ಆ್ಯಪೆರಲ್‌ ಪಾರ್ಕ್‌ ಪ್ರಸ್ತಾವಕ್ಕೆ ಮರುಜೀವ ಅವಶ್ಯ


Team Udayavani, Nov 26, 2017, 12:49 PM IST

26-Nov-10.jpg

ಮಹಾನಗರ: ಕೃಷಿ, ಹಂಚು, ಬೀಡಿ ಮತ್ತು ಮೀನುಗಾರಿಕೆ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಧರ ವೃತ್ತಿ ಕ್ಷೇತ್ರಗಳು. ಇದರಲ್ಲಿ ಹಂಚು ಕಣ್ಮರೆಯ ಅಂಚಿನಲ್ಲಿದೆ. ಕೃಷಿಯ ಹಿನ್ನಡೆಯ ಹಾದಿಯಲ್ಲಿದೆ. ಬೀಡಿ ಆರೋಗ್ಯಕ್ಕೆ ಹಾನಿಕರ ಎಂಬ ನೆಲೆಯಲ್ಲಿ ಬಹುತೇಕ ನಿಷೇಧದ ಹಾದಿಯಲ್ಲಿದ್ದು ಇದನ್ನೇ ಅವಲಂಬಿತವಾಗಿರುವ ಕಾರ್ಮಿಕರ ಬದುಕು ಸಂಕಷ್ಟದಲ್ಲಿದೆ. ಮೀನುಗಾರಿಕೆಯ ಸ್ಥಿತಿಯೂ ಉತ್ತಮವಾಗಿಲ್ಲ. ಈ ಹಂತದಲ್ಲಿ ಈ ಕ್ಷೇತ್ರಗಳನ್ನು ಅವಲಂಬಿಸಿಕೊಂಡಿರುವ ಜನರಿಗೆ ಪರ್ಯಾಯ ಉದ್ಯೋಗ ಮೂಲವೊಂದು ಸೃಷ್ಟಿಯಾಗಬೇಕಾಗಿದೆ.

ಬೀಡಿ ಉದ್ಯಮದಲ್ಲಿ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಉದ್ಯಮ ಅನಿಶ್ಚಿತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದು, ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಪರ್ಯಾಯವಾಗಬಲ್ಲ ಕ್ಷೇತ್ರಗಳೆಂದರೆ ಸಿದ್ಧ ಉಡುಪುಗಳು ಹಾಗೂ ಆಹಾರ ಸಂಸ್ಕರಣೆ ಉದ್ಯಮ ಕ್ಷೇತ್ರ.

ಬೆಂಗಳೂರಿನಲ್ಲಿ ಸಿದ್ಧ ಉಡುಪು, ಬ್ಯಾಗ್‌ ತಯಾರಿ ಉದ್ಯಮ ಬಹುದೊಡ್ಡ ಉದ್ಯೋಗಾವಕಾಶನ್ನು ಒದಗಿಸುತ್ತಿರುವ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಮುಖ್ಯವಾಗಿ ಲಕ್ಷಾಂತರ ಮಂದಿ ಮಹಿಳಾ ಉದ್ಯೋಗಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಮಾದರಿಯಲ್ಲಿ ಮಂಗಳೂರಿನಲ್ಲೂ ವಸ್ತ್ರೋದ್ಯಮ ಸಂಬಂಧಿತ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಬೀಡಿಕಾರ್ಮಿಕರಿಗೆ ಪರ್ಯಾಯ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಸಾಧ್ಯವಿದೆ.ಇದರ ಜತೆಗೆ ದ.ಕನ್ನಡ ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆ ಉದ್ಯಮದ ಮೂಲಕವೂ ಒಂದಷ್ಟು ಪರ್ಯಾಯ ಉದ್ಯೋಗಗಳನ್ನು ಕಲ್ಪಿಸಲು ಅವಕಾಶವಿದೆ.

ಬೆಂಗಳೂರು: 5ಲಕ್ಷ ಮಂದಿಗೆ ಉದ್ಯೋಗ
ಬೆಂಗಳೂರಿನಲ್ಲಿ ಸುಮಾರು 1,200ಕ್ಕೂ ಅಧಿಕ ಸಿದ್ಧ ಉಡುಪು ಕಾರ್ಖಾನೆಗಳು ಕಾರ್ಯಾಚರಿಸುತ್ತಿವೆ. 5 ಲಕ್ಷ ಮಂದಿ ಉದ್ಯೋಗದಲ್ಲಿದ್ದಾರೆ. ಅಮೆರಿಕ, ಯುರೋಪ್‌, ಮಧ್ಯಪ್ರಾಚ್ಯ ದೇಶಗಳು, ಕೆನಡಾ, ಆಫ್ರಿಕಾ, ಹಾಂಗ್‌ಕಾಂಗ್‌, ಸಿಂಗಾಪೂರ, ಆಸ್ಟ್ರೇಲಿಯಾ ಮುಂತಾದ ದೇಶಗಳಿಗೆ ಬೆಂಗಳೂರಿನಿಂದ ಸಿದ್ಧ ಉಡುಪುಗಳು, ಜವುಳಿ ಉತ್ಪನ್ನಗಳು ರಫ್ತಾಗುತ್ತಿವೆ. 

ಪಾರ್ಕ್‌ ಪ್ರಸ್ತಾವನೆಯಲ್ಲಿತ್ತು
ಮಂಗಳೂರಿನಲ್ಲಿ ಆ್ಯಪೆರಾಲ್‌ ಪಾರ್ಕ್‌ ಸ್ಥಾಪನೆಯ ಪ್ರಸ್ತಾವನೆ ಹಿಂದೊಮ್ಮೆ ಕೇಳಿಬಂದಿತ್ತು. ಮುಡಿಪು ಬಳಿಯ ಕೆನರಾ ಕೈಗಾರಿಕಾಭಿವೃದ್ದಿ ಪ್ರದೇಶದಲ್ಲಿ ರಾಜ್ಯ ಜವುಳಿ ಇಲಾಖೆಯಿಂದ ಆ್ಯಪೆರಾಲ್‌ ಪಾರ್ಕ್‌ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಬೀಡಿ ಉದ್ಯಮಕ್ಕೆ ಪರ್ಯಾಯವಾಗಿ ಉದ್ಯೋಗಾವಕಾಶಗಳ ಸೃಷ್ಠಿ ಇದರ ಉದ್ದೇಶವಾಗಿತ್ತು. ಆದರೆ ಮುಂದಕ್ಕೆ ಈ ಪ್ರಸ್ತಾವನೆಯನ್ನು ಕಾರ್ಯರೂಪಕ್ಕಿಳಿಸುವ ನಿಟ್ಟಿನಲ್ಲಿ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ.

ಪೂರಕ ಅನುಕೂಲತೆಗಳು
ಮಂಗಳೂರು ಸಿದ್ಧ ಉಡುಪುಗಳ ಉದ್ಯಮಕ್ಕೆ ಪೂರಕವಾಗಿದೆ.

ಮುಡಿಪು ಬಳಿಯ ಕೆನರಾ ಕೈಗಾರಿಕಾಭಿವೃದ್ದಿ ಪ್ರದೇಶದಲ್ಲಿ ಸುಮಾರು 80 ಎಕ್ರೆ ಖಾಲಿ ಇದ್ದು ವಸ್ತ್ರೋದ್ಯಮ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳಿಗೆ ಅನುಕೂಲವಾಗಿದೆ. ರಾಜ್ಯ ಜವಳಿ ಇಲಾಖೆ ಕೂಡಾ ಇಲ್ಲಿಯೇ ಆ್ಯಪೆರಾಲ್‌ ಪಾರ್ಕ್‌ ಸ್ಥಾಪನೆಗೆ ಉದ್ದೇಶಿಸಿತ್ತು. ಗಂಜಿಮಠದ ರಫ್ತು ಉತ್ತೇಜನ ಹೂಡಿಕೆ ಪಾರ್ಕ್‌ನಲ್ಲಿ ( ಇಪಿಐಪಿ) 158 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಕೆಲವು ಉದ್ಯಮಗಳು ಮಾತ್ರ ಸ್ಥಾಪನೆಯಾಗಿವೆ.

ಮಂಗಳೂರಿನಲ್ಲಿ ಸುಸಜ್ಜಿತವಾದ ಸರ್ವಋತು ಬಂದರು ಇದೆ. ದೇಶದ ಪ್ರಮುಖ ಬಂದರುಗಳಲ್ಲೊಂದಾಗಿ ಗುರುತಿಸಿಕೊಂಡಿರುವ ನವಮಂಗಳೂರು ಬಂದರು ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಿಂದ ರಫ್ತು ಮತ್ತು ಆಮದು ವ್ಯವಹಾರಗಳು ನಡೆಯುತ್ತಿವೆ. ಅದುದರಿಂದ ಮಂಗಳೂರಿನಲ್ಲಿ ಸಿದ್ಧಗೊಳ್ಳುವ ಸಿದ್ದ ಉಡುಪುಗಳು ಹಾಗೂ ಜವುಳಿ ಉತ್ಪನ್ನಗಳ ರಫ್ತುಗೆ ಇದು ಸಹಕಾರಿಯಾಗಿದೆ.

ಸ್ಟಾರ್ಟ್‌ಅಪ್‌ಗ್ಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ವಿಶೇಷ ಉತ್ತೇಜನ ಹಾಗೂ ಸೌಲಭ್ಯಗಳು ದೊರೆಯುತ್ತಿರುವುದು ಜವುಳಿ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಕಡೆ ರಾಜ್ಯ ಹಾಗೂ ಕೇಂದ್ರ ಸರಕಾರದ ವತಿಯಿಂದ ಕೌಶಲ ಅಭಿವೃದ್ಧಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ.

ಉದ್ಯಮ ಸ್ಥಾಪಿಸಬೇಕು
ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಿದ್ಧ ಉಡುಪು ಉದ್ಯಮಗಳನ್ನು ಸ್ಥಾಪಿಸಬೇಕು ಎಂದು ನಾನು ಈಗಾಗಲೇ ವಿಧಾನಪರಿಷತ್‌ನಲ್ಲಿ ಸರಕಾರದ ಗಮನ ಸೆಳೆದಿದ್ದೇನೆ. ಪ್ರತಿಯೊಂದು ತಾಲೂಕಿನಲ್ಲಿ ವಸ್ತ್ರ ಉದ್ಯಮಗಳನ್ನು ಸ್ಥಾಪಿಸಿ ಕನಿಷ್ಠ 5 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಸಾಧ್ಯತೆಗಳನ್ನು ಸರಕಾರದ ಮುಂದಿರಿಸಿದ್ದೇನೆ. ದ.ಕ., ಉಡುಪಿ ಸಹಿತ ಕರಾವಳಿ ಜಿಲ್ಲೆಗಳು, ಮೈಸೂರು ಹಾಗೂ ದಾವಣೆಗೆರೆ ಜಿಲ್ಲೆಗಳಲ್ಲಿ ಜವುಳಿ ಪಾರ್ಕ್‌ಗಳ ಸ್ಥಾಪನೆ ಕುರಿತು ಈಗಾಗಲೇ ಪರಿಶೀಲನೆಗೆ ಜವುಳಿ ಇಲಾಖೆಯ ಸಮಿತಿ ಅಧ್ಯಯನ ನಡೆಸುತ್ತಿದ್ದು, ಇನ್ನೆರಡು ತಿಂಗಳೊಳಗೆ ವರದಿ ಮಂಡನೆಯಾಗಲಿದೆ.
 – ಐವನ್‌ ಡಿ’ಸೋಜಾ
   ವಿಧಾನಪರಿಷತ್‌ ಮುಖ್ಯಸಚೇತಕ

    ಕೇಶವ ಕುಂದರ್‌

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.