![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-415x234.jpg)
ಲತೋತ್ಸವ: ಮೊದಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಶಿರಸಿ ಹುಡುಗಿ
Team Udayavani, Nov 19, 2017, 5:56 PM IST
![latha-hegde.jpg](https://www.udayavani.com/wp-content/uploads/2017/11/19/latha-hegde.jpg)
ಲತಾ ಹೆಗಡೆ …. ಬಹುಶಃ ಇತ್ತೀಚಿನ ಒಂದೂವರೆ ವರ್ಷಗಳಿಂದ ಈ ಹೆಸರು ಚಿತ್ರರಂಗದಲ್ಲಿ ಓಡಾಡುತ್ತಲೇ ಇದೆ. ಅದರಲ್ಲೂ ಹೊಸ ಸಿನಿಮಾಗಳಿಗೆ ನಾಯಕಿ ಹುಡುಕಾಟದ ಸಮಯದಲ್ಲಿ ಈ ಹೆಸರು ಅದೆಷ್ಟು ಬಾರಿ ಕೇಳಿಬಂದಿತ್ತೋ ಲೆಕ್ಕವಿಲ್ಲ. ಆದರೆ, ಲತಾ ಹೆಗಡೆಯವರ ಯಾವ ಕನ್ನಡ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಈಗ ಲತಾ ಹೆಗಡೆಯ ಮೊದಲ ಕನ್ನಡ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ.
ಅದು “ಅತಿರಥ’. ಮಹೇಶ್ ಬಾಬು ನಿರ್ದೇಶನದ “ಅತಿರಥ’ ಚಿತ್ರಕ್ಕೆ ಲತಾ ಹೆಗಡೆ ನಾಯಕಿಯಾಗಿ ಆಯ್ಕೆಯಾದ ದಿನದಿಂದ ಬೇರೆ ಬೇರೆ ಸಿನಿಮಾಗಳಲ್ಲೂ ಲತಾ ಹೆಗಡೆಯ ಹೆಸರು ಕೇಳಿಬಂದಿತ್ತು. “ಆ ಸಿನಿಮಾ ಒಪ್ಪಿಕೊಂಡರಂತೆ, ಈ ಸಿನಿಮಾದ ಮಾತುಕತೆಯಾಗಿದೆಯಂತೆ’ ಎಂದು. ಆದರೆ, “ಅತಿರಥ’ ನಂತರ ಲತಾ ಒಪ್ಪಿದ್ದು, ಒಂದೇ ಒಂದು ಸಿನಿಮಾ ಅದು “ಅನಂತು ವರ್ಸಸ್ ನುಸ್ರತ್’.
ಈ ವಾರ ಲತಾ ಹೆಗಡೆಯ ಮೊದಲ ಕನ್ನಡ ಚಿತ್ರ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಒಂದೂವರೆ ವರ್ಷಗಳ ನಂತರ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ ಸಹಜವಾಗಿಯೇ ಲತಾ ಎಕ್ಸೈಟ್ ಆಗಿದ್ದಾರೆ. ಜೊತೆಗೆ ನಿರ್ದೇಶಕ ಮಹೇಶ್ ಬಾಬು ಅವರಿಂದ ಲಾಂಚ್ ಆದ ನಾಯಕಿಯರು ಚಿತ್ರರಂಗದಲ್ಲಿ ಬೆಳೆಯುತ್ತಾರೆಂಬ ಮಾತು ಕೂಡಾ ಚಾಲ್ತಿಯಲ್ಲಿರುವುದರಿಂದ ಈ ವಾರ ತಮ್ಮ ಅದೃಷ್ಟ ಪರೀಕ್ಷೆಗಾಗಿ ಎದುರು ನೋಡುತ್ತಿದ್ದಾರೆ.
“ಅತಿರಥ’ ಚಿತ್ರದಲ್ಲಿ “ಆ ದಿನಗಳು’ ಚೇತನ್ ನಾಯಕರಾಗಿದ್ದಾರೆ. ಅಂದಹಾಗೆ, ಲತಾ ಹೆಗಡೆ ಮೂಲತಃ ಶಿರಸಿಯವರು. ಆದರೆ ಅವರ ಕುಟುಂಬ ಲತಾ ಹೆಗಡೆ ಆರನೇ ಕ್ಲಾಸಿನಲ್ಲಿರುವಾಗ ನ್ಯೂಜಿಲೆಂಡ್ಗೆ ಶಿಫ್ಟ್ ಆಗಿದೆ. ಅಲ್ಲಿಗೆ ಲತಾ ಓದಿದ್ದು, ಬೆಳೆದಿದ್ದು ಎಲ್ಲವೂ ನ್ಯೂಜಿಲೆಂಡ್ನಲ್ಲಿ ಎಂದು ಪ್ರತ್ಯೇಕವಾಗಿ ಅಗತ್ಯವಿಲ್ಲ. ಲತಾ ಕುಟುಂಬ ವಿದೇಶದಲ್ಲಿದ್ದರೂ ಕನ್ನಡ ಪ್ರೀತಿ ಬಿಟ್ಟಿರಲಿಲ್ಲವಂತೆ. ಹಾಗಾಗಿಯೇ ಮನೆಯಲ್ಲಿ ಕನ್ನಡ ಮಾತನಾಡುತ್ತಾ, ಮಗಳಿಗೂ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ.
ಹಾಗಾಗಿಯೇ ನ್ಯೂಜಿಲೆಂಡ್ನಿಂದ ಬಂದ ಲತಾ ಸುಲಲಿತವಾಗಿ ಕನ್ನಡ ಮಾತನಾಡುತ್ತಾರೆ. ಜೊತೆಗೆ ಮಗಳು ಭಾರತಕ್ಕೆ ಹೋಗಬೇಕು, ಅಲ್ಲಿ ಏನಾದರೂ ಸಾಧನೆ ಮಾಡಬೇಕು. ಅದರಲ್ಲೂ ಕನ್ನಡ ನೆಲದಲ್ಲಿ ಆಕೆಯ ಸಾಧನೆಗೊಂದು ವೇದಿಕೆ ಸಿಗಬೇಕೆಂಬ ಆಸೆ ಇತ್ತಂತೆ. ಅದು ಈಗ ಈಡೇರಿದೆ. ಮೊದಲು ತೆಲುಗು, ತಮಿಳಿನಲ್ಲಿ ನಟಿಸಿದ ಲತಾ ಈಗ ಕನ್ನಡದಲ್ಲಿ ನಟಿಸಿದ್ದಾರೆ. ಈಗ ಎರಡನೇ ಸಿನಿಮಾ “ಅನಂತು ವರ್ಸಸ್ ನುಸ್ರತ್’ನಲ್ಲಿ ನುಸ್ರತ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-150x87.jpg)
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-150x84.jpg)
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
![Is Ashwin made a hasty decision: Is this how much Kohli is worth in the dressing room?](https://www.udayavani.com/wp-content/uploads/2024/12/ashwin-kogli-150x87.jpg)
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
![1-a-ct](https://www.udayavani.com/wp-content/uploads/2024/12/1-a-ct-150x89.jpg)
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
![10](https://www.udayavani.com/wp-content/uploads/2024/12/10-22-150x80.jpg)
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
![Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ](https://www.udayavani.com/wp-content/uploads/2024/12/k-1-1-150x80.jpg)
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.