ಹೋಬಳಿಗಳ ಕಡೆ ಸಚಿವರ ಪ್ರವಾಸ 


Team Udayavani, Nov 5, 2017, 11:55 AM IST

m5-hobli.jpg

ತಿ.ನರಸೀಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಜನರಿಗೆ ದರ್ಶನ ನೀಡಲು ಕಾರ್ಯಕರ್ತರು ಹಾಗೂ ಮುಖಂಡರಿಗಾಗಿ ಕ್ಷೇತ್ರ ಪ್ರವಾಸ ಭಾಗ್ಯ ಆರಂಭಿಸಿದ್ದಾರೆ.

ತಾಲೂಕಿನ ಸೋಸಲೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ಹಳ್ಳಿಗಳಲ್ಲಿ  ಪ್ರವಾಸ ಕೈಗೊಂಡಿದ್ದ ಸಚಿವರು, ಅಂತಿಮ ಹಂತದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ಕೊಟ್ಟರು. ಅಪರೂಪಕ್ಕೆ 6-7 ತಿಂಗಳಿಗೊಮ್ಮೆ ಸುಳಿಯುತ್ತಿದ್ದವರು ಶನಿವಾರ ಮಿಂಚಿನ ಸಂಚಾರ ಕೈಗೊಂಡು ಜನತಾ ದರ್ಶನ ನಡೆಸಿದರು. ಅಲ್ಲದೆ, ಮುಖಂಡರನ್ನು ಗುರುತಿಸಿ ಮಾತನಾಡಿಸುವ ಮೂಲಕ ಚುನಾವಣೆ ಬರುತ್ತಿದೆ ನಾನ್ಯಾರನ್ನೂ ಮರೆತಿಲ್ಲವೆಂದು ಜನರ ಗಮನ ಸೆಳೆಯುವ ಕಸರತ್ತು ನಡೆಸಿದರು. 

ಗ್ರಾಮೀಣಾಭಿವೃದ್ಧಿಯಲ್ಲಿ ಬದ್ಧತೆ ಹೊಂದಿರುವ ಸಚಿವ ಮಹದೇವಪ್ಪ ಅವರು ಹಳ್ಳಿಗಳ ಆಂತರಿಕ ರಸ್ತೆಗಳ ಅಭಿವೃದ್ಧಿಗೆ ನೂರಾರು ಕೋಟಿ, ಹೆದ್ಧಾರಿ ಮಾದರಿಯಲ್ಲಿ ಮುಖ್ಯ ರಸ್ತೆ ಅಭಿವೃದ್ಧಿ, ನಾಲೆಗಳ ಆಧುನೀಕರಣಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಸಚಿವರು ಹೋಬಳಿವಾರು ಎರಡೆರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡು ಜನರಿಂದ ಸಲ್ಲಿಕೆಯಾದ ಅಹವಾಲುಗಳನ್ನು ಅಲ್ಪ ಅವಧಿಯಲ್ಲೇ ಈಡೇರಿಸಲು ಭರವಸೆ ನೀಡುತ್ತಿದ್ದಾರೆ.

 ಎಷ್ಟೆಷ್ಟು ಅನುದಾನ?: ಸೋಸಲೆ ಗ್ರಾಮದ ಗಾಣಿಗರ ಬೀದಿಯಲ್ಲಿ ಸಿಮೆಂಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 50 ಲಕ್ಷ, ವ್ಯಾಸರಾಜಪುರ ಗ್ರಾಮದ ವಿಶ್ವಕರ್ಮ ಬೀದಿಯಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 25 ಲಕ್ಷ, ಎಸ್‌.ಕೆಬ್ಬೇಹುಂಡಿ ಗ್ರಾಮದ ಕುರುಬರ ಬೀದಿಯಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 20 ಲಕ್ಷ, ಬೆನಕನಹಳ್ಳಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 20 ಲಕ್ಷ,

ಎಸ್‌.ಮೇಗಡಹಳ್ಳಿ ಗ್ರಾಮದಲ್ಲಿ ಬೆನಕನಹಳ್ಳಿ – ದೊಡ್ಡೇಬಾಗಿಲು ರಸ್ತೆಯಿಂದ ಹಳೇ ಮೇಗಡಹಳ್ಳಿ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 1.60 ಕೋಟಿ, ಹುಳಕನಹುಂಡಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 25 ಲಕ್ಷ, ಮುಸುವಿನಕೊಪ್ಪಲು ಕುರುಬರ ಬೀದಿಯಲ್ಲಿ ರಸ್ತೆ -ಚರಂಡಿ ನಿರ್ಮಾಣಕ್ಕೆ 50 ಲಕ್ಷ, ಎಂ.ಕೆಬ್ಬೇಹುಂಡಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 50 ಲಕ್ಷ,

ಕೈಯಂಬಳ್ಳಿ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 25 ಲಕ್ಷ ಹಾಗೂ ಕೃಷ್ಣಾಪುರ ಗ್ರಾಮದಲ್ಲಿ ರಸ್ತೆ-ಚರಂಡಿ ನಿರ್ಮಾಣ ಕಾಮಗಾರಿಗೆ 20 ಲಕ್ಷ ಅನುದಾನ ಮಂಜೂರು ಮಾಡಿದ್ದು ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅಲ್ಲದೆ ಸಿದ್ದನಹುಂಡಿ, ಗದ್ದೆಮೋಳೆ, ಕೆಂಡನಕೊಪ್ಪಲು, ಕೋಳಿಮಲ್ಲನಹುಂಡಿ ಹಾಗೂ ಚಿಕ್ಕಬೂವಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಆಲಿಸಿದರು.

 ಜಿಪಂ ಸದಸ್ಯರಾದ ಮಂಗಳಮ್ಮ, ಮಂಜುನಾಥನ್‌, ಎಸ್ಸಿ,ಎಸ್ಟಿ ಹಿತರಕ್ಷಣಾ ಸಮಿತಿ ಸದಸ್ಯ ಸೋಸಲೆ ಮಹದೇವಸ್ವಾಮಿ, ತಾಪಂ ಅಧ್ಯಕ್ಷ ಸಿ.ಚಾಮೇಗೌಡ, ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಬಿ.ಎನ್‌.ಜಗದೀಶ್‌, ಉಪಾಧ್ಯಕ್ಷ ಆರ್‌.ರಾಮು, ತಾಪಂ ಇಒ ಬಿ.ಎಸ್‌.ರಾಜು, ಜಿಪಂ ಇಇ ರಂಗಯ್ಯ,  ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರಿದ್ದರು.
 
ಗದ್ದೆಮೋಳೆಯಲ್ಲಿ ಮನೆ ಮನೆ ಕಾಂಗ್ರೆಸ್‌
ತಿ.ನರಸೀಪುರ ತಾಲೂಕಿನ ಗದ್ದೆಮೋಳೆ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಧನೆಗಳ ಕೈಪಿಡಿಯನ್ನು ಜನರಿಗೆ ವಿತರಿಸುವ ಮೂಲಕ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮನೆ ಮನೆ ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿರಿಯ ರಂಗಭೂಮಿ ಕಲಾವಿದ ಹೊನ್ನನಾಯಕ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರು, ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ನಂತರ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತಪರ ಮತ್ತು ಬಡವರ ಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಮತ್ತೂಮ್ಮೆ ಬೆಂಬಲಿಸಬೇಕೆಂದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.