12 ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ
Team Udayavani, Nov 17, 2017, 11:29 AM IST
ಬೆಂಗಳೂರು: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಮೇಯರ್ ಆರ್.ಸಂಪತ್ರಾಜ್ ಅವರು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಿದರು. ಈ ಹಿಂದೆಯೇ ಅಧ್ಯಕ್ಷರು ಯಾರಾಗುತ್ತಾರೆ ಎಂಬುದು ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಯಾವುದೇ ಗೊಂದಲವಿಲ್ಲದೆ ಎಲ್ಲ 12 ಸಮಿತಿಗಳಿಗೆ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು.
ಕಾಂಗ್ರೆಸ್ನ ಐದು ಸದಸ್ಯರು, ಜೆಡಿಎಸ್ನ 4 ಸದಸ್ಯರು ಹಾಗೂ ಮೂವರು ಪಕ್ಷೇತರರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ 12.12ಕ್ಕೆ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಮೇಯರ್ ಸಂಪತ್ರಾಜ್ ಕೇವಲ 20 ನಿಮಿಷಗಳಲ್ಲಿ ಎಲ್ಲ ಸಮಿತಿಗಳ ಚುನಾವಣಾ ಪ್ರಕ್ರಿಯೆ ಮುಗಿಸಿದರು.
ಯಾವ ಸಮಿತಿಗೆ ಯಾರಿಗೆ
ಕಾಂಗ್ರೆಸ್
-ನಗರ ಯೋಜನೆ ಸ್ಥಾಯಿ ಸಮಿತಿ – ಶಕೀಲ್ ಅಹಮದ್ (ಭಾರತಿನಗರ)
-ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ – ಗೋವಿಂದರಾಜು (ಸುಭಾಷ್ನಗರ)
-ಅಪೀಲು ಸ್ಥಾಯಿ ಸಮಿತಿ – ಕೋಕಿಲ ಚಂದ್ರಶೇಖರ್ (ಚಾಮರಾಜಪೇಟೆ)
-ಮಾರುಕಟ್ಟೆ ಸ್ಥಾಯಿ ಸಮಿತಿ – ಜಿ.ಮಂಜುನಾಥ್ (ಸುದ್ದಗುಂಟೆಪಾಳ್ಯ)
-ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ – ಅಬ್ದುಲ್ ರಕೀಬ್ ಝಾಕೀರ್ (ಪುಲಿಕೇಶಿನಗರ)
ಜೆಡಿಎಸ್
-ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ – ಎಂ.ಮಹದೇವ (ಮಾರಪ್ಪನಪಾಳ್ಯ)
-ತೋಟಗಾರಿಗೆ ಸ್ಥಾಯಿ ಸಮಿತಿ – ಉಮ್ಮೇ ಸಲ್ಮಾ (ಕುಶಾಲನಗರ)
-ವಾರ್ಡ್ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ – ಇಮ್ರಾನ್ ಪಾಷಾ (ಪಾದರಾಯನಪುರ)
-ಶಿಕ್ಷಣ ಸ್ಥಾಯಿ ಸಮಿತಿ – ಗಂಗಮ್ಮ (ಶಕ್ತಿಗಣಪತಿನಗರ)
ಪಕ್ಷೇತರರು
-ಲೆಕ್ಕಪತ್ರ ಸ್ಥಾಯಿ ಸಮಿತಿ – ಎನ್.ರಮೇಶ್ (ಮಾರತಹಳ್ಳಿ)
-ಆರೋಗ್ಯ ಸ್ಥಾಯಿ ಸಮಿತಿ – ಮುಜಾಹಿದ್ ಪಾಷಾ (ಸಿದ್ದಾಪುರ)
-ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ – ಸಿ.ಆರ್.ಲಕ್ಷ್ಮೀನಾರಾಯಣ್ (ದೊಮ್ಮಲೂರು)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.