ರಣಜಿ ಟ್ರೋಫಿ: ಇಂದು ರಾಜ್ಯಕ್ಕೆ ದಿಲ್ಲಿ ಎದುರಾಳಿ


Team Udayavani, Nov 9, 2017, 7:30 AM IST

Ranaji-2018.jpg

ಬೆಂಗಳೂರು: ಪ್ರಸಕ್ತ ರಣಜಿ ಟ್ರೋಫಿ ಋತುವಿನಲ್ಲಿ ಸತತ ಮೂರು ಪಂದ್ಯದಲ್ಲಿ ಗೆದ್ದು “ಎ’ ಗುಂಪಿನಲ್ಲಿ ಅಗ್ರ ಸ್ಥಾನದಲ್ಲಿರುವ ಕರ್ನಾಟಕ ಗುರುವಾರದಿಂದ ಆರಂಭವಾಗಲಿರುವ ನಾಲ್ಕನೇ ಪಂದ್ಯದಲ್ಲಿ ದಿಲ್ಲಿ ತಂಡದ ಸವಾಲನ್ನು ಎದುರಿಸಲಿದೆ.

ಬೆಂಗಳೂರಿನ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮುಖಾಮುಖೀ ಭಾರೀ ಕುತೂಹಲ ಕೆರಳಿಸಿದೆ. ಕಾರಣ ಎರಡೂ ತಂಡಗಳು ತಾರಾ ಆಟಗಾರರನ್ನು ಹೊಂದಿದ್ದು, ಬಲಿಷ್ಠವಾಗಿದೆ. ಕರ್ನಾಟಕ ತಂಡ ಅಸ್ಸಾಂ ವಿರುದ್ಧ ಇನ್ನಿಂಗ್ಸ್‌ ಮತ್ತು 121 ರನ್‌ ಜಯ, ಹೈದರಾಬಾದ್‌ ವಿರುದ್ಧ 59 ರನ್‌ ಜಯ ಮತ್ತು ಮಹಾರಾಷ್ಟ್ರ ವಿರುದ್ಧ ಇನ್ನಿಂಗ್ಸ್‌ ಮತ್ತು 136 ರನ್‌ ಗೆಲುವು ಸಾಧಿಸಿದೆ. ಈ ಮೂಲಕ 20 ಅಂಕ ಸಂಪಾದಿಸಿ “ಎ’ ಗುಂಪಿನಲ್ಲಿ ಅಗ್ರ ಸ್ಥಾನದಲ್ಲಿದೆ.

ಅದೇ ರೀತಿ ದಿಲ್ಲಿ ತಂಡ ರೈಲ್ವೇಸ್‌ ವಿರುದ್ಧ ಇನ್ನಿಂಗ್ಸ್‌ ಮತ್ತು 105 ರನ್‌ ಜಯ, ಉತ್ತರ ಪ್ರದೇಶ ವಿರುದ್ಧ 4 ವಿಕೆಟ್‌ ಜಯ ಮತ್ತು ಅಸ್ಸಾಂ ವಿರುದ್ಧ ಡ್ರಾ ಮಾಡಿಕೊಂಡಿದೆ. ಈ ಮೂಲಕ ಮೂರು ಪಂದ್ಯದಿಂದ 16 ಅಂಕ ಸಂಪಾದಿಸಿ “ಎ’ ಗುಂಪಿನಲ್ಲಿ 2ನೇ ಸ್ಥಾನದಲ್ಲಿದೆ.

ಕರ್ನಾಟಕ ಸಮತೋಲಿತ ತಂಡ: ಬ್ಯಾಟಿಂಗ್‌, ಬೌಲಿಂಗ್‌ ಎರಡೂ ವಿಭಾಗದಲ್ಲೂ ಕರ್ನಾಟಕ ತಂಡ ಬಲಿಷ್ಠವಾಗಿರುವುದರಿಂದ ಸಮತೋಲಿತವಾಗಿದೆ. ಬ್ಯಾಟಿಂಗ್‌ನಲ್ಲಿ ಆರಂಭಿಕ ಆಟಗಾರ ಮಾಯಾಂಕ್‌ ಅಗರ್ವಾಲ್‌ ಮಹಾರಾಷ್ಟ್ರ ವಿರುದ್ಧ ತ್ರಿಶತಕ ದಾಖಲಿಸಿ ಪ್ರಚಂಡ ಫಾರ್ಮ್ನಲ್ಲಿರುವುದನ್ನು ಸಾಬೀತು ಪಡಿಸಿದ್ದಾರೆ. ಮಾಯಾಂಕ್‌ ಮೂರು ಪಂದ್ಯದಿಂದ 335 ರನ್‌ ದಾಖಲಿಸಿದ್ದಾರೆ. ಇದು ರಾಜ್ಯ ಪರ ದಾಖಲಾದ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. ಉಳಿದಂತೆ ಆರ್‌.ಸಮರ್ಥ್ (300 ರನ್‌), ಕರುಣ್‌ ನಾಯರ್‌ (273 ರನ್‌) ಕೂಡ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶಿಸುತ್ತಿದ್ದಾರೆ.

ಬೌಲಿಂಗ್‌ನಲ್ಲಿ ಸ್ಪಿನ್ನರ್‌ ಕೆ.ಗೌತಮ್‌ (14 ವಿಕೆಟ್‌), ವೇಗಿ ವಿನಯ್‌ ಕುಮಾರ್‌ (13 ವಿಕೆಟ್‌), ಸ್ಪಿನ್ನರ್‌ ಶ್ರೇಯಸ್‌ ಗೋಪಾಲ್‌ (12 ವಿಕೆಟ್‌) ಎದುರಾಳಿಗಳನ್ನು ಕಟ್ಟಿಹಾಕುತ್ತಿದ್ದಾರೆ. ಇದು ತಂಡದ ಶಕ್ತಿಯಾಗಿದೆ.

ರಾಹುಲ್‌, ಮನೀಷ್‌ ವಾಪಸ್‌: ನ್ಯೂಜಿಲ್ಯಾಂಡ್‌ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆ ಆಗಿರುವ ಕಾರಣ ಕೆ.ಎಲ್‌.ರಾಹುಲ್‌ ಮತ್ತು ಮನೀಷ್‌ ಪಾಂಡೆ ಕಳೆದ ಮೂರು ಪಂದ್ಯಕ್ಕೂ ಲಭ್ಯ ಆಗಿರಲಿಲ್ಲ. ಆದರೆ ಇದೀಗ ನ್ಯೂಜಿಲ್ಯಾಂಡ್‌ ವಿರುದ್ಧ ಸರಣಿ ಅಂತ್ಯಗೊಂಡಿದೆ. ಇದರಿಂದಾಗಿ ರಾಹುಲ್‌ ಮತ್ತು ಮನೀಷ್‌ ಇಬ್ಬರೂ ತಂಡಕ್ಕೆ ವಾಪಸ್‌ ಆಗಿದೆ. ಇದು ರಾಜ್ಯ ತಂಡಕ್ಕೆ ಆನೆ ಬಲ ಸಿಕ್ಕಂತಾಗಿದೆ.

ದಿಲ್ಲಿ ಸುಲಭ ಎದುರಾಳಿ ಅಲ್ಲ: ಅನುಭವಿ ಆಟಗಾರ ಗೌತಮ್‌ ಗಂಭೀರ್‌, ಇಶಾಂತ್‌ ಶರ್ಮ, ಯುವ ಸ್ಫೋಟಕ ಆಟಗಾರರಾದ ರಿಷಭ್‌ ಪಂತ್‌, ನಿತೀಶ್‌ ರಾಣಾ ಮುಂತಾದವರು ತಂಡದಲ್ಲಿದ್ದಾರೆ. ಯಾವುದೇ ಬೌಲರ್‌ಗಳನ್ನಾದರೂ ಎದುರಿಸುವ ತಾಕತ್ತು ಗಂಭೀರ್‌ಗೆ ಇದೆ. ಈವರೆಗೆ ಮೂರು ಪಂದ್ಯದಲ್ಲಿ ನಿತೀಶ್‌ ರಾಣಾ (283 ರನ್‌) ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಬೌಲಿಂಗ್‌ನಲ್ಲಿ ಇಶಾಂತ್‌ ಶರ್ಮ (15 ವಿಕೆಟ್‌), ಮನನ್‌ ಶರ್ಮ (12 ವಿಕೆಟ್‌), ನವದೀಪ್‌ ಸೈನಿ (11 ವಿಕೆಟ್‌) ಅವರ ಅತ್ಯುತ್ತಮ ದಾಳಿಯೇ ತಂಡಕ್ಕೆ ವರವಾಗಿದೆ.

ಈ ಎಲ್ಲ ದೃಷ್ಟಿಯಿಂದ ಉಭಯ ತಂಡಗಳ ನಡುವೇ ಭಾರೀ ಹೋರಾಟವನ್ನು ನಿರೀಕ್ಷಿಸಬಹುದು. ಒಮ್ಮೆ ಈ ಪಂದ್ಯದಲ್ಲಿ ಕರ್ನಾಟಕ ಡ್ರಾ ಸಾಧಿಸಿದರೂ “ಎ’ ಗುಂಪಿನಲ್ಲಿ ಅಗ್ರ ಸ್ಥಾನ ಕಾಯ್ದುಕೊಳ್ಳಲಿದೆ.

ಕರ್ನಾಟಕ ತಂಡ:
ವಿನಯ್‌ ಕುಮಾರ್‌ (ನಾಯಕ), ಕೆ.ಎಲ್‌.ರಾಹುಲ್‌, ಆರ್‌.ಸಮರ್ಥ್, ಮಾಯಾಂಕ್‌ ಅಗರ್ವಾಲ್‌, ಕರುಣ್‌ ನಾಯರ್‌, ಮನೀಷ್‌ ಪಾಂಡೆ, ಸ್ಟುವರ್ಟ್‌ ಬಿನ್ನಿ, ಸಿ.ಎಂ.ಗೌತಮ್‌, ಕೆ.ಗೌತಮ್‌, ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ರೋನಿತ್‌ ಮೋರೆ, ಜೆ.ಸುಚಿತ್‌, ಪವನ್‌ ದೇಶಪಾಂಡೆ, ಕೌನೈನ್‌ ಅಬ್ಟಾಸ್‌.

ಟಾಪ್ ನ್ಯೂಸ್

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

Ready to come out of retirement and play against India: Warner

David Warner: ನಿವೃತ್ತಿ ವಾಪಸ್‌ ಪಡೆದು ಭಾರತ ವಿರುದ್ಧ ಆಡಲು ಸಿದ್ಧ: ವಾರ್ನರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1

Sandalwood: ಸುಂದರ ರಾಕ್ಷಸಿ ಇವಳು!

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.