ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ: ಕಾರ್ತಿಕ ಹುಣ್ಣಿಮೆ


Team Udayavani, Nov 15, 2017, 12:33 PM IST

13-Mum03a.jpg

ಮುಂಬಯಿ: ವಸಾಯಿ ರೋಡ್‌ ಪಶ್ಚಿಮದ ಗೌಡರ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸಮಾಜದವರ ಬಾಲಾಜಿ ಸೇವಾ ಸಮಿತಿಯ ಶ್ರೀ ವೆಂಕಟರಮಣ ಭಜನ ಮಂಡಳಿಯವರ ಬಾಲಾಜಿ ಮಂದಿರದಲ್ಲಿ ಕಾರ್ತಿಕ ಹುಣ್ಣಿಮೆ ಮಹೋತ್ಸವವು ನ. 4ರಂದು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜರಗಿತು.

ಧಾರ್ಮಿಕ  ಕಾರ್ಯಕ್ರಮವಾಗಿ ವೇದಮೂರ್ತಿ ಗಿರಿಧರ ಭಟ್‌ ಅವರ ಮಾರ್ಗದರ್ಶನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಇದೇ ಸಂದರ್ಭದಲ್ಲಿ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡಳಿಯವರು ಕನ್ನಡ, ಕೊಂಕಣಿ, ಮರಾಠಿ ಮತ್ತು ಹಿಂದಿ ಭಜನೆಗಳನ್ನು ಹಾಡಿ ನೆರೆದ ಭಕ್ತಾದಿಗಳನ್ನು ರಂಜಿಸಿದರು.

ಹಾರ್ಮೋನಿಯಂನಲ್ಲಿ ಮಲ್ಪೆ ವಿಶ್ವನಾಥ ಪೈ, ನಿಡ್ಡೋಡಿ ಪ್ರಕಾಶ್‌ ಪ್ರಭು, ತಬಲಾದಲ್ಲಿ ಮನೋಜ್‌ ಆಚಾರ್ಯ, ಪಖ್ವಾಜ್‌ನಲ್ಲಿ ರಾಜೇಶ್‌ ಪೈ ಮತ್ತು ಪ್ರಸಾದ್‌ ಪ್ರಭು ಸಹಕರಿಸಿದರು. ಮಂದಿರದ ಮತ್ತು ಪರಿಸರವನ್ನು ರಂಗೋಲಿ ಮತ್ತು ದೀಪ ಬೆಳಗಿಸಿ ಮಹಾಮಂಗಳಾರತಿ ನಡೆಯಿತು. ಭಕ್ತಾದಿಗಳು ವಿಶ್ವರೂಪ ದರ್ಶನದಲ್ಲಿ ಪಾಲ್ಗೊಂಡಿದ್ದರು. ಪಾಲ^ರ್‌ ಜಿಲ್ಲೆಯ ವಸಾಯಿ ಮಾಣಿಕ್‌ಪುರ ಪೊಲೀಸ್‌ ಠಾಣೆಯ ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಅನಿಲ್‌ ಪಾಟೀಲ್‌ ಮತ್ತು  ಥಾಣೆಯ ಭ್ರಷ್ಟಾಚಾರ ನಿಗ್ರಹ ದಳದ ಅಸಿಸ್ಟೆಂಟ್‌ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಸಂತೋಷ್‌ ಮದನೆ ಪರಿವಾರದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ವಾಲ್ಕೇಶ್ವರ ಮಠದ ಉಪೇಂದ್ರ ಆಚಾರ್ಯ, ನಲಸೋಪರ ಜಿಎಸ್‌ಬಿ ಸೇವಾ ಮಂಡಳಿ ಸಯಾನ್‌ ಇದರ ಸಂತೋಷ್‌ ಕುಡ್ವ, ಜಿಎಸ್‌ಬಿ ಮಂಡಳಿ ವಿರಾರ್‌ ರಾಮದಾಸ್‌ ಶ್ಯಾನ್‌ಭಾಗ್‌, ವಿಷ್ಣು ಶ್ಯಾನ್‌ಭಾಗ್‌, ಮೀರಾ-ಭಾಯಂದರ್‌ ಜಿಎಸ್‌ಬಿಯ ಕಿರಣ್‌ ಶಿರಾಳಿ, ಕರ್ನಾಟಕ ಸಂಘ ವಸಾಯಿ ಅಧ್ಯಕ್ಷ ಓ. ಪಿ. ಪೂಜಾರಿ, ಶಾಂತಿಧಾಮ ಸೇವಾ ಸಮಿತಿಯ ವಿಶ್ವಸ್ತ ಅಭಿಜಿತ್‌ ನರಸಿಂಹ ಪ್ರಭು, ಇತರ ಸಂಘ-ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರತೀ ಶನಿವಾರ ಜರಗರುವ ಭಜನೆಯ ಶಾಶ್ವತ ಸೇವಾ ದಾರರಿಗೆ, ವಿಶೇಷ ಸೇವಾದಾರರಿಗೆ ಮತ್ತು ಗಣ್ಯರಿಗೆ ಪ್ರಸಾದ ವಿತರಿಸಲಾಯಿತು. ಈ ಉತ್ಸವದ ಶಾಶ್ವತ ಸೇವಾದಾರರಾದ ಸಮಿತಿಯ ಉಪಾಧ್ಯಕ್ಷ ಹೊಸಮಠ ಮನೋಹರ ಶೆಣೈ ಮತ್ತು ಸಮಿತಿಯ ಜತೆ ಕಾರ್ಯದರ್ಶಿ ಮಂಜೇಶ್ವರ ವಿವೇಕಾನಂದ ಭಕ್ತ ಪರಿವಾರದಿಂದ ಅನ್ನಸಂತರ್ಪಣೆ ಜರಗಿತು.

ದೇವರ ಮಂಟಪಕ್ಕೆ ಅಲಂಕರಿಸಲು ಹೂವಿನ ಸೇವೆ ಉದ್ಯಮಿ ನಿಟ್ಟೆ ಜಯಾನಂದ ಶೆಣೈ ಮತ್ತು ಬಾಲಾಜಿ ಟೂರ್‌ ಮತ್ತು ಟ್ರಾವೆಲ್ಸ್‌ನ ಮಾಲಕ ರಮೇಶ್‌ ಪೈ ಪ್ರಾಯೋಜಿಸಿದ್ದರು. ಸಮಿತಿಯ ಅಧ್ಯಕ್ಷ ತಾರಾನಾಥ ಪೈ, ಗೌರವಾಧ್ಯಕ್ಷ ವಸಂತ್‌ ನಾಯಕ್‌, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಕೋಶಾಧಿಕಾರಿ ವೆಂಕಟ್ರಾಯ ಪ್ರಭು, ಸಂಚಾಲಕ ದೇವೇಂದ್ರ ಭಕ್ತ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿ ಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು ಮತ್ತು ಸಮಿತಿಯ ಎಲ್ಲಾ ಸದಸ್ಯರ ಉಸ್ತುವಾರಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.ಮಹಿಳಾ ವಿಭಾಗದವರಿಂದ ಸಲ್ಲಿಸಿದ ಹೂವಿನ ರಂಗೋಲಿ, ಎಚ್‌. ವಿನಾಯಕ ಪೈ ನೇತೃತ್ವದಲ್ಲಿ ಅಲಂಕರಿಸಿದ ದೇವರ ಮಂಟಪ ನೆರೆದ ಭಕ್ತರನ್ನು ರಂಜಿಸಿತು. ಮಂದಿರದ ಮತ್ತು ಜೈ ಅಮ್ಮ ಅನ್ನಪೂರ್ಣೇಶ್ವರಿ ಸಭಾಗೃಹದ ಆವರಣದಲ್ಲಿ 3 ಅಗ್ನಿಶಾಮಕ ಯಂತ್ರ ಗಳನ್ನು  ಮಹಿಳಾ ವಿಭಾಗದ ಉಪಾಧ್ಯಕ್ಷೆ ಸ್ಮಿತಾ ಶ್ರೀನಿವಾಸ ಪಡಿಯಾರ್‌ ಪರಿವಾರದವರು ಪ್ರಾಯೋಜಿಸಿದ್ದರು.

ಟಾಪ್ ನ್ಯೂಸ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.