ಮೀರಾರೋಡ್ ಮಹಾಲಿಂಗೇಶ್ವರ ದೇವಸ್ಥಾನ: ಕಾರ್ತಿಕ ದೀಪೋತ್ಸವ
Team Udayavani, Nov 15, 2017, 11:57 AM IST
ಮುಂಬಯಿ: ಮೀರಾರೋಡ್ ಪೂರ್ವದ ಮೀರಾಗಾಂವ್ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ದೀಪೋತ್ಸವವು ನ. 13ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿತು.
ದೇವಸ್ಥಾನದ ಟ್ರಸ್ಟಿ ಹಾಗೂ ಪ್ರಧಾನ ಅರ್ಚಕ ಸಾಂತಿಂಜ ಜನಾರ್ದನ ಭಟ್ ಅವರ ಪೌರೋಹಿತ್ಯದಲ್ಲಿ ಪರಿವಾರ ದೇವರಾದ ಶ್ರೀ ಮಹಾಗಣಪತಿ, ಶ್ರೀ ದುರ್ಗಾ ಪರಮೇಶ್ವರಿ, ಶ್ರೀ ಆಂಜನೇಯ ಶ್ರೀ ನವಗ್ರಹಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಎದುರಿನ ಹಣತೆ ದೀಪ ಸ್ತಂಭಕ್ಕೆ ಹಾಗೂ ಹೊರಾಂಗಣ ಒಳಾಂಗಣದ ದೀಪಕ್ಕೆ ವಿವಿಧ ಪೂಜಾ ವಿಧಿ-ವಿಧಾನದೊಂದಿಗೆ ದೀಪೋತ್ಸವಕ್ಕೆ ಚಾಲನೆಯಿತ್ತು ಆಶೀರ್ವಚನ ನೀಡಿದ ಸಾಂತಿಂಜ ಜನಾರ್ಧನ ಭಟ್ ಅವರು, ಐಕ್ಯತೆಯ ಪ್ರಕಾಶ ನಮ್ಮ ಬದುಕಿನ ಪ್ರೇರಣ ಶಕ್ತಿಯಾಗಿದೆ. ಪರಿಸರ ಶುದ್ಧಿಗಾಗಿ, ತೈಲದ ದೀಪ ಪರೋಕ್ಷವಾಗಿ ಸಹಕರಿಸುತ್ತದೆ. ಸಾಲು ಹಣತೆಗಳು ಸುಖ, ಸಮೃದ್ಧಿ, ಐಶ್ವರ್ಯದ ಧೊÂàತಕವಾಗಿದೆ. ಇದರ ಶೋಭೆ ಮನೆ-ಮನಗಳನ್ನು ಬೆಳಗಿಸುತ್ತದೆ. ಕಾರ್ತಿಕ ಮಾಸದ ದೀಪಾರಾಧನೆ ಮನುಷ್ಯನ
ಮತ್ತು ದೇವರ ನಡುವಿನ ಸೂಕ್ಷ್ಮಪ್ರಜ್ಞೆಯ ಸಂಕೇತವಾಗಿದೆ ಎಂದು ನುಡಿದರು.ದೇವಸ್ಥಾನದ ಸ್ಥಾಪಕ ಕೃಷ್ಣ ಜಿ. ಶೆಟ್ಟಿ, ಅಧ್ಯಕ್ಷ ಶಿಮಂತೂರು ಮಜಲಗುತ್ತು ಬಾಬಾ ರಂಜನ್ ಶೆಟ್ಟಿ, ಕಾರ್ಯದರ್ಶಿ ಪ್ರಮೋದ್ ವಿ. ಮ್ಹಾತ್ರೆ, ಕೋಶಾಧಿಕಾರಿ ವೆಂಕಟೇಶ್ ಡಿ. ಪಾಟೀಲ್, ಟ್ರಸ್ಟಿಗಳಾದ ಅನಿಲ್ ಶೆಟ್ಟಿ, ಸುಂದರ ಶೆಟ್ಟಿಗಾರ್, ಹೇಮಂತ್ ಸಂಕಪಾಲ್, ಪ್ರಸನ್ನ ಬಿ. ಶೆಟ್ಟಿ, ಕೆ. ಪ್ರಸನ್ನ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು. ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಸಾಂತಿಂಜ ಮಾಧವ ಭಟ್, ಸುರೇಶ್ ಭಟ್ ಕುಂಟಾಡಿ, ವಿಠಲ್ ಭಟ್, ರಾಘವೇಂದ್ರ ಭಟ್ ಮಾಣೆ ಹಾಗೂ ಗಣೇಶ್ ರಾವ್ ಪಡುಬಿದ್ರೆ ಸಹಕರಿಸಿದರು.
ಬಿಲ್ಲವರ ಅಸೋಸಿಯೇಶನ್ ಮೀರಾರೋಡ್ ಸ್ಥಳೀಯ ಸಮಿತಿ ಹಾಗೂ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್ ಇದರ ಸದಸ್ಯರಿಂದ ಭಜನೆಯನ್ನು ಆಯೋಜಿಸಲಾಗಿತ್ತು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಹಣತೆಗಳನ್ನು ಹಚ್ಚುವ ಮೂಲಕ ದೀಪದಿಂದ ದೀಪ ಬೆಳಗಿಸಿದರು. ಮಹಾಪೂಜೆಯ ಆನಂತರ ಮಹಾಪ್ರಸಾದ ನಡೆಯಿತು.
ಚಿತ್ರ-ವರದಿ: ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.