ನೂರಾರು ಕೋಟಿ ಸೆಸ್‌ ಬಾಕಿ: ಗ್ರಂಥಾಲಯ ಅಭಿವೃದ್ಧಿ ಕುಂಠಿತ


Team Udayavani, Nov 3, 2017, 12:45 PM IST

siddalimghaih.jpg

ಬೆಂಗಳೂರು: ಬಿಬಿಎಂಪಿ ಸೇರಿದಂತೆ ನಾಡಿನ ಎಲ್ಲ ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ಇಲಾಖೆಗೆ ಸೇರಬೇಕಾದ ನೂರಾರು ಕೋಟಿ ರೂ. ಸೆಸ್‌ ಬಾಕಿ ಉಳಿಸಿಕೊಂಡಿದ್ದು, ಗ್ರಂಥಾಲಯ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದು ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಆರೋಪಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಗುರುವಾರ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಚನ್ನಪಟ್ಟಣದ ಪಲ್ಲವ ಪ್ರಕಾಶನ ಸಂಸ್ಥೆಗೆ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ “ಅಂಕಿತ ಪುಸ್ತಕ ಪುರಸ್ಕಾರ’ ಪ್ರದಾನ ಮಾಡಿ ಮಾತನಾಡಿದರು.

ಸಾರ್ವಜನಿಕರು ಕಟ್ಟುವ ಕಂದಾಯದಲ್ಲಿ ಗ್ರಂಥಾಲಯ ಸೇರಿದಂತೆ ವಿವಿಧ ಇಲಾಖೆಗಳ ಸೆಸ್‌ ಕೂಡ ಸೇರಿದೆ. ಬೆಂಗಳೂರು ಮಹಾನಗರ ಪಾಲಿಕೆಯೊಂದೇ ಸುಮಾರು 60ರಿಂದ 70 ಕೋಟಿ ರೂ. ಗ್ರಂಥಾಲಯ ಸೆಸ್‌ ಪಾವತಿಸಬೇಕಿದೆ. ಆದರೆ, ಅದನ್ನು ನೀಡದೆ ವಿವಿಧ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಅಭಿವೃದ್ಧಿ ಕುಂಠಿತ: ಇದೇ ರೀತಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳು, ಪುರಸಭೆ, ಪಟ್ಟಣ ಪಂಚಾಯತ್‌, ನಗರಸಭೆಗಳು ನೂರಾರು ಕೋಟಿ ರೂ.ಸೆಸ್‌ ಬಾಕಿ ಉಳಿಸಿಕೊಂಡಿವೆ. ಇದರಿಂದ ಓದುಗ ಸಂಸ್ಕೃತಿಗೆ ಪೂರಕವಾಗಿರುವ ಗ್ರಂಥಾಲಯಗಳ ಅಭಿವೃದ್ಧಿ ಕುಂಠಿತವಾಗುತ್ತಿದೆ. ಸರ್ಕಾರ ಈ ಬಗ್ಗೆ ಕ್ರಮಕೈಗೊಂಡು ಗ್ರಂಥಾಲಯಗಳಿಗೆ ಸೆಸ್‌ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. 

ಒಳ್ಳೆಯ ಪುಸ್ತಕಗಳನ್ನು ಓದುಗರಿಗೆ ಒದಗಿಸುವ ಜವಾಬ್ದಾರಿ ಲೇಖಕರಷ್ಟೇ ಪ್ರಕಾಶಕರಿಗೂ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಪ್ರಾಚೀನ ಕನ್ನಡ ಸಾಹಿತ್ಯವನ್ನು ತಪ್ಪು ತಪ್ಪಾಗಿ ಓದುವ, ಇಲ್ಲವೇ ತೆಗೆದು ಹಾಕುವಂತ ಕೆಲಸವನ್ನು ಪ್ರಾಧ್ಯಾಪಕರೇ ಮಾಡುತ್ತಿದ್ದಾರೆ. ವಿದ್ವತ್‌ ಕ್ಷೇತ್ರದಲ್ಲಿ ಇಂತಹ ಬೆಳವಣಿಗೆ ಅಪಾಯಕಾರಿ.

ಈ ಕುರಿತು ಹಳೆಗನ್ನಡ ಇಲ್ಲವೇ ಪ್ರಾಚೀನ ಕನ್ನಡ ಸಾಹಿತ್ಯ ಓದುವ, ಅರ್ಥ ಮಾಡಿಕೊಳ್ಳುವ ಮತ್ತು ಬೋಧಿಸುವುದರ ಕುರಿತು ವಿಶ್ವವಿದ್ಯಾಲಯಗಳು ಪ್ರಾಧ್ಯಾಪಕರಿಗೆ ತರಬೇತಿ ನೀಡುವುದು ಒಳ್ಳೆಯದು ಎಂದು ಸಲಹೆ ನೀಡಿದರು. ಅಧ್ಯಾಪಕರು ಕೈತುಂಬ ಸಂಬಳ ಪಡೆಯುವಾಗ ಪುಸ್ತಕಗಳನ್ನು ಖರೀದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.

ಪ್ರಕಾಶಕರಿಗೆ ಒತ್ತಾಸೆಯಾಗಲಿ: ಪ್ರಕಾಶಕರು ಪುಸ್ತಕ ಪ್ರಕಟಿಸಿ ಸಂಕಷ್ಟದಲ್ಲಿ ಇರುತ್ತಾರೆ. ಅವರಿಗೆ ಆಸರೆಯಾಗಬೇಕಾದ ಸರ್ಕಾರ ಖರೀದಿಯನ್ನೇ ನಿಲ್ಲಿಸಿದಾಗ ಪ್ರಕಾಶಕರಿಗೆ ನಷ್ಟವಾಗುತ್ತದೆ. ಕನ್ನಡಿಗರಿಗೆ ಇನ್ನೂ ಓದುವ ಗುಣ ಬಂದಿಲ್ಲ. ಅವರು ಹೆಚ್ಚು ಹೆಚ್ಚು ಕನ್ನಡ ಪುಸ್ತಕಗಳನ್ನು ಖರೀದಿಸಿ ಓದುವುದನ್ನು ಅಭ್ಯಾಸ ಮಾಡಿಕೊಳ್ಳುವ ಅಗತ್ಯವಿದೆ. ಹಾಗೆಯೇ ಸರ್ಕಾರ ಪ್ರಕಾಶಕರಿಗೆ ಒತ್ತಾಸೆಯಾಗಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.