ದೊಡ್ಡಜಾಲ ಕುರಿತು ಪ್ರಧಾನಿ ಕುತೂಹಲ
Team Udayavani, Nov 3, 2017, 12:45 PM IST
ಯಲಹಂಕ: ಗ್ರಾಮ ಪಂಚಾಯಿತಿಗಳು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ ನರೇಂದ್ರಸಿಂಗ್ ತೋಮರ್ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ದೊಡ್ಡಜಾಲ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ದೊರೆತಿರುವ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯ 15 ಸದಸ್ಯರ ತಂಡದೊಂದಿಗೆ ದೊಡ್ಡಜಾಲಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅವಲೋಕಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಗ್ರಾಮ ಪಂಚಾಯಿತಿ ಬಗ್ಗೆ ಸಾಕಷ್ಟು ಕುತೂಹಲವಿದೆ. ಹಾಗಾಗಿ ಪಂಚಾಯಿತಿಯ ಕುರಿತಂತೆ ಸಂಪೂರ್ಣ ವರದಿ ಸಿದ್ಧಪಡಿಸಿಲು ಸೂಚಿಸಿದ್ದಾರೆ. ಈ ಗ್ರಾಮ ಪಂಚಾಯಿತಿ ಕಾರ್ಯಕ್ರಮಗಳನ್ನು ಇತರೆ ಪಂಚಾಯಿತಿಗಳಿಗೂ ವಿಸ್ತರಿಸಲು ಆಶಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಶೇ.100ರಷ್ಟು ಜನರಿಗೆ ತಲುಪಿಸುವಲ್ಲಿ ದೊಡ್ಡಜಾಲ ಪಂಚಾಯತಿ ಕಾರ್ಯ ಮಾದರಿಯಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಇಂಥ ಕಾರ್ಯಗಳು ಪ್ರೇರೇಪಣೆಯಾಗಿವೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಕೆ. ಮಹೇಶ್ ಕುಮರ್ ಮಾತನಾಡಿ, ಚಿಕ್ಕನಹಳ್ಳಿ ಗ್ರಾಮದಲ್ಲಿ ಚರಂಡಿ ನೀರು ಬಿಡದೆ ಇಂಗುಗುಂಡಿಗೆ ನೀರು ಹರಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಅಂತರ್ಜಲ ಹೆಚ್ಚಾಗುವ ಜತೆಗೆ ಸೊಳ್ಳೆಗಳ ಕಾಟ ತಪ್ಪಿದೆ. ಇದೇ ವೇಳೆ ಸೋಲಾರ್ ಗ್ರೀಡ್ ಮೂಲಕ ವಿದ್ಯುತ್ ಬೀದಿ ದೀಪ ಅಳವಡಿಸಿ ಕತ್ತಲೆ ಮುಕ್ತ ಗ್ರಾಮವನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು.
ಪಿಡಿಒ ಗಂಗಾರಾಮ್ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ. ಇದೀಗ ಕೇಂದ್ರ ಸಚಿವರ ನಿಯೋಗ ಗ್ರಾಮಕ್ಕೆ ಭೇಟಿ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೇರೇಪಣೆ ದೊರೆತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.