![rahul gandhi](https://www.udayavani.com/wp-content/uploads/2024/07/rahul-8-415x229.jpg)
ಫ್ಲೈಓವರ್ನಿಂದ ಕ್ಯಾಂಟರ್ ಬಿದ್ದು ನೂರಾರು ಕೋಳಿ ಸಾವು
Team Udayavani, Nov 18, 2017, 11:25 AM IST
![ypr-chicken.jpg](https://www.udayavani.com/wp-content/uploads/2017/11/18/ypr-chicken.jpg)
ಬೆಂಗಳೂರು: ಕೋಳಿಗಳನ್ನು ಕೊಂಡೊಯ್ಯುತ್ತಿದ್ದ ಕ್ಯಾಂಟರ್ ವಾಹನ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದು,ನೂರಾರು ಕೋಳಿಗಳು ಸಾವಿಗೀಡಾಗಿರುವ ಘಟನೆ ಯಶವಂತಪುರ ಫ್ಲೈಓವರ್ನಲ್ಲಿ ಶುಕ್ರವಾರ ನಡೆದಿದೆ.
ಚಾಲಕ ಶಬೀರ್, ಇಬ್ರಾಹಿಂ ಹಾಗೂ ಅಲ್ತಾಫ್ ಘಟನೆಯಲ್ಲಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಿಂದ ಗುರುವಾರ ರಾತ್ರಿ ಕ್ಯಾಂಟರ್ನಲ್ಲಿ ನೂರಾರು ಕೋಳಿಗಳನ್ನು ತುಂಬಿಸಿಕೊಂಡು ಬರುತ್ತಿದ್ದರು.
ಶುಕ್ರವಾರ ಮುಂಜಾನೆ ಯಶವಂತಪುರ ಮೇಲು ಸೇತುವೆ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕ್ಯಾಂಟರ್ ಕೆಳಗೆ ಬಿದ್ದಿದೆ. ಪರಿಣಾಮ ಮೂವರಿಗೆ ಗಾಯ, ನೂರಾರು ಕೋಳಿಗಳು ಸಾವನ್ನಪ್ಪಿವೆ. ಮುಂಜಾನೆ ವೇಳೆ ಘಟನೆ ಸಂಭವಿಸಿದ್ದರಿಂದ ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಒಂದೆಡೆ ಕೋಳಿಗಳು ಸಾವನ್ನಪ್ಪಿರುವ ಬಗ್ಗೆ ಮಾಲೀಕರು, ಕ್ಯಾಂಟರ್ ಚಾಲಕ ಆತಂಕಕ್ಕೊಳಗಾದರೆ, ಮತ್ತೂಂದೆಡೆ ಘಟನೆಯ ಲಾಭ ಪಡೆದುಕೊಂಡ ಸಾರ್ವಜನಿಕರು ಸತ್ತಿದ್ದ ಕೋಳಿಗಳನ್ನು ನಾ ಮುಂದು ತಾ ಮುಂದು ಎಂಬಂತೆ ಬ್ಯಾಗಿನಲ್ಲಿ ಹಾಕಿಕೊಂಡು ಮನೆಗೆ ಕೊಂಡೊಯ್ದಿದ್ದಾರೆ. ಘಟನೆ ಸಂಬಂಧ ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![rahul gandhi](https://www.udayavani.com/wp-content/uploads/2024/07/rahul-8-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![11-bng](https://www.udayavani.com/wp-content/uploads/2024/07/11-bng-150x90.jpg)
Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್
![10-bng](https://www.udayavani.com/wp-content/uploads/2024/07/10-bng-150x90.jpg)
Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![7-bng](https://www.udayavani.com/wp-content/uploads/2024/07/7-bng-150x90.jpg)
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
MUST WATCH
ಹೊಸ ಸೇರ್ಪಡೆ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-150x83.jpg)
Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![1](https://www.udayavani.com/wp-content/uploads/2024/07/1-5-150x90.jpg)
ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.