ಪ್ರತಿಷ್ಠೆಗಾಗಿ ಕೋರ್ಸ್‌ ಆಯ್ಕೆ ಸಲ್ಲ


Team Udayavani, Nov 25, 2017, 12:17 PM IST

h4-pratishte.jpg

ಹುಬ್ಬಳ್ಳಿ: ಸಾಧಿಸಬೇಕೆಂಬ ಛಲದಿಂದಲೇ ವೃತ್ತಿ ಅಥವಾ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ನಿರ್ಧಾರ ಮಾಡಬೇಕೇ ವಿನಃ ಕೇವಲ ಪ್ರತಿಷ್ಠೆಗಾಗಿ ಆಯ್ಕೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂದು ಕ್ಯಾ| ಸಿ.ಎಸ್‌. ಆನಂದ ಹೇಳಿದರು. 

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ದಕ್ಷಿಣ ಭಾರತ ಲೆಕ್ಕ ಪರಿಶೋಧಕ ವಿದ್ಯಾರ್ಥಿಗಳ ಸಂಘದ ಹುಬ್ಬಳ್ಳಿ ಶಾಖೆ ಆಶ್ರಯದಲ್ಲಿ ವಿದ್ಯಾನಗರದ ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ ದೇಶಪಾಂಡೆ ಫೌಂಡೇಶನ್‌ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಲೆಕ್ಕ ಪರಿಶೋಧಕ ವಿದ್ಯಾರ್ಥಿಗಳ ಸಮ್ಮೇಳನ “ಚೈತನ್ಯ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪುಸ್ತಕ ಜ್ಞಾನದೊಂದಿಗೆ ಸಾಮಾನ್ಯ ಜ್ಞಾನ ಹೊಂದಿರುವುದು ಅವಶ್ಯ ಎಂದು ತಿಳಿಸಿದರು. ಲೆಕ್ಕ ಪರಿಶೋಧಕ ಕೋರ್ಸ್‌ ಮ್ಯಾರಥಾನ್‌ ಇದ್ದಂತೆ. ಈ ಕೋರ್ಸ್‌ ಪರಿಪೂರ್ಣವಾಗಿ ಪೂರೈಸುತ್ತೇನೆ ಎಂಬ ಅರಿವಿನ ಕಿಚ್ಚು ಹೊತ್ತದಿದ್ದರೆ ಈ ಓಟದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ.

ಹೀಗಾಗಿ ಯಾವುದೇ ವೃತ್ತಿ ಅಥವಾ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಸಂಪೂರ್ಣ ಮಾಹಿತಿ ಪಡೆದು ಹಿರಿಯರೊಂದಿಗೆ ಚರ್ಚಿಸಿ ಒಂದಿಷ್ಟು ವಿಷಯ ಸಂಗ್ರಹಿಸಿ ನಿರ್ಧರಿಸುವುದು ಸೂಕ್ತ. ಪ್ರತಿಷ್ಠೆ ಅಥವಾ ಇನ್ನಾವುದೋ ಕಾರಣಕ್ಕೆ ಆಯ್ಕೆ ಮಾಡಿಕೊಂಡರೆ ಯಶಸ್ವಿಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. 

ವಿದ್ಯಾರ್ಥಿಗಳು ತಮ್ಮ ವಯಸ್ಸಿನಲ್ಲಿ ಗುರಿ ಸಾಧನೆಯೊಂದನ್ನು ಬಿಟ್ಟು ಬೇರೆ ಯಾವುದೇ ವಿಷಯ ಕುರಿತು ಚಿಂತಿಸಬಾರದು. ಪ್ರತಿಯೊಬ್ಬರೂ ಪ್ರಾಮಾಣಿಕ ಜೀವನ ನಡೆಸಬೇಕು, ಹಣವಂತರಾಗಬೇಕು, ಬುದ್ಧಿವಂತರಾಗಬೇಕು, ಆರೋಗ್ಯ  ವಂತಾಗಬೇಕು ಅಂದಾಗ ಮಾತ್ರ ರಾಷ್ಟ್ರ ಬಲಾಡ್ಯವಾಗಲು ಸಾಧ್ಯ.

ಸಾಧನೆಗೆ ಇರುವ ವಿಫ‌ುಲ ಅವಕಾಶಗಳನ್ನು ಬಳಸಿಕೊಳ್ಳಬೇಕು. ವೃತ್ತಿಯಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು. ಯಾವುದೇ ರೀತಿಯ ಒಪ್ಪಂದಗಳಿಗೆ ಒಳಗಾಗಿ ತತ್ವಾದರ್ಶಗಳನ್ನು ಬಲಿಕೊಡಬಾರದು ಎಂದರು. ಪ್ರಚೋದನಾ ಭಾಷಣ ಮಾಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಘಟನೆಗಳು ಹೆಚ್ಚಾಗುತ್ತಿವೆ.

ಮತ್ತೂಬ್ಬರಿಗೆ ಜೈಕಾರ ಹಾಕಿ, ಮತ್ತೂಬ್ಬರ ಜೀವನ ನಿರ್ಮಿಸಲು ಹೋರಾಡುವ ಬದಲು ತಮ್ಮ ಜೀವನ ಸುಭದ್ರವಾಗಿ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ತಮಗಷ್ಟೇ ಜೀವಿಸುವುದಕ್ಕಾಗಿ ಜನಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ತಮ್ಮನ್ನು ಸಾಕಿ, ಸಲುಹಿದ ತಂದೆ- ತಾಯಿಗಳನ್ನು ಸುಖವಾಗಿ ನೋಡಿಕೊಳ್ಳುವ, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ. ಲೆಕ್ಕ ಪರಿಶೋಧಕರ ಸಂಘದ ನಂದರಾಜಖಟಾವಕರ, ಉಪಾಧ್ಯಕ್ಷ ರಾಘವೇಂದ್ರ ಜೋಶಿ, ಲೆಕ್ಕಪರಿಶೋಧಕ ನಟರಾಜ್‌ ಮೂರಶಿಳ್ಳಿ, ಕಾರ್ತಿಕ ಶೆಟ್ಟಿ, ಕೆ.ವಿ.ದೇಶಪಾಂಡೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.