ಆಧಾರ್‌ ಲಿಂಕ್‌ಗೆ ಕೊನೇ ದಿನ ಸೂಚಿಸಿ; ಗಾಬರಿಗೊಳಿಸಬೇಡಿ


Team Udayavani, Nov 4, 2017, 11:40 AM IST

04-25.jpg

ಹೊಸದಿಲ್ಲಿ: “ಆಧಾರ್‌ ಸಂಖ್ಯೆಯನ್ನು ಮೊಬೈಲ್‌, ಬ್ಯಾಂಕ್‌ ಖಾತೆ ಜತೆಗೆ ಲಿಂಕ್‌ ಮಾಡದೇ ಇದ್ದ ಕೂಡಲೇ ಏನೋ ಆಗಿ ಹೋಗುತ್ತದೆ ಎಂಬಂತೆ ಚಿತ್ರಣ ನೀಡಬೇಡಿ. ಜನರನ್ನು ಗಾಬರಿಗೊಳಿಸಬೇಡಿ.’ ಹೀಗೆಂದು ಬ್ಯಾಂಕ್‌, ದೂರಸಂಪರ್ಕ ಕಂಪೆನಿಗಳಿಗೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ. ಲಿಂಕ್‌ ಮಾಡುವಂತೆ ಮೊಬೈಲ್‌ಗ‌ಳಿಗೆ ಸಂದೇಶ ನೀಡುವ ಸಂದರ್ಭದಲ್ಲಿ ಕೊನೆಯ ದಿನಾಂಕವನ್ನು ನಮೂದಿಸಲೇ ಬೇಕು ಎಂದೂ ಹೇಳಿದೆ. ಜತೆಗೆ, ಆಧಾರ್‌ ವಿಚಾರದಲ್ಲಿ ಯಾವುದೇ ಮಧ್ಯಾಂತರ ತಡೆಯಾಜ್ಞೆ ನೀಡುವುದಿಲ್ಲ ಎಂದು ನ್ಯಾ| ಎ.ಕೆ. ಸಿಕ್ರಿ ನೇತೃತ್ವದ ನ್ಯಾಯಪೀಠ ಶುಕ್ರವಾರ ಹೇಳಿದೆ.

ಪದೇ ಪದೆ ಬ್ಯಾಂಕ್‌, ಟೆಲಿಕಾಂ ಕಂಪೆನಿಗಳು ಎಸ್‌ಎಂಎಸ್‌ ಕಳುಹಿಸುತ್ತಿರುವುದನ್ನು ಬಲವಾಗಿಯೇ ತರಾಟೆಗೆ ತೆಗೆದುಕೊಂಡ ನ್ಯಾ| ಎ.ಕೆ. ಸಿಕ್ರಿ, “ಮೊಬೈಲ್‌ ಕಂಪೆನಿಗಳಿಂದ ಮತ್ತು ಬ್ಯಾಂಕ್‌ಗಳಿಂದ ನನಗೇ ಪದೇ ಪದೆ ಫೋನ್‌, ಸಂದೇಶಗಳು ಬರುತ್ತಿವೆ. ಸುಖಾಸುಮ್ಮನೆ ಹೆದರಿಸುವ ಬದಲು, ಯಾವ ದಿನಾಂಕದ ಒಳಗಾಗಿ ಆಧಾರ್‌ ಲಿಂಕ್‌ ಮಾಡಬೇಕು ಎಂಬುದನ್ನು ನಮೂದಿಸಿ’ ಎಂದು ಖಡಕ್‌ ಆಗಿ ಹೇಳಿದರು.

ಆಧಾರ್‌ ಜೋಡಣೆ ಮಾಡದೇ ಇದ್ದರೆ ಮೊಬೈಲ್‌ ಕಂಪೆನಿಗಳು, ಬ್ಯಾಂಕ್‌ಗಳು ಹೆದರಿಸುವ ರೀತಿಯಲ್ಲಿ ಸಂದೇಶ ಕಳುಹಿಸುತ್ತಿವೆ ಎಂದು ಹಿರಿಯ ನ್ಯಾಯವಾದಿ ಕೆ.ವಿ.ವಿಶ್ವನಾಥನ್‌ ವಾದಿಸಿದರು. “ಇಂಥ ಸಂದೇಶಗಳಲ್ಲಿ ಲಿಂಕ್‌ ಮಾಡದೇ ಇದ್ದರೆ ಬ್ಯಾಂಕ್‌ ಖಾತೆ ಅಥವಾ ಮೊಬೈಲ್‌ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಲಾಗುತ್ತದೆ. ಇದರಿಂದಾಗಿ ಸಾರ್ವಜನಿ ಕರಲ್ಲಿ ಅನಗತ್ಯ ಗೊಂದಲ, ಭೀತಿ ಸೃಷ್ಟಿಯಾಗುತ್ತದೆ. ಹೀಗಾಗಿ, ಕೇಂದ್ರ ಸರಕಾರ ಬ್ಯಾಂಕ್‌ ಮತ್ತು ದೂರ ಸಂಪರ್ಕ ಕಂಪನಿಗಳಿಗೆ ಆ ರೀತಿ ನಡೆದುಕೊಳ್ಳದಂತೆ ಆದೇಶಿಸಬೇಕು’ ಎಂದು ಮನವಿ ಮಾಡಿದರು. ಅದಕ್ಕೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಆಕ್ಷೇಪಿಸಿ ಇದೊಂದು ಕೇವಲ ಮೌಖೀಕ ವಾದ ಎಂದು ತಿರುಗೇಟು ನೀಡಿದರು. ಜತೆಗೆ, ದೇಶದಲ್ಲಿ 118 ಕೋಟಿ ಮಂದಿ ಈಗಾಗಲೇ ಆಧಾರ್‌ ಕಾರ್ಡ್‌ ಹೊಂದಿದ್ದು, ಅದರ ವಿರುದ್ಧ ಯಾವುದೇ ಆದೇಶ ಬಂದರೂ ಸಮಸ್ಯೆಯಾಗುತ್ತದೆ ಎಂದು ಹೇಳಿದರು.

ಮಾಸಾಂತ್ಯದಿಂದ ವಿಚಾರಣೆ: ಆಧಾರ್‌ಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಸಂವಿಧಾನ ಪೀಠ ಮಾಸಾಂತ್ಯದಿಂದ ಶುರು ಮಾಡಲಿದೆ. ಆಧಾರ್‌ಗೆ ಸಂಬಂಧಿಸಿದಂತೆ ಇನ್ನೂ ಹಲವು ಅರ್ಜಿಗಳು ಸಲ್ಲಿಕೆಯಾಗಿರುವುದರಿಂದ ಅವುಗಳನ್ನೂ ಅದೇ ಪೀಠವೇ ವಿಚಾರಣೆಗೆ ಒಳಪಡಿಸಲಿದೆ ಎಂದಿದೆ ನ್ಯಾಯಪೀಠ.

ಈ ನಡುವೆ ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ ಶ್ಯಾಮ್‌ ದಿವಾನ್‌, ಕೇಂದ್ರ ಸರಕಾರ ಇತ್ತೀಚೆಗೆ ಹೊರಡಿಸಿದ ಡಿ.31ರ ಅವಧಿಯನ್ನು ಮುಂದಿನ ವರ್ಷದ ಮಾ.31ರ ವರೆಗೆ ವಿಸ್ತರಿಸಲು ಅವಕಾಶ ಉಂಟು ಎಂದು ಹೇಳಿದ್ದನ್ನು ಪ್ರಸ್ತಾಪಿಸಿದರು. ಅಟಾರ್ನಿ ಜನರಲ್‌ ಲಿಂಕ್‌ ಮಾಡದೇ ಇದ್ದರೆ ಬಲವಂತದ ಕ್ರಮಗಳನ್ನು ಅನುಸರಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠದ ಮುಂದೆ ಅರಿಕೆ ಮಾಡಿದ್ದರು. ಆದರೆ ಯಾವುದೇ ಹೇಳಿಕೆ ನೀಡಲಿಲ್ಲ ಎಂದರು ದಿವಾನ್‌. ಈ ಬಗ್ಗೆ ನ್ಯಾಯಪೀಠ ಅಟಾರ್ನಿ ಜನರಲ್‌ಗೆ ಕೇಳಿದಾಗ “ಖಾಸಗಿತನ ಎನ್ನುವುದು ಮೂಲಭೂತ ಹಕ್ಕು ಎಂದು ನ್ಯಾ| ಡಿ.ವೈ.ಚಂದ್ರಚೂಡ್‌ ಹೇಳಿದ್ದರು. ಜತೆಗೆ ಆಧಾರ್‌ ಮಾಹಿತಿ ರಕ್ಷಣೆಗೆ ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸಲು ಸೂಚಿಸಿದ್ದರು’ ಎಂದು ಹೇಳಿದ್ದಾರೆ. ನ್ಯಾ| ಶ್ರೀಕೃಷ್ಣ ನೇತೃತ್ವದ ಸಮಿತಿ ಮಾಹಿತಿ ರಕ್ಷಣೆಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸುತ್ತಿದ್ದು, ಅದು 2018 ಮಾ.31ರ ಒಳಗಾಗಿ ಮುಕ್ತಾಯವಾಗುವ ಸಾಧ್ಯತೆ ಇದೆ. ಹೀಗಾಗಿಯೇ ಲಿಂಕ್‌ ಮಾಡುವ ಕೊನೆಯ ದಿನವನ್ನು ಆ ದಿನದ ವರೆಗೆ ವಿಸ್ತರಿಸಲೂ ಅವಕಾಶ ಉಂಟು ಎಂದು ಪ್ರಸ್ತಾಪಿಸಿದ್ದಾಗಿ ಅಟಾರ್ನಿ ಜನರಲ್‌ ನ್ಯಾಯಪೀಠಕ್ಕೆ ಅರಿಕೆ ಮಾಡಿದರು.  

ಆಧಾರ್‌ ಲಿಂಕ್‌ ಆಗಿದ್ದರೆ 12 ಟಿಕೆಟ್‌ 
ಭಾರತೀಯ ರೈಲ್ವೆಯ ಐಆರ್‌ಸಿಟಿಸಿ ವೆಬ್‌ಸೈಟ್‌ ಮೂಲಕ ರೈಲು ಟಿಕೆಟ್‌ ಕಾಯ್ದಿರಿಸುವವರಿಗೆ ಸಂತಸದ ಸುದ್ದಿ. ವೆಬ್‌ಸೈಟ್‌ನಲ್ಲಿರುವ ಖಾತೆಗೆ ಆಧಾರ್‌ ಲಿಂಕ್‌ ಮಾಡಿರುವವರು  ಸದ್ಯದ ಆರು ಟಿಕೆಟ್‌ಗಳಿಗೆ ಬದಲಾಗಿ 12 ಟಿಕೆಟ್‌ಗಳನ್ನು ಕಾಯ್ದಿರಿಸಲು ಅವಕಾಶ ಉಂಟು. ಅ.26ರಿಂದಲೇ ಈ ಸೌಲಭ್ಯ ಜಾರಿಯಲ್ಲಿದೆ. ಒಂದು ವೇಳೆ ಲಿಂಕ್‌ ಆಗದೇ ಇದ್ದವರಿಗೆ ಕಾರ್ಡ್‌ ಮೂಲಕ ಆರು ಟಿಕೆಟ್‌ ಕಾಯ್ದಿರಿಸಲು ಮಾತ್ರವೇ ಅವಕಾಶ ಇದೆ.

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.