ಅಕ್ಷರ ಸಂಸ್ಕೃತಿ ಬೆಳೆಸುವುದು ಅಗತ್ಯ


Team Udayavani, Nov 6, 2017, 12:24 PM IST

bid-1.jpg

ಬೀದರ: ಓದುವುದು, ಕಾವ್ಯ ರಚಿಸುವುದು, ಪುಸ್ತಕ ಪ್ರಕಟಿಸಿ ಅಕ್ಷರ ಸಂಸ್ಕೃತಿ ಬೆಳೆಸುವುದು ಈ ಹೊತ್ತಿನ ಬಹು ದೊಡ್ಡ
ಅಗತ್ಯವಾಗಿದೆ ಎಂದು ಕಲಬುರಗಿಯ ನಿವೃತ್ತ ಪ್ರಾಧ್ಯಾಪಕ ಡಾ| ಕಾಶಿನಾಥ ಅಂಬಲಗೆ ಹೇಳಿದರು.

ಟೋಕರೆ ಪರಿವಾರದ ಕಲ್ಯಾಣ ಮಹೋತ್ಸವ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕಾವ್ಯ ಕುಂಚ ಗಾಯನ, ಸಾಂಸ್ಕೃತಿಕ ಸಂಜೆ ಹಾಗೂ “ಅಕ್ಷರ ಕಾರಂಜಿ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಟೋಕರೆ ಪರಿವಾರ ಈ ಅಗತ್ಯ ಪೂರೈಸಿದ್ದು, ಇದೊಂದು ಅಪರೂಪದ ಕಾರ್ಯಕ್ರಮ ಎಂದು ಬಣ್ಣಿಸಿದರು. ಜನಪರ ಜೀವಪರ ಕಾಳಜಿಯುಳ್ಳವರಿಂದ ಮಾತ್ರ ಇಂಥ ಕಾರ್ಯಸಾಧ್ಯ. ಬಸವಾದಿ ಶರಣರ ವೈಚಾರಿಕ ನಿಲುವುಗಳೇ ಇಂಥ ಕಾರ್ಯಗಳಿಗೆ ಸತ್ಪ್ರೇರಣೆ ಎಂದರು.

ಸಾಹಿತ್ಯ ಮತ್ತು ಸಂಸ್ಕೃತಿಯು ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡುತ್ತವೆ. ಆದ್ದರಿಂದ ಯುದ್ಧ- ಹಿಂಸೆಗಳನ್ನು
ಸಾಹಿತ್ಯದಿಂದ ಎದುರಿಸೋಣ ಎಂದು ಹೇಳಿದರು.

ಕಸಾಪ ಕಾರ್ಯದರ್ಶಿ ಡಾ| ಬಸವರಾಜ ಬಲ್ಲೂರ ಮಾತನಾಡಿ, ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಚಟುವಟಿಕೆಗಳ
ಜೊತೆಗೆ ಸಮಾಜೋ ಸಾಂಸ್ಕೃತಿಕ ಚಟುವಟಿಕೆಗಳ ಕಡೆ ಮುಖ ಮಾಡಿದೆ. ಅಕ್ಷರ ಪ್ರೀತಿಯಿಂದ 15 ಜಿಲ್ಲಾ ಕನ್ನಡ
ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ ಸೇರಿದಂತೆ ಹಲವಾರು ಮೌಲಿಕ ಕೃತಿಗಳನ್ನು ಹೊರತಂದ ಪರಿಷತ್ತು, ಜಿಲ್ಲಾ ಪ್ರಾತಿನಿಧಿಕ ಸಂಕಲನ ಕಿರಿಯರು, ಹಿರಿಯರು ಸೇರಿದಂತೆ 112 ಜನ ಕವಿಗಳ ಕವಿತೆಗಳನ್ನು ಒಳಗೊಂಡ ಮಹತ್ವಕಾಂಕ್ಷೆಯ ಕೃತಿಯಾಗಿದೆ ಎಂದರು.

ಮದುವೆ ಆಮಂತ್ರಣ ಪತ್ರದಲ್ಲಿ ಸಿದ್ದ ಪಂಚಾಂಗದ ನಿರ್ದಿಷ್ಟ ಸಮಯ ಸೇರಿಸದೆ ಬಸವ ತತ್ವವನ್ನು ನಿಜಾಚರಣೆಗೆ ತಂದಿದ್ದು ಕುವೆಂಪು ಅವರ ಪತ್ರ ಪೂರ್ಣಚಂದ್ರ ತೇಜಸ್ವಿಯವರ ಮದುವೆಯ ಆಮಂತ್ರಣ ನೆನಪಿಸುತ್ತದೆ ಎಂದು ಸ್ಮರಿಸಿದರು.

ಶಾಸಕ ರಹೀಮ್‌ ಖಾನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶುದ್ಧ ವೈಚಾರಿಕತೆಯ ಪ್ರತಿಪಾದನೆ, ಬಸವ
ತತ್ವದ ನಿಜಾಚರಣೆಯೆಂದು ಬಣ್ಣಿಸಿದರು. ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿವಿ ಡೀನ್‌ ಡಾ| ಸುರೇಶ ಪಾಟೀಲ, ಬೀಜ ವಿಜ್ಞಾನ ಮತ್ತು ತಾಂತ್ರಿಕತೆ ಮುಖ್ಯಸ್ಥ ಡಾ| ಎಸ್‌.ಎನ್‌. ವಾಸುದೇವನ್‌, ಉದ್ಯೋಗ ಮತ್ತು ತರಬೇತಿ ಇಲಾಖೆ ಜಂಟಿ ನಿರ್ದೇಶಕ ವೈಜಗೊಂಡ, ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ, ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಲಕ್ಷ್ಮೀಬಾಯಿ ಚಲುವಾ, ಶರಣಬಸಪ್ಪ ಚಲುವಾ, ಬಸವಕುಮಾರ, ಮಂಗಳಗೌರಿ, ದೇಶಾಂಶ ಹುಡಗಿ. ಎಂ.ಜಿ. ದೇಶಪಾಂಡೆ, ಹಂಸಕವಿ, ಗೋಪಾಲಕೃಷ್ಣ ವಂಡಸೆ, ವಿಜಯಕುಮಾರ ಗೌರೆ, ಸಂಜೀವಕುಮಾರ ಅತಿವಾಳೆ, ಸುನೀತಾ ದಾಡಗೆ, ಶ್ರೀದೇವಿ ಹೂಗಾರ ಮೊದಲಾದವರು ಕಾವ್ಯ ವಾಚನ ಮಾಡಿದರು. ಅದಕ್ಕೆ ಶಿವಕುಮಾರ ಪಾಂಚಾಳ ಧ್ವನಿ ನೀಡಿದರು. ಯೋಗೀಶ ಮಠದ ಅವರು ಕಾವ್ಯಕ್ಕೆ ಚಿತ್ರ ರೂಪ ನೀಡಿದರು. ಹೀಗೆ ಕಾವ್ಯ- ಕುಂಚ- ಗಾಯನ ನೆರವೇರಿತು. ಶಿವಶಂಕರ ಟೋಕರೆ ಸ್ವಾಗತಿಸಿದರು. ಚನ್ನಬಸವ ಹೇಡೆ ನಿರೂಪಿಸಿದರು. ಟಿ.ಎಂ. ಮಚ್ಚೆ ವಂದಿಸಿದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.