. ಅಲ್ಲಿ ಪರಿಚಯಸ್ಥ ವೆಂಕಟೇಶ್‌ ಎಂಬುವವರ ಬಳಿ ನನ್ನ ಮಕ್ಕಳಿಬ್ಬರಿಗೂ ಕೆಲಸ ಕೊಡಿ ಎಂದು ಕೇಳಿದ್ದ ಎಂದು ಪೊಲೀಸರು ತಿಳಿಸಿದರು.

ವಂಡರ್‌ಗಣ್ಣು ನೀಡಿತು ಆರೋಪಿ ಸುಳಿವು!:  ಈ ಮಧ್ಯೆ ಮಕ್ಕಳ ಸುಳಿವು ಪತ್ತೆಗೆ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಭೂಪಸಂದ್ರ, ಗೆದ್ದಲಹಳ್ಳಿ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಕೆಲವೆಡೆ ಮಾಹಿತಿ ಕಲೆಹಾಕಿ, ಸಾರ್ವಜನಿಕರು ಆಟೋ ಚಾಲಕರೂ ಸೇರಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು.

ಮತ್ತೂಂದೆಡೆ ಆರೋಪಿ ಮಕ್ಕಳಿಬ್ಬರನ್ನೂ ತಿರುಪತಿಯಲ್ಲಿ ಕೆಲಸಕ್ಕೆ ಸೇರಿಸಲು ವಿಫ‌ಲನಾಗಿದ್ದು ಅಲ್ಲಿಯೇ ಉಳಿದುಕೊಂಡಿದ್ದ. ಕೆಲವರ್ಷಗಳ ಹಿಂದೆ ಬೆಂಗಳೂರಲ್ಲಿ ನೆಲೆಸಿದ್ದ ವೆಂಕಟೇಶ್‌ ಬುಧವಾರ ರಾತ್ರಿ ಬೆಂಗಳೂರಿನ  ಸ್ನೇಹಿತ ನವೀನ್‌ಗೆ ಕರೆ ಮಾಡಿದ್ದ ವೇಳೆ ವಿನೋದ್‌ ಎಂಬ ವ್ಯಕ್ತಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಂದಿದ್ದು, ಹೆಬ್ಟಾಳ ಎಂದು ವಿಳಾಸ ಹೇಳುತ್ತಿದ್ದಾರೆ ಎಂದಿದ್ದಾನೆ. ಈ ವಿಷಯ ತಿಳಿದ ಕೂಡಲೇ ನವೀನ್‌ ಠಾಣೆಗೆ ಬಂದು ಮಾಹಿತಿ ನೀಡಿದ್ದಾನೆ.

ಅದರಂತೆ ಪೊಲೀಸರು ವೆಂಕಟೇಶ್‌ ಜೊತೆ ಮಾತನಾಡಿ ಕರೆದುಕೊಂಡು ಬಂದ ವ್ಯಕ್ತಿ ಹೇಗಿದ್ದ ಎಂದು ಕೇಳಿದ್ದು, ಆತನಿಗೆ ವಂಡರ್‌ಗಣ್ಣಿದೆ ಎಂದು ಮುಖಚಹರೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಯ ಫೋಟೋವನ್ನು ವೆಂಕಟೇಶ್‌ ಅವರಿಂದ ವಾಟ್ಸಾಪ್‌ ಮಾಡಿಕೊಂಡಿದ್ದಾರೆ. ಅಲ್ಲದೇ ಮಕ್ಕಳು ಅಲ್ಲಿಯೇ ಇರುವುದು ಖಚಿತವಾಗಿದ್ದು, ಕೂಡಲೇ ಸಿಬ್ಬಂದಿ ಹಾಗೂ ಮಕ್ಕಳ ಪೋಷಕರನ್ನು ತಿರುಪತಿಗೆ ಕಳುಹಿಸಿ ಮಕ್ಕಳನ್ನು ಕರೆತರಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಆರೋಪಿ ವಿನೋದ್‌ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಡಕಾಯಿತಿ ಯತ್ನ ಪ್ರಕರಣವಿದೆ. ಪೊಲೀಸರಿಗೆ ಮಾಹಿತಿ ಗೊತ್ತಾಗಿದೆ ಎಂದು ತಿಳಿದ ಕೂಡಲೇ ವಿನೋದ್‌ ಎಸ್ಕೇಪ್‌ ಆಗಿದ್ದಾನೆ. ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.