ಕೇಬಲ್‌ ಮಾಫಿಯಾ ಹಿಡಿತದಲ್ಲಿ ಸೆಸ್ಕಾಂ 


Team Udayavani, Nov 5, 2017, 11:55 AM IST

m6-cablemafia.jpg

ನಂಜನಗೂಡು: ಸಾರ್ವಜನಿಕರ ಪಾಲಿಗೆ ಆಪದ್ಬಾಂದವರಾಗಬೇಕಾದ ಸೆಸ್ಕಾಂ ಅಧಿಕಾರಿಗಳು ಕೇಬಲ್‌ ಮಾಫಿಯಾದವರ ಹಿಡಿತಕ್ಕೆ ಸಿಲುಕಿ ಸರ್ಕಾರಕ್ಕೆ ಸಂದಾಯವಾಗಬೇಕಾದ ಹಣ ಖೋತಾಕ್ಕೆ ಕಾರಣವಾಗುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಶಂಕರಪುರ ಸುರೇಶ್‌, ಜನಸಂಗ್ರಾಮ ಪರಿಷತ್‌ ವಿಭಾಗೀಯ ಕಾರ್ಯದರ್ಶಿ ನಗರ್ಲೆ ಎಂ.ವಿಜಯಕುಮಾರ್‌ ಆರೋಪಿಸಿದರು. ಸೆಸ್ಕಾಂ ಕಚೇರಿ ಆವರಣದಲ್ಲಿ  ನಡೆದ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

 ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯುತ್‌ ಕಂಬಗಳ ಮೂಲಕ ಅಕ್ರಮವಾಗಿ ಕೇಬಲ್‌ ಸಂಪರ್ಕ ಪಡೆದಿರುವ ಕೇಬಲ್‌ ಆಪರೇಟರ್ ಗಳು ಸರ್ಕಾರಕ್ಕೆ ಸೂಕ್ತ  ಹಣ ಪಾವತಿ ಮಾಡದೇ ಸೆಸ್ಕಾಂ ಇಲಾಖೆ ಅಧಿಕಾರಿಗಳ ಸಹಕಾರವೇ ಕಾರಣ ಎಂಬ ಆರೋಪ  ಕೇಳಿಬಂದಾಗ ಅಧಿಕಾರಿಗಳು ಕಕ್ಕಾ ಬಿಕ್ಕಿಯಾದರು.

ಸಾವಿರಾರು ವಿದೂÂತ್‌ ಕಂಬಗಳಿಂದ ಹಾದು ಹೋಗಿರುವ ಕೇಬಲ್‌ ಗಳಿಂದ ಕೇವಲ 22 ಸಾವಿರ ರೂ. ವಸೂಲಿ ಮಾಡಲಾಗಿದೆ ಎಂಬ ಉತ್ತರ ಬಂದಾಗ, ಕೋಪಗೊಂಡ ವಿಜಯ ಕುಮಾರ ಒಂದು ಕಂಬಕ್ಕೆ ಎಷ್ಟು ಫೀಜು ಎಂದರು. ಅಲ್ಲದೆ, ಮನೆ ವಿದ್ಯುತ್‌ ಬಿಲ್‌ ಪಾವತಿಸದಿದ್ದರೆ ಮುಲಾಜಿಲ್ಲದೆ ಸಂಪರ್ಕವನ್ನೇ ಕಡಿತಗೊಳಿಸುವ ಅಧಿಕಾರಿಗಳಿಗೆ ಬಾಕಿ ಹಣ ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿದರು.

 ಇದಕ್ಕೆ ಉತ್ತರಿಸಿದ ಅಧೀಕ್ಷಕ ಎಂಜಿನಿಯರ್‌ ನರಸಿಂಹೇಗೌಡ, ಕೇಬಲ್‌ ಆಪರೇಟರ್‌ಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಹಣ ಸಂದಾಯ ಮಾಡದಿದ್ದಲ್ಲಿ ಕೆಲವೇ ದಿನಗಳಲ್ಲಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಹೆಡಿಯಾಲ ಭಾಗದಲ್ಲಿ ಭಾಗ್ಯಜ್ಯೋತಿ ಫ‌ಲಾನುಭವಿಗಳಿಗೆ 20 ಸಾವಿರಕ್ಕೂ ಹೆಚ್ಚು ಬಿಲ್‌ ನೀಡಿದ್ದಾರೆ. ಜೊತೆಗೆ ಸಂಪರ್ಕಗಳನ್ನು ಕಡಿತಗೊಳಿಸುವ ಮೂಲಕ ಸಿಬ್ಬಂದಿಗಳು ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ವಿದ್ಯಾಸಾಗರ್‌  ಆರೋಪಿಸಿದರು.

ಭಾಗ್ಯಜ್ಯೋತಿ ಫ‌ಲಾನುಭವಿಗಳ ಉಚಿತ ಯುನಿಟ್‌ ಮಿತಿಯನ್ನು 40 ಯುನಿಟ್‌ಗೆ ಏರಿಸಲಾಗಿದ್ದು, ಸಂಪರ್ಕ ಕಡಿತಗೊಳಿಸುವಂತೆ ಎಲ್ಲೂ ಹೇಳಿಲ್ಲ. ಈ ಬಗ್ಗೆ ಪರಿಶೀಲಿಸುವುದಾಗಿ ಎಇಇ ಆನಂದ್‌ ತಿಳಿಸಿದರು. ಸೆಸ್ಕ್ ಕಾರ್ಯಪಾಲಕ ಅಭಿಯಂತರ ಎ.ಎ.ಸುನೀಲ್‌ಕುಮಾರ್‌, ಎಇಇಗಳಾದ ಸಿ.ಎಸ್‌.ಆನಂದ್‌, ಶ್ರೀಧರ್‌, ಗ್ರಾಹಕರ ಸಲಹಾ ಸಮಿತಿ ಅಧ್ಯಕ್ಷ ಕೆ.ಪಿ.ಮಲ್ಲಿಕಾರ್ಜುನಪ್ಪ, ಸದಸ್ಯರಾದ ಸುಂದರ್‌ರಾಜ್‌, ಸೂರ್ಯಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.