ಮೀಸಲಾತಿ ಎಂಬುದು ಭರವಸೆ


Team Udayavani, Nov 26, 2017, 12:39 PM IST

misalati.jpg

ಬೆಂಗಳೂರು: “ಬಹುತೇಕ ಎಲ್ಲ ಸಮುದಾಯಗಳು ಮೀಸಲಾತಿ ಇಲ್ಲದೆ ಪ್ರಗತಿ ಸಾಧ್ಯವಿಲ್ಲ ಎಂಬ ಮನಸ್ಥಿತಿಗೆ ತಲುಪುತ್ತಿವೆ. ಆದರೆ, ಮೀಸಲಾತಿಯೇ ಅಭಿವೃದ್ಧಿಯಲ್ಲ. ಅದೊಂದು ಭರವಸೆ ಅಷ್ಟೇ’ಎಂದು ಮಾಜಿ ಸಂಸದ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ಅಭಿಪ್ರಾಯಪಟ್ಟರು.

ಅರಮನೆ ಮೈದಾನದಲ್ಲಿ ಶನಿವಾರ ಎಸ್‌. ಬಂಗಾರಪ್ಪ ಪ್ರತಿಷ್ಠಾನ ಮತ್ತು ಎಸ್‌. ಬಂಗಾರಪ್ಪ ವಿಚಾರ ವೇದಿಕೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರ 85ನೇ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡು ಅವರು ಮತನಾಡಿದರು. 

ಒತ್ತಡದ ಶಿಕ್ಷಣ ವ್ಯವಸ್ಥೆಯಿಂದ ಪ್ರತಿಯೊಂದು ಜಾತಿ-ಸಮುದಾಯಗಳೂ ಮೀಸಲಾತಿಗೆ ಜೋತುಬೀಳುತ್ತಿವೆ. ಮೀಸಲಾತಿ ದೊರೆಯದಿದ್ದರೆ ಪ್ರಗತಿ ಸಾಧ್ಯವೇ ಇಲ್ಲ ಎಂಬ ಮನಸ್ಥಿತಿಗೆ ತಲುಪುತ್ತಿವೆ. ಆದ್ದರಿಂದ ಮೊದಲು ಶಿಕ್ಷಣ ವ್ಯವಸ್ಥೆ ಬದಲಾಗಿ “ಆಯ್ಕೆಯ ಶಿಕ್ಷಣ ವ್ಯವಸ್ಥೆ’ ಅಸ್ತಿತ್ವಕ್ಕೆ ಬರಬೇಕಿದೆ ಎಂದು ಹೇಳಿದರು. 

ಹಿಂದುಳಿದ ವರ್ಗದ ಒಬ್ಬ ಸಾಮಾನ್ಯ ವ್ಯಕ್ತಿಯಾಗಿದ್ದ ಬಂಗಾರಪ್ಪ ಒಂದು ರಾಜ್ಯದ ಅತ್ಯುನ್ನತ ಹುದ್ದೆಗೆ ಏರಲು ಹಾಗೂ ತನ್ನದೇ ಆದ ದೂರದೃಷ್ಟಿ ಹೊಂದಲು ಸಾಧ್ಯವಾಗಿದ್ದು ಸಂವಿಧಾನದ ಕೊಡುಗೆ. ಇಲ್ಲದಿದ್ದರೆ, ನಮಗೆ ಬಂಗಾರಪ್ಪ ಸೇರಿದಂತೆ ನಾವ್ಯಾರೂ ಇರುತ್ತಿರಲಿಲ್ಲ. ಈ ಸಂವಿಧಾನವನ್ನು ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ತಿಳಿಸಿದರು. 

ಇನ್‌ವೆಸ್ಟ್‌ ರಾಜಕಾರಣ: ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಮಾತನಾಡಿ, ಹಿಂದೆ ಎಲ್ಲರನ್ನೂ ಒಳಗೊಂಡ “ಇನ್‌ಕ್ಲೂéಸಿವ್‌ ರಾಜಕಾರಣ’ ಇತ್ತು. ಆದರೆ, ಇಂದು “ಇನ್‌ವೆಸ್ಟ್‌ ರಾಜಕಾರಣ’ ಚಾಲ್ತಿಯಲ್ಲಿದೆ. ಈ ಇನ್‌ವೆಸ್ಟ್‌ ರಾಜಕಾರಣವು ಎಲ್ಲ ಕ್ಷೇತ್ರವನ್ನೂ ವಾಣಿಜ್ಯೀಕರಣಗೊಳಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ವೇಳೆ ರಂಗಕರ್ಮಿ ಪ್ರಸನ್ನ ಅವರಿಗೆ “ರಂಗ ಬಂಗಾರ’ ಮತ್ತು ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ “ಜಾನಪದ ಬಂಗಾರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಟ ಶಿವರಾಜ್‌ಕುಮಾರ್‌, ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್‌. ತಿಲಕ್‌ಕುಮಾರ್‌, ಪ್ರತಿಷ್ಠಾನದ ಅಧ್ಯಕ್ಷ ಎಸ್‌. ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು. 

ಹಟ-ಚಟಗಾರರು!: ಎಸ್‌. ಬಂಗಾರಪ್ಪ ಹಟಗಾರ ಮತ್ತು ಜೆ.ಎಚ್‌. ಪಟೇಲ್‌ ಚಟಗಾರ. ಈ ಹಟ-ಚಟಗಳ ಮಿಶ್ರಣ ಬಿ.ಎಸ್‌.ಯಡಿಯೂರಪ್ಪ! ಅವಿಭಜಿತ ಶಿವಮೊಗ್ಗ ಜಿಲ್ಲೆಯ ಮಾಜಿ ಮುಖ್ಯಮಂತ್ರಿಗಳ ಕುರಿತು ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರ ವಿಶ್ಲೇಷಣೆ ಇದು. ಬಂಗಾರಪ್ಪ ಅವರ ಜಯಂತ್ಯೋತ್ಸವದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಎಚ್‌. ವಿಶ್ವನಾಥ್‌, “ರಾಜ್ಯಕ್ಕೆ ಶಿವಮೊಗ್ಗ ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿದೆ. ಆ ಪೈಕಿ ಕಡಿದಾಳು ಮಂಜಪ್ಪ ಮದರ್‌ ತೆರೆಸಾ ಇದ್ದಂತೆ. ಉಳಿದ ಮೂವರಲ್ಲಿ ಬಂಗಾರಪ್ಪ ಹಟಗಾರ. ಪಟೇಲ್‌ ಚಟಗಾರ. ಈ ಹಟ-ಚಟಗಳ ಮಿಶ್ರಣ ಯಡಿಯೂರಪ್ಪ’ ಎಂದು ಬಣ್ಣಿಸಿದರು.  

ಬಡವರ ಸುಲಿಗೆ ಮಾಡುವ ತೆರಿಗೆ ಬೇಡ: ಸಮಾನ ತೆರಿಗೆ ಹೆಸರಿನಲ್ಲಿ ಬಡವರ ಸುಲಿಗೆ ಮಾಡಲಾಗುತ್ತಿದೆ. ಸಮಾನತೆ ಮತ್ತು ಸಮಾಜವಾದ ಮಾತನಾಡುವವರು ಕೈ ಉತ್ಪಾದಕರಿಗೆ ತೆರಿಗೆ ವಿನಾಯ್ತಿ ನೀಡಬೇಕು ಎಂದು ರಂಗಕರ್ಮಿ ಪ್ರಸನ್ನ ಆಗ್ರಹಿಸಿದರು.

“ಜನಸಾಮಾನ್ಯರು ಮತ್ತು ತೆರಿಗೆ ನೀತಿ’ ಕುರಿತ ಚಿಂತನದಲ್ಲಿ ಮಾತನಾಡಿ, ಸಮಾಜವಾದ ಎಂದು ಹೇಳುವುದೇ ಆದಲ್ಲಿ, ಸರಕು ಸೇವಾ ತೆರಿಗೆ (ಜಿಎಸ್‌ಟಿ) ಸರಿಪಡಿಸಬೇಕು. ಬಡವರನ್ನು ಸುಲಿಗೆ ಮಾಡಿ ಅರಮನೆಯಲ್ಲಿ ಬದುಕಬಾರದು ಎಂದು ತೀಕ್ಷ್ಣವಾಗಿ ಹೇಳಿದ ಅವರು, ಕೈಮಗ್ಗ ಸೇರಿದಂತೆ ಕೈ ಉತ್ಪಾದಕರಿಗೆ ತೆರಿಗೆ ವಿನಾಯ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಸ್ಮಾರ್ಟ್‌ ಸಿಟಿ ಮತ್ತು ನಗರ ಸಂಸ್ಕೃತಿ ಅವಾಂತರಗಳಲ್ಲಿ ಗ್ರಾಮ ಸಂಸ್ಕೃತಿಯನ್ನು ಸಂಕೇತಗಳಿಗೆ ಸೀಮಿತಗೊಳಿಸಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ ಪ್ರಸನ್ನ, ಕನ್ನಡಿಗರು ಅಭಿಮಾನ ಶೂನ್ಯರಲ್ಲ. ನಮ್ಮ ಸಂಸ್ಕೃತಿ-ಪರಂಪರೆ ಬಗ್ಗೆ ಗೌರವ ಸಲ್ಲಿಸುವುದು ನಮಗೆ ಗೊತ್ತಿದೆ.

ಆದರೆ, ದುರಂತವೆಂದರೆ, ಎಲ್ಲವನ್ನೂ ಸಾಂಕೇತಿಕಗೊಳಿಸುವ ಪ್ರವೃತ್ತಿ ಶುರುವಾಗಿಬಿಟ್ಟಿದೆ. ಸುಕ್ರಿ ಬೊಮ್ಮಗೌಡ ಅವರಂತಹ ಅನೇಕ ಕಲಾವಿದರು ಹಳ್ಳಿ-ಹಳ್ಳಿಗಳಲ್ಲಿ ಇದ್ದಾರೆ. ಆದರೆ, ಅವರನ್ನು ನಾವು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅವರ ಗಾಯನವನ್ನು ನಾವು ಹೊಸಕಿಹಾಕಿ, ಸಂಕೇತಕ್ಕೆ ಆ ಕಲೆಯನ್ನು ಸೀಮಿತಗೊಳಿಸುತ್ತಿದ್ದೇವೆ ಎಂದು ಸೂಚ್ಯವಾಗಿ ಹೇಳಿದರು.

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.