ಮ್ಯಾನೇಜ್ಮೆಂಟ್ ಶಿಕ್ಷಣ ಕೌಶಲ್ಯಾಧಾರಿತವಾಗಿರಲಿ
Team Udayavani, Nov 26, 2017, 12:35 PM IST
ಬೆಂಗಳೂರು: ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೈಗಾರಿಕೆಗಳ ಅವಶ್ಯಕತೆಗೆ ತಕ್ಕುದಾದ ಶಿಕ್ಷಣವನ್ನು ನಿರ್ವಹಣಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡುವಂತಾಗಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಹಾಗೂ ನಿರ್ವಹಣಾ ಶಾಸ್ತ್ರದ ಪ್ರಾದೇಶಿಕ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮ್ಯಾಟರ್ ಗ್ಲೋಬಲ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ನಿರ್ವಹಣಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡಬೇಕು. ನಿರ್ವಹಣಾ ಶಾಸ್ತ್ರದಲ್ಲಿ ಪರಿಣಾಮಕಾರಿ ಬೋಧನೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಂದ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ನಿರ್ವಹಣಾ ಶಾಸ್ತ್ರದ ಪಠ್ಯಕ್ರಮ ಇರಬೇಕು.
ಸಮಾಜ ಮತ್ತು ಸಮುದಾಯದ ಅಭಿವೃದ್ಧಿ ಯೋಜನೆಯ ಪ್ರಾಮುಖ್ಯತೆಯನ್ನು ಮ್ಯಾನೇಜ್ಮೆಂಟ್ ಶಿಕ್ಷಣದಿಂದ ತಿಳಿದುಬರುತ್ತದೆ ಎಂದು ಹೇಳಿದರು. ಬೆಂಗಳೂರು ಕೇಂದ್ರ ವಿವಿಯ ಕುಲಪತಿ ಪ್ರೊ. ಜಾಫೆಟ್, ಪ್ಯಾರಿಸ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ನ ವೂಲ್ಫ್ಗಂಗ್ ಸಿ. ಅಮನ್, ಸಿಎಂಆರ್ ವಿವಿಯ ಪ್ರೊ. ಶಿವ ಕೆ.ತ್ರಿಪಾಠಿ, ಸಿಬಿಎಸ್ಎಂಎಸ್ ನಿರ್ದೇಶಕ ಪ್ರೊ. ಕೆ.ಜನಾರ್ದನಮ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ
Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್
Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್ನಿಂದ 2ಲಕ್ಷ ದಂಡ
Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ
Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ
Tollywood: ‘ಪುಷ್ಪ-2ʼ ಐಟಂ ಸಾಂಗ್ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ
Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ
Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.