ವ್ಯಸನ ತ್ಯಜಿಸಿ 103 ಮಂದಿ ನವಜೀವನಕ್ಕೆ ಪಾದಾರ್ಪಣೆ
Team Udayavani, Nov 24, 2017, 1:08 PM IST
ಕಲಘಟಗಿ: ರಾಜ್ಯಾದ್ಯಂತ ಮದ್ಯ ನಿಷೇಧಕ್ಕೆ ಹಕ್ಕೊತ್ತಾಯ ಮಾಡುತ್ತಿರುವುದು ಹಾಗೂ ಡಾ| ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಸಂಭ್ರಮದ ಸಂದರ್ಭದಲ್ಲಿ 103 ಮದ್ಯವ್ಯಸನಿಗಳು ನವಜೀವನಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಸಂತಸವಾಗಿದೆ ಎಂದು ಎಸ್ಡಿಎಂಇ ಸೊಸೈಟಿಯ ಕಾರ್ಯದರ್ಶಿ ಜೀವಂಧರ ಕುಮಾರ ಹೇಳಿದರು.
ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯಡಿ ಗುರುವಾರ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಯಂ ಸ್ಫೂ ರ್ತಿಯಿಂದ ಮದ್ಯವ್ಯಸನ ತ್ಯಜಿಸಿರುವ ತಾವು ಮುಂಬರುವ ದಿನಗಳಲ್ಲಿ ತುಂಬು ಕುಟುಂಬದ ಅಧಿಪತಿಗಳಾಗಿರಿ ಎಂದು ಶುಭ ನುಡಿದರು.
ಕ್ರೆಡಲ್ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ ಮಾತನಾಡಿ, ವ್ಯಸನಮುಕ್ತ ಸಮಾಜದಿಂದ ಸುಭದ್ರ ನಾಡನ್ನು ಕಟ್ಟಲು ಸಾಧ್ಯ. ಸರ್ಕಾರಗಳು ಮಾಡಬೇಕಾದ ಹತ್ತು ಹಲವು ಕಾರ್ಯಕ್ರಮಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಮದ್ಯವರ್ಜನ ಶಿಬಿರದಿಂದ ಸ್ಥಳೀಯ ಕುಟುಂಬಗಳಲ್ಲಿ ಆಶಾಕಿರಣ ಕಂಡುಬಂದಿರುವುದು ಶ್ಲಾಘನೀಯ ಕಾರ್ಯ ಎಂದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೂದಪ್ಪ ಹುರಕಡ್ಲಿ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ನಿರ್ದೇಶಕ ದಿನೇಶ ಎಮ್., ವಿವೇಕ ಹೋರಾಟ ಸಮಿತಿ ಅಧ್ಯಕ್ಷ ಆರ್. ರಾಜು, ಕಲ್ಯಾಣಕಿರಣ ಸೇವಾ ಸಂಸ್ಥೆ ಅಧ್ಯಕ್ಷ ಬಿ.ವೈ.ಪಾಟೀಲ ಮಾತನಾಡಿದರು.
ಜಿಪಂ ಸದಸ್ಯರಾದ ಈರವ್ವ ದಾಸನಕೊಪ್ಪ, ವಿದ್ಯಾ ಬಾವನವರ, ಕೆಎಂಎಫ್ ನಿರ್ದೇಶಕ ಯಲ್ಲಪ್ಪ ದಾಸನಕೊಪ್ಪ, ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ ಮುರಳ್ಳಿ, ಶಂಕರಗಿರಿ ಬಾವನವರ, ಡಾ| ಶ್ವೇತಾ, ಗಂಗಾಧರ ಗೌಳಿ, ಸಿ.ವಿ. ಅಣ್ಣಿಗೇರಿ, ಕೆ.ಬಿ. ಗುಡಿಹಾಳ, ಮಂಜುಳಾ ನಾಯ್ಕ,ತಿಮ್ಮಯ್ಯ ನಾಯ್ಕ, ದೇವೇಂದ್ರ ಕಾಗೆನ್ನವರ, ವಿದ್ಯಾಧರ, ಜಯಲಕ್ಷ್ಮೀ, ವೆಂಕಟೇಶ,
-ದೀಪಾ ದೈವಜ್ಞ, ನಿವೇದಿತಾ ಗೌಳಿ, ಗಾಯತ್ರಿ ದೈವಜ್ಞ, ಮಂಜುಳಾ ನೀಲಣ್ಣವರ, ಬಸವರಾಜ, ಆರೋಗ್ಯಮ್ಮ, ಸವಿತಾ, ಮಂಜುಳಾ, ಸಂಗೀತಾ, ಉಮಾ, ನೀಲಮ್ಮ, ಸುಮಾ, ಆರತಿ, ಜ್ಯೋತಿ ಹಾಗೂ ದ್ಯಾಮಣ್ಣ ಇತರರಿದ್ದರು. ಶಿಬಿರದ ಸಂಚಾಲಕ ಕೆ. ಕುಸುಮಾಧರ ನಿರೂಪಿಸಿದರು. ಮೇಲ್ವಿಚಾರಕ ಮುರಳೀಧರ ಸ್ವಾಗತಿಸಿದರು. ಪ್ರಭಾಕರ ನಾಯಕ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.