ವಿಧೇಯಕ ಪ್ರತಿಷ್ಠೆಯಲ್ಲ, ಕಾಯ್ದೆ ಬಗ್ಗೆ ಭಯ ಹುಟ್ಟಿಸಲಾಗ್ತಿದೆ…
Team Udayavani, Nov 16, 2017, 1:47 PM IST
ಬೆಂಗಳೂರು:ವೈದ್ಯರ ಮುಷ್ಕರದಲ್ಲಿ ನಾನು ರಾಜಕೀಯ ಬೆರೆಸುತ್ತಿಲ್ಲ. ಆದರೆ ವಿಧೇಯಕವನ್ನು ನಾವು ಸದನದಲ್ಲಿ ಇನ್ನೂ ಮಂಡಿಸಿಲ್ಲ. ಅದಾಗಲೇ ಕಾಯ್ದೆ ಜಾರಿ ಬಗ್ಗೆ ಸತ್ಯಾಂಶ ಹೇಳದೆ, ಸುಳ್ಳು ಸುದ್ದಿ ಹಬ್ಬಿಸಿ ಭಯವನ್ನು ಬಿತ್ತುತ್ತಿದ್ದಾರೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯರ ಜಟಾಪಟಿ ಮೂರನೇ ದಿನ ಪೂರೈಸಿದ್ದು, ಸೂಕ್ತ ಕಾಲಕ್ಕೆ ಚಿಕಿತ್ಸೆ ಸಿಗದೆ ರೋಗಿಗಳು ನರಳಾಡುತ್ತಿದ್ದರೆ, ಮತ್ತೊಂದೆಡೆ ಮುಷ್ಕರದ ಬಗ್ಗೆ ಸಂಜೆಯೊಳಗೆ ಅಂತಿಮ ನಿರ್ಧಾರಕ್ಕೆ ಬರುವಂತೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಚಿವ ರಮೇಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಮಾತನಾಡಿದರು.
ಈ ಕಾಯ್ದೆ ಜಾರಿ ಬಗ್ಗೆ ನನಗೆ ಯಾವುದೇ ಪ್ರತಿಷ್ಠೆಯನ್ನು ಹೊಂದಿಲ್ಲ. ಈ ಬಗ್ಗೆ ಮುಕ್ತ ಮನಸ್ಸಿನಿಂದ ಚರ್ಚೆ ಮಾಡೋಣ. ಹಾಗಂತ ಶಾಸನವನ್ನೇ ಮಾಡಬೇಡಿ, ಚರ್ಚೆಯನ್ನೇ ಮಾಡಬೇಡಿ ಎಂದು ಹೇಳಿದರೆ ನಾನ್ ಏನ್ ಉತ್ತರ ಹೇಳ್ಲಿ ಎಂದರು.
ಭಯ ಹುಟ್ಟಿಸಲಾಗ್ತಿದೆ:
ನಾವು ವೈದ್ಯರನ್ನು ಜೈಲಿಗೆ ಕಳುಹಿಸುವ ಕಾಯ್ದೆ ಜಾರಿ ಮಾಡುತ್ತಿಲ್ಲ. ಈ ಮಸೂದೆ ಪಾಸಾದ್ರೆ ನಿಮ್ಮನ್ನು(ವೈದ್ಯರನ್ನು) ಜೈಲಿಗೆ ಕಳುಹಿಸುತ್ತಾರೆ ಎಂಬ ಭಯವನ್ನು ಕೆಲವರು ಬಿತ್ತುತ್ತಿದ್ದಾರೆ. ನಾವು ಎಂದಿಗೂ ಜನವಿರೋಧಿ ನಿರ್ಧಾರ ಕೈಗೊಳ್ಳುವುದಿಲ್ಲ. ನಾನು ವೈದ್ಯರ ವಿರುದ್ಧವೂ ಅಲ್ಲ, ವೈದ್ಯ ವೃತ್ತಿಯ ವಿರುದ್ಧವೂ ಇಲ್ಲ. ವೈದ್ಯರ ಮುಷ್ಕರ, ವಿಧೇಯಕದ ಬಗ್ಗೆ ಇಂದು ಸಂಜೆಯೊಳಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ವಿಧೇಯಕದ ವಿಚಾರದಲ್ಲಿ ನನಗೆ ಯಾವುದೇ ಪ್ರತಿಷ್ಠೆ ಇಲ್ಲ, ನಾನು ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ವಿಧಾನಸಭೆಗೆ ಕಾಲಿಟ್ಟವನು. ನಾನು ಶುದ್ಧಹಸ್ತನಾಗಿ ಸದನಕ್ಕೆ ಕಾಲಿಟ್ಟವನು, ಹಾಗಾಗಿ ಇಲ್ಲಿಂದ(ವಿಧಾನಸಭೆ) ನಿಷ್ಕಂಳಕನಾಗಿ ಹೊರಹೋಗಬೇಕೆಂಬುದು ನನ್ನ ಇಚ್ಚೆಯಾಗಿದೆ ಎಂದರು.
ರಾಜೀನಾಮೆ ಕೊಡಲು ಮಂತ್ರಿಯಾಗಿಲ್ಲ:
ರಮೇಶ್ ಕುಮಾರ್ ಅವರು ರಾಜೀನಾಮೆ ಕೊಡಬೇಕೆಂದು ವಿಪಕ್ಷದವರು ಹೇಳುತ್ತಿದ್ದಾರೆ. ನಾನು ರಾಜೀನಾಮೆ ಕೊಡಲು ಮಂತ್ರಿಯಾಗಿಲ್ಲ. ನನ್ನ ಜತೆ ಸರ್ಕಾರವಿದೆ, ಪಕ್ಷದ ಮುಖಂಡರಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ಸಭಾತ್ಯಾಗ:
ವೈದ್ಯರ ಮುಷ್ಕರದ ಬಗ್ಗೆ ಸಚಿವ ರಮೇಶ್ ಕುಮಾರ್ ಅವರು ನೀಡಿದ ಪ್ರತಿಕ್ರಿಯೆಯಿಂದ ಬಿಜೆಪಿ ಶಾಸಕರು ಅಸಮಾಧಾನವ್ಯಕ್ತಪಡಿಸಿದರು. ಬಳಿಕ ಸಭಾತ್ಯಾಗ ನಡೆಸಿ, ಕಲಾಪದಿಂದ ಹೊರನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.